‘ನವದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ, ಹೈದರಾಬಾದ್, ಕೋಲ್ಕತ್ತ ಮತ್ತು ಎರಡನೇ ಹಂತದ ನಗರಗಳಾದ ಹುಬ್ಬಳ್ಳಿ–ಧಾರವಾಡ ಹಾಗೂಮೈಸೂರಿನಲ್ಲಿ ತಲಾ 3,600 ಜನರನ್ನು ಸಮೀಕ್ಷೆಗೆ ಒಳಡಿಸಲಾಗುವುದು. ಅವರು ಎದುರಿಸುತ್ತಿರುವ ಮಾನಸಿಕ ಸಮಸ್ಯೆಗಳನ್ನು ಗುರುತಿಸಲಾಗುವುದು. ಮಾನಸಿಕ ಸಮಸ್ಯೆಗಳ ಚಿಕಿತ್ಸೆಗೆ ಇರುವ ವ್ಯವಸ್ಥೆಗಳ ಬಗ್ಗೆಯೂ ಈ ಸಮೀಕ್ಷೆಯಡಿ ಅಧ್ಯಯನ ನಡೆಸಲಾಗುತ್ತದೆ. ಕೆಲಸದ ಒತ್ತಡ, ಸಾಮಾಜಿಕ ಮಾಧ್ಯಮಗಳ ಬಳಕೆ, ಮೊಬೈಲ್ ಗೇಮ್ಗಳ ಪ್ರಭಾವ ಸೇರಿದಂತೆ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗುವ ವಿವಿಧ ಸಂಗತಿಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತದೆ’ ಎಂದು ಹೇಳಿದರು.