ಬುಧವಾರ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಘೋಷಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ‘ಕೊವಿಡ್ ಪರಿಸ್ಥಿತಿಯಲ್ಲೂ ನಮ್ಮ ಸಿಬ್ಬಂದಿ ಕೊರೊನಾ ಯೋಧರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಪ್ರಶಸ್ತಿಯನ್ನು ನಮ್ಮ ಸಿಬ್ಬಂದಿಗೆ, ಅದರಲ್ಲೂ ಕೋವಿಡ್ಗೆ ಬಲಿಯಾದವರಿಗೆ ಅರ್ಪಿಸುತ್ತೇನೆ’ ಎಂದರು.