<p><strong>ಬೆಂಗಳೂರು: </strong>ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನಕ್ಕೆ ಸ್ಥಳಾಂತರಗೊಂಡಿದ್ದ ತಾತ್ಕಾಲಿಕ ತರಕಾರಿ ಮಾರುಕಟ್ಟೆಯನ್ನು ಸದ್ಯಕ್ಕೆ ನ್ಥಗಿತಗೊಳಿಸದ ಪರಿಣಾಮ ಸ್ಥಳೀಯ ನಿವಾಸಿಗಳು ನಿರಾಳರಾಗಿದ್ದಾರೆ.</p>.<p>ಕೊರೊನಾ ನೋಂಕು ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಬಿಬಿಎಂಪಿ ಮಾರುಕಟ್ಟೆಯನ್ನು ಸ್ಥಳಾಂತರ ಮಾಡಿತ್ತು. ಸೂಕ್ತವಾಗಿ ಗುರುತುಗಳನ್ನು ಹಾಕದ ಪರಿಣಾಮ ವ್ಯಾಪಾರಿಗಳು ಹಾಗೂ ಗ್ರಾಹಕರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿರಲಿಲ್ಲ. ಇದರಿಂದ ಸೋಂಕು ಹರಡುವ ಭೀತಿ ಉಂಟಾಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಶನಿವಾರ ಬೆಳಿಗ್ಗೆಯೇ ಆನ್ಲೈನ್ ಆವೃತ್ತಿಯಲ್ಲಿ <a href="https://www.prajavani.net/stories/stateregional/locals-panic-over-shifting-of-kr-market-to-basavanagudi-ground-715623.html" target="_blank">ವರದಿ </a>ಮಾಡಿತ್ತು. ಇದರ ಬೆನ್ನಲ್ಲೇ ಮಾರಾಟವನ್ನು ಸ್ಥಗಿತಗೊಳಿಸಿ, ಮೂಲಸೌಕರ್ಯ ಒದಗಿಸುವವರೆಗೂ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಾಲಿಕೆ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ತಿಳಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/locals-panic-over-shifting-of-kr-market-to-basavanagudi-ground-715623.html" target="_blank">ಮಾರುಕಟ್ಟೆಯಾದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನ: ಆತಂಕದಲ್ಲಿ ಸ್ಥಳೀಯರು</a></p>.<p>ಹಳೆ ಬೆಂಗಳೂರಿನ ಹೃದಯ ಭಾಗವಾದ ಬಸವನಗುಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ವಾಸಿಸುತ್ತಿದ್ದಾರೆ. ಮಾರುಕಟ್ಟೆಗೆ ಬಂದವರು ಸಾಮಾಜಿಕ ಅಂತರ ಕಾಯ್ದುಕೊಳ್ಳದ ಪರಿಣಾಮ ಸೋಂಕು ಸಮುದಾಯಕ್ಕೆ ಹರಡುವ ಆತಂಕ ಬಹುತೇಕರಲ್ಲಿ ಮನೆ ಮಾಡಿತ್ತು. ತರಕಾರಿಗಳನ್ನು ಖರೀದಿಸಲು ಬಂದವರೂ ಭಯದಲ್ಲಿಯೇ ಮನೆಗಳಿಗೆ ತೆರಳಿದ್ದರು.</p>.<p><strong>ಮೈದಾನ ಬಣ ಬಣ:</strong> ಶನಿವಾರ ಜನದಟ್ಟಣೆಯಿಂದ ಕೂಡಿದ್ದ ಮೈದಾನ ಭಾನುವಾರ ಬಣ ಬಣ ಗುಡುತ್ತಿತ್ತು. ಅಗತ್ಯ ಮೂಲಸೌಕರ್ಯ ಒದಗಿಸಿದ ಬಳಿಕ ಪುನಃ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುತ್ತದೆ. 50 ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎನ್ನುವುದು ಬಿಬಿಎಂಪಿ ಮೂಲಗಳಿಂದ ತಿಳಿದುಬಂದಿದೆ.</p>.<p>‘ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು ಉತ್ತಮ ನಿರ್ಧಾರ. ಇಲ್ಲವಾದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆಯಿತ್ತು. ಸೀಮಿತ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಿ, ಅಗತ್ಯ ಮುಂಜಾಗರೂಕತೆ ಕ್ರಮ ಕೈಗೊಳ್ಳಲು ಸೂಚಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗುರುತುಗಳನ್ನು ಹಾಕಬೇಕು’ ಎಂದು ಸುಂಕೇನಹಳ್ಳಿ ನಿವಾಸಿ ಶ್ರೀನಿವಾಸ್ ತಿಳಿಸಿದರು.</p>.<p>‘ಈ ಪ್ರದೇಶದಲ್ಲಿ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದಾರೆ. ಏಕಾಏಕಿ ಮಾರುಕಟ್ಟೆಯನ್ನು ಸ್ಥಳಾಂತರ ಮಾಡಿದ್ದು ಸರಿಯಾದ ಕ್ರಮ ಆಗಿರಲಿಲ್ಲ. ಇನ್ನಾದರೂ ಸೋಂಕು ಹರಡದ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಂಡು, ಮಾರುಕಟ್ಟೆ ಪ್ರಾರಂಭಿಸಲಿ’ ಎಂದು ಗವಿಪುರದ ರಾಮಕೃಷ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನಕ್ಕೆ ಸ್ಥಳಾಂತರಗೊಂಡಿದ್ದ ತಾತ್ಕಾಲಿಕ ತರಕಾರಿ ಮಾರುಕಟ್ಟೆಯನ್ನು ಸದ್ಯಕ್ಕೆ ನ್ಥಗಿತಗೊಳಿಸದ ಪರಿಣಾಮ ಸ್ಥಳೀಯ ನಿವಾಸಿಗಳು ನಿರಾಳರಾಗಿದ್ದಾರೆ.</p>.<p>ಕೊರೊನಾ ನೋಂಕು ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಬಿಬಿಎಂಪಿ ಮಾರುಕಟ್ಟೆಯನ್ನು ಸ್ಥಳಾಂತರ ಮಾಡಿತ್ತು. ಸೂಕ್ತವಾಗಿ ಗುರುತುಗಳನ್ನು ಹಾಕದ ಪರಿಣಾಮ ವ್ಯಾಪಾರಿಗಳು ಹಾಗೂ ಗ್ರಾಹಕರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿರಲಿಲ್ಲ. ಇದರಿಂದ ಸೋಂಕು ಹರಡುವ ಭೀತಿ ಉಂಟಾಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಶನಿವಾರ ಬೆಳಿಗ್ಗೆಯೇ ಆನ್ಲೈನ್ ಆವೃತ್ತಿಯಲ್ಲಿ <a href="https://www.prajavani.net/stories/stateregional/locals-panic-over-shifting-of-kr-market-to-basavanagudi-ground-715623.html" target="_blank">ವರದಿ </a>ಮಾಡಿತ್ತು. ಇದರ ಬೆನ್ನಲ್ಲೇ ಮಾರಾಟವನ್ನು ಸ್ಥಗಿತಗೊಳಿಸಿ, ಮೂಲಸೌಕರ್ಯ ಒದಗಿಸುವವರೆಗೂ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಾಲಿಕೆ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ತಿಳಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/locals-panic-over-shifting-of-kr-market-to-basavanagudi-ground-715623.html" target="_blank">ಮಾರುಕಟ್ಟೆಯಾದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನ: ಆತಂಕದಲ್ಲಿ ಸ್ಥಳೀಯರು</a></p>.<p>ಹಳೆ ಬೆಂಗಳೂರಿನ ಹೃದಯ ಭಾಗವಾದ ಬಸವನಗುಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ವಾಸಿಸುತ್ತಿದ್ದಾರೆ. ಮಾರುಕಟ್ಟೆಗೆ ಬಂದವರು ಸಾಮಾಜಿಕ ಅಂತರ ಕಾಯ್ದುಕೊಳ್ಳದ ಪರಿಣಾಮ ಸೋಂಕು ಸಮುದಾಯಕ್ಕೆ ಹರಡುವ ಆತಂಕ ಬಹುತೇಕರಲ್ಲಿ ಮನೆ ಮಾಡಿತ್ತು. ತರಕಾರಿಗಳನ್ನು ಖರೀದಿಸಲು ಬಂದವರೂ ಭಯದಲ್ಲಿಯೇ ಮನೆಗಳಿಗೆ ತೆರಳಿದ್ದರು.</p>.<p><strong>ಮೈದಾನ ಬಣ ಬಣ:</strong> ಶನಿವಾರ ಜನದಟ್ಟಣೆಯಿಂದ ಕೂಡಿದ್ದ ಮೈದಾನ ಭಾನುವಾರ ಬಣ ಬಣ ಗುಡುತ್ತಿತ್ತು. ಅಗತ್ಯ ಮೂಲಸೌಕರ್ಯ ಒದಗಿಸಿದ ಬಳಿಕ ಪುನಃ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುತ್ತದೆ. 50 ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎನ್ನುವುದು ಬಿಬಿಎಂಪಿ ಮೂಲಗಳಿಂದ ತಿಳಿದುಬಂದಿದೆ.</p>.<p>‘ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು ಉತ್ತಮ ನಿರ್ಧಾರ. ಇಲ್ಲವಾದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆಯಿತ್ತು. ಸೀಮಿತ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಿ, ಅಗತ್ಯ ಮುಂಜಾಗರೂಕತೆ ಕ್ರಮ ಕೈಗೊಳ್ಳಲು ಸೂಚಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗುರುತುಗಳನ್ನು ಹಾಕಬೇಕು’ ಎಂದು ಸುಂಕೇನಹಳ್ಳಿ ನಿವಾಸಿ ಶ್ರೀನಿವಾಸ್ ತಿಳಿಸಿದರು.</p>.<p>‘ಈ ಪ್ರದೇಶದಲ್ಲಿ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದಾರೆ. ಏಕಾಏಕಿ ಮಾರುಕಟ್ಟೆಯನ್ನು ಸ್ಥಳಾಂತರ ಮಾಡಿದ್ದು ಸರಿಯಾದ ಕ್ರಮ ಆಗಿರಲಿಲ್ಲ. ಇನ್ನಾದರೂ ಸೋಂಕು ಹರಡದ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಂಡು, ಮಾರುಕಟ್ಟೆ ಪ್ರಾರಂಭಿಸಲಿ’ ಎಂದು ಗವಿಪುರದ ರಾಮಕೃಷ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>