<p><strong>ಬೆಂಗಳೂರು</strong>: ‘ಕೊರೊನಾ ಸೋಂಕು ಕಾರಣದಿಂದ ಕಷ್ಟಕ್ಕೆ ಸಿಲುಕಿರುವ ಭಾರತ ಆರ್ಥಿಕವಾಗಿ ಮೇಲೆ ಬರಬೇಕಿದ್ದರೆ ತಲಾ ಜಿಡಿಪಿ ಹೆಚ್ಚಳ ಆಗಲೇಬೇಕು’ ಎಂದುಇನ್ಫೊಸಿಸ್ ಸಹ ಸ್ಥಾಪಕ ಎನ್. ಆರ್. ನಾರಾಯಣಮೂರ್ತಿ ಅಭಿಪ್ರಾಯಪಟ್ಟರು.</p>.<p>ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆಯೋಜಿಸಿದ್ದ ಆನ್ಲೈನ್ ಡೈಲಾಗ್ ಕೆಫೆಯಲ್ಲಿ ಮಾತನಾಡಿದ ಅವರು, ‘ನಮ್ಮ ದೇಶದಲ್ಲೂ ಜಿಡಿಪಿ ಹೆಚ್ಚಳ ಆಗಬೇಕೆಂದರೆಯುವ ಸಮೂಹ ಕಠಿಣ ಪರಿಶ್ರಮ ವಹಿಸುವ ಅಗತ್ಯವಿದೆ’ ಎಂದರು.</p>.<p>‘ಕೊರೊನಾ ಸೋಂಕಿನ ಕಾರಣಕ್ಕೆ ಡಿಜಿಟಲ್ ಸೇವೆಯನ್ನು ಜನರು ಹೆಚ್ಚು ಅವಲಂಬಿಸುತ್ತಿದ್ದಾರೆ. ಇನ್ನಷ್ಟು ಸೇವೆ ಆನ್ಲೈನ್ನಲ್ಲೇ ಲಭ್ಯವಾಗುವಂತೆ ಮಾಡುವ ಜವಾಬ್ದಾರಿಯೂ ಯುವಜನರ ಮೇಲಿದೆ. ಕೃಷಿ, ಕೈಗಾರಿಕೆ, ಶಿಕ್ಷಣ ಕ್ಷೇತ್ರಕ್ಕೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಇನ್ನಷ್ಟು ಕೊಡುಗೆಗಳನ್ನು ನೀಡಬೇಕು’ ಎಂದು ಹೇಳಿದರು.</p>.<p>‘ಆನ್ಲೈನ್ನಲ್ಲಿ ವಸ್ತುಗಳನ್ನು ಖರೀದಿ ಮಾಡುವುದು ಹೇಗೆ, ವೈದ್ಯರನ್ನು ಸಂಪರ್ಕ ಮಾಡುವುದು ಹೇಗೆ, ಟೆಲಿಮೆಡಿಸಿನ್ ಸೌಲಭ್ಯ ಪಡೆದುಕೊಳ್ಳುವ ಬಗ್ಗೆ ಗ್ರಾಮೀಣ ಮತ್ತು ಸಣ್ಣ ನಗರಗಳ ಹಿರಿಯರಿಗೆ ತಿಳಿವಳಿಕೆ ಕೊರತೆ ಇರುತ್ತದೆ. ತಿಳಿಸಿಕೊಡುವ ಕೆಲಸವನ್ನು ಯುವಕರು ಮಾಡಬೇಕು’ ಎಂದರು.</p>.<p>‘ಕೊರೊನಾ ಸೋಂಕಿನಿಂದ ದೇಶವನ್ನು ಪಾರು ಮಾಡಲು ಸರ್ಕಾರ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಅವುಗಳನ್ನು ಜನ ಚಾಚೂ ತಪ್ಪದೆ ಪಾಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಮಾತನಾಡಿ, ‘ನಾರಾಯಣಮೂರ್ತಿ ಅವರೂ ನಾಲ್ಕು ವರ್ಷಗಳ ಕಾಲ ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಇದ್ದರು ಎಂಬುದು ಹೆಮ್ಮೆಯ ವಿಷಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೊರೊನಾ ಸೋಂಕು ಕಾರಣದಿಂದ ಕಷ್ಟಕ್ಕೆ ಸಿಲುಕಿರುವ ಭಾರತ ಆರ್ಥಿಕವಾಗಿ ಮೇಲೆ ಬರಬೇಕಿದ್ದರೆ ತಲಾ ಜಿಡಿಪಿ ಹೆಚ್ಚಳ ಆಗಲೇಬೇಕು’ ಎಂದುಇನ್ಫೊಸಿಸ್ ಸಹ ಸ್ಥಾಪಕ ಎನ್. ಆರ್. ನಾರಾಯಣಮೂರ್ತಿ ಅಭಿಪ್ರಾಯಪಟ್ಟರು.</p>.<p>ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆಯೋಜಿಸಿದ್ದ ಆನ್ಲೈನ್ ಡೈಲಾಗ್ ಕೆಫೆಯಲ್ಲಿ ಮಾತನಾಡಿದ ಅವರು, ‘ನಮ್ಮ ದೇಶದಲ್ಲೂ ಜಿಡಿಪಿ ಹೆಚ್ಚಳ ಆಗಬೇಕೆಂದರೆಯುವ ಸಮೂಹ ಕಠಿಣ ಪರಿಶ್ರಮ ವಹಿಸುವ ಅಗತ್ಯವಿದೆ’ ಎಂದರು.</p>.<p>‘ಕೊರೊನಾ ಸೋಂಕಿನ ಕಾರಣಕ್ಕೆ ಡಿಜಿಟಲ್ ಸೇವೆಯನ್ನು ಜನರು ಹೆಚ್ಚು ಅವಲಂಬಿಸುತ್ತಿದ್ದಾರೆ. ಇನ್ನಷ್ಟು ಸೇವೆ ಆನ್ಲೈನ್ನಲ್ಲೇ ಲಭ್ಯವಾಗುವಂತೆ ಮಾಡುವ ಜವಾಬ್ದಾರಿಯೂ ಯುವಜನರ ಮೇಲಿದೆ. ಕೃಷಿ, ಕೈಗಾರಿಕೆ, ಶಿಕ್ಷಣ ಕ್ಷೇತ್ರಕ್ಕೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಇನ್ನಷ್ಟು ಕೊಡುಗೆಗಳನ್ನು ನೀಡಬೇಕು’ ಎಂದು ಹೇಳಿದರು.</p>.<p>‘ಆನ್ಲೈನ್ನಲ್ಲಿ ವಸ್ತುಗಳನ್ನು ಖರೀದಿ ಮಾಡುವುದು ಹೇಗೆ, ವೈದ್ಯರನ್ನು ಸಂಪರ್ಕ ಮಾಡುವುದು ಹೇಗೆ, ಟೆಲಿಮೆಡಿಸಿನ್ ಸೌಲಭ್ಯ ಪಡೆದುಕೊಳ್ಳುವ ಬಗ್ಗೆ ಗ್ರಾಮೀಣ ಮತ್ತು ಸಣ್ಣ ನಗರಗಳ ಹಿರಿಯರಿಗೆ ತಿಳಿವಳಿಕೆ ಕೊರತೆ ಇರುತ್ತದೆ. ತಿಳಿಸಿಕೊಡುವ ಕೆಲಸವನ್ನು ಯುವಕರು ಮಾಡಬೇಕು’ ಎಂದರು.</p>.<p>‘ಕೊರೊನಾ ಸೋಂಕಿನಿಂದ ದೇಶವನ್ನು ಪಾರು ಮಾಡಲು ಸರ್ಕಾರ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಅವುಗಳನ್ನು ಜನ ಚಾಚೂ ತಪ್ಪದೆ ಪಾಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಮಾತನಾಡಿ, ‘ನಾರಾಯಣಮೂರ್ತಿ ಅವರೂ ನಾಲ್ಕು ವರ್ಷಗಳ ಕಾಲ ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಇದ್ದರು ಎಂಬುದು ಹೆಮ್ಮೆಯ ವಿಷಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>