<p><strong>ಬೆಂಗಳೂರು</strong>: ವಿಶ್ವ ಪಾರ್ಶ್ವವಾಯು ದಿನದ ಪ್ರಯುಕ್ತ ನಾರಾಯಣ ಹೆಲ್ತ್ ಪಾರ್ಶ್ವವಾಯು ಸಮಸ್ಯೆಗೆ ಸಂಬಂಧಿಸಿದಂತೆ ಉಚಿತ ತಪಾಸಣಾ ಶಿಬಿರವನ್ನು ಶುಕ್ರವಾರ ತನ್ನ ಕೇಂದ್ರಗಳಲ್ಲಿ ಹಮ್ಮಿಕೊಂಡಿದೆ.</p>.<p>ಪಾರ್ಶ್ವವಾಯು ಸಂಭವಿಸಿದಾಗ, ಮಿದುಳಿಗೆ ಅಗತ್ಯವಾದ ರಕ್ತ ಪೂರೈಕೆ ಸ್ಥಗಿತಗೊಳ್ಳುತ್ತದೆ. ಇದರಿಂದ ಮಿದುಳಿಗೆ ಹಾನಿಯಾಗಿ ಅಂಗವೈಕಲ್ಯ ಅಥವಾ ಸಾವಿಗೆ ಕಾರಣವಾಗಬಹುದು. ಇದರ ಮಾರಕ ಪರಿಣಾಮಗಳನ್ನು ತಪ್ಪಿಸಲು ಪ್ರಾರಂಭಿಕ ಹಂತದಲ್ಲಿಯೇ ಲಕ್ಷಣಗಳನ್ನು ಗುರುತಿಸಿ, ಚಿಕಿತ್ಸೆ ಒದಗಿಸಬೇಕಾಗುತ್ತದೆ. ಬೆಳಿಗ್ಗೆ 7ರಿಂದ ಸಂಜೆ 8 ಗಂಟೆಯವರೆಗೆ ನಡೆಯುವ ಶಿಬಿರದಲ್ಲಿ ತಜ್ಞ ವೈದ್ಯರು ಲಭ್ಯವಿರುತ್ತಾರೆ ಎಂದು ಆಸ್ಪತ್ರೆ ತಿಳಿಸಿದೆ.</p>.<p>ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ, ಲ್ಯಾಂಗ್ಫೋರ್ಡ್ ಟೌನ್ನ ನಾರಾಯಣ ಮೆಡಿಕಲ್ ಸೆಂಟರ್, ಎಚ್ಎಸ್ಆರ್. ಬಡಾವಣೆಯ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಜಯನಗರ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಎಚ್ಎಸ್ಆರ್ ಬಡಾವಣೆ ಹಾಗೂ ಹೊಸೂರಿನ ನಾರಾಯಣಮಲ್ಟಿಸ್ಪೆಷಾಲಿಟಿ ಕ್ಲಿನಿಕ್ಗಳಲ್ಲಿ ತಪಾಸಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಶ್ವ ಪಾರ್ಶ್ವವಾಯು ದಿನದ ಪ್ರಯುಕ್ತ ನಾರಾಯಣ ಹೆಲ್ತ್ ಪಾರ್ಶ್ವವಾಯು ಸಮಸ್ಯೆಗೆ ಸಂಬಂಧಿಸಿದಂತೆ ಉಚಿತ ತಪಾಸಣಾ ಶಿಬಿರವನ್ನು ಶುಕ್ರವಾರ ತನ್ನ ಕೇಂದ್ರಗಳಲ್ಲಿ ಹಮ್ಮಿಕೊಂಡಿದೆ.</p>.<p>ಪಾರ್ಶ್ವವಾಯು ಸಂಭವಿಸಿದಾಗ, ಮಿದುಳಿಗೆ ಅಗತ್ಯವಾದ ರಕ್ತ ಪೂರೈಕೆ ಸ್ಥಗಿತಗೊಳ್ಳುತ್ತದೆ. ಇದರಿಂದ ಮಿದುಳಿಗೆ ಹಾನಿಯಾಗಿ ಅಂಗವೈಕಲ್ಯ ಅಥವಾ ಸಾವಿಗೆ ಕಾರಣವಾಗಬಹುದು. ಇದರ ಮಾರಕ ಪರಿಣಾಮಗಳನ್ನು ತಪ್ಪಿಸಲು ಪ್ರಾರಂಭಿಕ ಹಂತದಲ್ಲಿಯೇ ಲಕ್ಷಣಗಳನ್ನು ಗುರುತಿಸಿ, ಚಿಕಿತ್ಸೆ ಒದಗಿಸಬೇಕಾಗುತ್ತದೆ. ಬೆಳಿಗ್ಗೆ 7ರಿಂದ ಸಂಜೆ 8 ಗಂಟೆಯವರೆಗೆ ನಡೆಯುವ ಶಿಬಿರದಲ್ಲಿ ತಜ್ಞ ವೈದ್ಯರು ಲಭ್ಯವಿರುತ್ತಾರೆ ಎಂದು ಆಸ್ಪತ್ರೆ ತಿಳಿಸಿದೆ.</p>.<p>ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ, ಲ್ಯಾಂಗ್ಫೋರ್ಡ್ ಟೌನ್ನ ನಾರಾಯಣ ಮೆಡಿಕಲ್ ಸೆಂಟರ್, ಎಚ್ಎಸ್ಆರ್. ಬಡಾವಣೆಯ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಜಯನಗರ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಎಚ್ಎಸ್ಆರ್ ಬಡಾವಣೆ ಹಾಗೂ ಹೊಸೂರಿನ ನಾರಾಯಣಮಲ್ಟಿಸ್ಪೆಷಾಲಿಟಿ ಕ್ಲಿನಿಕ್ಗಳಲ್ಲಿ ತಪಾಸಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>