<p><strong>ಬೆಂಗಳೂರು</strong>: ನಗರದ ಕೆ.ಸಿ.ಜನರಲ್ ಆಸ್ಪತ್ರೆಯ ಹಿರಿಯ ಶುಶ್ರೂಷಕಿ ಸುರೇಖಾ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ʼಮನ್ ಕೀ ಬಾತ್ʼ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ.</p>.<p>‘ನೀವೂ ಸೇರಿದಂತೆ ಎಲ್ಲ ಶುಶ್ರೂಷಕರು ಹಾಗೂ ಆರೋಗ್ಯ ಸಿಬ್ಬಂದಿ ಈ ಕಠಿಣ ಪರಿಸ್ಥಿತಿಯಲ್ಲಿ ಉತ್ತಮ ಕೆಲಸ ಮಾಡಿದ್ದೀರಿ. ಇದಕ್ಕೆ ದೇಶದ ಜನ ನಿಮಗೆ ಧನ್ಯರಾಗಿದ್ದಾರೆ’ ಎಂದು ಮೋದಿ ಅಭಿನಂದಿಸಿದರು.</p>.<p>‘ದೇಶದ ನಾಗರಿಕರಿಗೆ ಈ ಪರಿಸ್ಥಿತಿಯಲ್ಲಿ ನೀವು ನೀಡುವ ಸಂದೇಶವೇನು?’ ಎಂದು ಪ್ರಧಾನಿ ಮೋದಿ ಅವರ ಪ್ರಶ್ನೆಗೆ ಉತ್ತರಿಸಿದಸುರೇಖಾ,‘ಈ ಸಂದರ್ಭದಲ್ಲಿ ಎಲ್ಲರೂ ನೆರೆಹೊರೆಯವರೊಂದಿಗೆ ವಿನಮ್ರವಾಗಿರಿ. ಶೀಘ್ರ ಪರೀಕ್ಷೆ ಹಾಗೂ ನಿಖರ ಟ್ರ್ಯಾಕಿಂಗ್ನಿಂದಮರಣ ಪ್ರಮಾಣ ಕಡಿಮೆ ಮಾಡಲು ನಮಗೆ ಸಹಕಾರಿಯಾಗಲಿದೆ’.</p>.<p>‘ನಿಮಗೆ ಯಾವುದೇ ಸೋಂಕಿನ ಲಕ್ಷಣಗಳು ಕಂಡು ಬಂದ ಕೂಡಲೇ ಸ್ವಯಂಪ್ರೇರಿತವಾಗಿ ಐಸೊಲೇಟ್ ಆಗಿ. ಶೀಘ್ರವಾಗಿ ಸಮೀಪದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಿ. ಇಡೀ ಸಮುದಾಯ ಈ ಸೋಂಕಿನ ಬಗ್ಗೆ ಎಚ್ಚರವಾಗಿರಬೇಕು. ಪಾಸಿಟಿವ್ ವರದಿ ಬಂದ ಕೂಡಲೇ ಗಾಬರಿಯಾಗಬಾರದು’.</p>.<p>‘ಯಾವುದೇ ಲಸಿಕೆ ಶೀಘ್ರವೇ ಶೇ 100ರಷ್ಟು ರಕ್ಷಣೆ ನೀಡುವುದಿಲ್ಲ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಮಯ ತೆಗೆದುಕೊಳ್ಳುತ್ತದೆ.ಲಸಿಕೆ ಹಾಕಿಸಿಕೊಳ್ಳುವ ವಿಚಾರದಲ್ಲಿ ಭಯ ಪಡದಿರಿ. ಸ್ವಇಚ್ಛೆಯಿಂದ ಲಸಿಕೆ ಹಾಕಿಸಿಕೊಳ್ಳಿ. ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಂದ ದೂರವಿರಿ. ಕೊರೊನಾ ಸೇವೆಯಲ್ಲಿ ತೊಡಗಿರುವಮುಂಚೂಣಿ ಕಾರ್ಮಿಕರು ಹಾಗೂ ಅಧಿಕಾರಿಗಳ ಮೇಲೆ ಕರುಣೆ ಇರಲಿ. ಈ ಪರಿಸ್ಥಿತಿಯ ವಿರುದ್ಧ ಹೋರಾಡಲು ನಿಮ್ಮೆಲ್ಲರ ಸಹಕಾರ ಅಗತ್ಯ’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಕೆ.ಸಿ.ಜನರಲ್ ಆಸ್ಪತ್ರೆಯ ಹಿರಿಯ ಶುಶ್ರೂಷಕಿ ಸುರೇಖಾ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ʼಮನ್ ಕೀ ಬಾತ್ʼ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ.</p>.<p>‘ನೀವೂ ಸೇರಿದಂತೆ ಎಲ್ಲ ಶುಶ್ರೂಷಕರು ಹಾಗೂ ಆರೋಗ್ಯ ಸಿಬ್ಬಂದಿ ಈ ಕಠಿಣ ಪರಿಸ್ಥಿತಿಯಲ್ಲಿ ಉತ್ತಮ ಕೆಲಸ ಮಾಡಿದ್ದೀರಿ. ಇದಕ್ಕೆ ದೇಶದ ಜನ ನಿಮಗೆ ಧನ್ಯರಾಗಿದ್ದಾರೆ’ ಎಂದು ಮೋದಿ ಅಭಿನಂದಿಸಿದರು.</p>.<p>‘ದೇಶದ ನಾಗರಿಕರಿಗೆ ಈ ಪರಿಸ್ಥಿತಿಯಲ್ಲಿ ನೀವು ನೀಡುವ ಸಂದೇಶವೇನು?’ ಎಂದು ಪ್ರಧಾನಿ ಮೋದಿ ಅವರ ಪ್ರಶ್ನೆಗೆ ಉತ್ತರಿಸಿದಸುರೇಖಾ,‘ಈ ಸಂದರ್ಭದಲ್ಲಿ ಎಲ್ಲರೂ ನೆರೆಹೊರೆಯವರೊಂದಿಗೆ ವಿನಮ್ರವಾಗಿರಿ. ಶೀಘ್ರ ಪರೀಕ್ಷೆ ಹಾಗೂ ನಿಖರ ಟ್ರ್ಯಾಕಿಂಗ್ನಿಂದಮರಣ ಪ್ರಮಾಣ ಕಡಿಮೆ ಮಾಡಲು ನಮಗೆ ಸಹಕಾರಿಯಾಗಲಿದೆ’.</p>.<p>‘ನಿಮಗೆ ಯಾವುದೇ ಸೋಂಕಿನ ಲಕ್ಷಣಗಳು ಕಂಡು ಬಂದ ಕೂಡಲೇ ಸ್ವಯಂಪ್ರೇರಿತವಾಗಿ ಐಸೊಲೇಟ್ ಆಗಿ. ಶೀಘ್ರವಾಗಿ ಸಮೀಪದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಿ. ಇಡೀ ಸಮುದಾಯ ಈ ಸೋಂಕಿನ ಬಗ್ಗೆ ಎಚ್ಚರವಾಗಿರಬೇಕು. ಪಾಸಿಟಿವ್ ವರದಿ ಬಂದ ಕೂಡಲೇ ಗಾಬರಿಯಾಗಬಾರದು’.</p>.<p>‘ಯಾವುದೇ ಲಸಿಕೆ ಶೀಘ್ರವೇ ಶೇ 100ರಷ್ಟು ರಕ್ಷಣೆ ನೀಡುವುದಿಲ್ಲ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಮಯ ತೆಗೆದುಕೊಳ್ಳುತ್ತದೆ.ಲಸಿಕೆ ಹಾಕಿಸಿಕೊಳ್ಳುವ ವಿಚಾರದಲ್ಲಿ ಭಯ ಪಡದಿರಿ. ಸ್ವಇಚ್ಛೆಯಿಂದ ಲಸಿಕೆ ಹಾಕಿಸಿಕೊಳ್ಳಿ. ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಂದ ದೂರವಿರಿ. ಕೊರೊನಾ ಸೇವೆಯಲ್ಲಿ ತೊಡಗಿರುವಮುಂಚೂಣಿ ಕಾರ್ಮಿಕರು ಹಾಗೂ ಅಧಿಕಾರಿಗಳ ಮೇಲೆ ಕರುಣೆ ಇರಲಿ. ಈ ಪರಿಸ್ಥಿತಿಯ ವಿರುದ್ಧ ಹೋರಾಡಲು ನಿಮ್ಮೆಲ್ಲರ ಸಹಕಾರ ಅಗತ್ಯ’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>