ಎತ್ತರದ ಸ್ತಂಭದ ಮೇಲೆ 24*36 ಅಡಿ ವಿಸ್ತೀರ್ಣದ ಧ್ವಜವನ್ನು ಹಾರಿಸಲು ಉದ್ದೇಶಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಧ್ವಜಾರೋಹಣಕ್ಕೆ ಮುಂದಾದರು. ಹಲವು ಬಾರಿ ಎಳೆದರೂ ರಾಷ್ಟ್ರಧ್ವಜ ಬಿಚ್ಚಿಕೊಳ್ಳಲಿಲ್ಲ. ಸ್ಥಳದಲ್ಲಿದ್ದ ಹಲವರು ಸಹ ಮುಂದಾಗಿ ಹಗ್ಗವನ್ನು ಎಷ್ಟು ಜಗ್ಗಿದರೂ ಧ್ವಜ ಹಾರಲೇ ಇಲ್ಲ.