<p><strong>ಬೆಂಗಳೂರು</strong>: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವ ಶಕ್ತಿಯ ಪಾತ್ರ ಅತಿಮುಖ್ಯವಾಗಿದ್ದು, ಜ್ಞಾನ ಮತ್ತು ಕೌಶಲದ ಜೊತೆಗೆ ಸಮಾಜ ಸೇವೆಯ ಮನೋಭಾವ ರೂಪಿಸಿಕೊಳ್ಳಬೇಕು ಎಂದು ಕುಲಪತಿ ಪ್ರೊ.ಬಿ.ರಮೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಡಾ. ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕೋಶದ ಆಶ್ರಯದಲ್ಲಿ ಏರ್ಪಡಿಸಿರುವ ಒಂದು ವಾರ ಅವಧಿಯ ರಾಷ್ಟ್ರೀಯ ಭಾವೈಕ್ಯ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅನೇಕ ಜಾತಿ, ಧರ್ಮ, ಭಾಷೆ ಮತ್ತು ಸಂಸ್ಕೃತಿಗಳ ಮಹಾಸಂಗಮವಾದ ದೇಶದಲ್ಲಿ ರಾಷ್ಟ್ರೀಯ ಸಮಗ್ರತೆಯನ್ನು ಸದಾ ಸಂರಕ್ಷಿಸುವ ಮಹತ್ವದ ಹೊಣೆಗಾರಿಕೆ ದೇಶದ ಯುವ ಪೀಳಿಗೆಯ ಮೇಲಿದೆ ಎಂದು ಅವರು ಪ್ರತಿಪಾದಿಸಿದರು.</p>.<p>ಶಿಬಿರ ಉದ್ಘಾಟಿಸಿ ಮಾತನಾಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಆರ್. ಚೇತನ್, ಕೋಮುವಾದ ಮತ್ತು ಪ್ರಾದೇಶಿಕ ಅಸಮತೋಲನದ ಸವಾಲುಗಳನ್ನು ನಿಭಾಯಿಸುವ ಮೂಲಕ ಭಾವೈಕ್ಯತೆ ಕಾಪಾಡಬೇಕಾದ ಅಗತ್ಯವನ್ನು ಒತ್ತಿ ಹೇಳಿದರು.</p>.<p>ರಾಜ್ಯ ಎನ್.ಎಸ್.ಎಸ್. ಅಧಿಕಾರಿಗಳಾದ ಪ್ರತಾಪ್ ಲಿಂಗಯ್ಯ ಮಾತನಾಡಿ, ‘ಕೇವಲ 40 ಸಾವಿರ ಸ್ವಯಂಸೇವಕರ ಪಡೆಯೊಂದಿಗೆ ಪ್ರಾರಂಭವಾದ ಎನ್.ಎಸ್.ಎಸ್. ಇದೀಗ 45 ಲಕ್ಷಕ್ಕೂ ಅಧಿಕ ಕಾರ್ಯಕರ್ತರ ಬೃಹತ್ ಸಂಘಟನೆಯಾಗಿ ಬೆಳೆದಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ’ ಎಂದು ವಿವರಿಸಿದರು.</p>.<p>ವಿಶ್ವವಿದ್ಯಾನಿಲಯದ ಕುಲಸಚಿವ ಎ .ನವೀನ್ ಜೋಸೆಫ್ ಶಿಬಿರದ ಉದ್ದೇಶಗಳನ್ನು ವಿವರಿಸಿದರು. ಎನ್.ಎಸ್.ಎಸ್. ಪ್ರಾದೇಶಿಕ ನಿರ್ದೇಶಕ ಗಿರ್ಧರ್ ಉಪಾಧ್ಯಾಯ್, ಕುಲಸಚಿವ (ಮೌಲ್ಯಮಾಪನ) ಪ್ರೊ.ರಮೇಶ್. ಬಿ. ಕುಡೇನಟ್ಟಿ, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ. ಸಿಂಡಿಕೇಟ್ ಸದಸ್ಯರಾದ ಡಾ.ಬಿ.ಆರ್.ಸುಪ್ರೀತ್. ಕೆ.ಪಿ.ಪಾಟೀಲ್ ಮತ್ತು ಫಾದರ್ ಫ್ರಾನ್ಸಿಸ್ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸಂಯೋಜಕ ಡಾ.ಎಚ್.ಜಿ.ಗೋವಿಂದೇಗೌಡ ವಂದಿಸಿದರು.</p>.<p>ದೇಶದ ವಿವಿಧ ರಾಜ್ಯಗಳ 15ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳಿಂದ ಎನ್.ಎಸ್.ಎಸ್. ಸ್ವಯಂಸೇವಕರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವ ಶಕ್ತಿಯ ಪಾತ್ರ ಅತಿಮುಖ್ಯವಾಗಿದ್ದು, ಜ್ಞಾನ ಮತ್ತು ಕೌಶಲದ ಜೊತೆಗೆ ಸಮಾಜ ಸೇವೆಯ ಮನೋಭಾವ ರೂಪಿಸಿಕೊಳ್ಳಬೇಕು ಎಂದು ಕುಲಪತಿ ಪ್ರೊ.ಬಿ.ರಮೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಡಾ. ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕೋಶದ ಆಶ್ರಯದಲ್ಲಿ ಏರ್ಪಡಿಸಿರುವ ಒಂದು ವಾರ ಅವಧಿಯ ರಾಷ್ಟ್ರೀಯ ಭಾವೈಕ್ಯ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅನೇಕ ಜಾತಿ, ಧರ್ಮ, ಭಾಷೆ ಮತ್ತು ಸಂಸ್ಕೃತಿಗಳ ಮಹಾಸಂಗಮವಾದ ದೇಶದಲ್ಲಿ ರಾಷ್ಟ್ರೀಯ ಸಮಗ್ರತೆಯನ್ನು ಸದಾ ಸಂರಕ್ಷಿಸುವ ಮಹತ್ವದ ಹೊಣೆಗಾರಿಕೆ ದೇಶದ ಯುವ ಪೀಳಿಗೆಯ ಮೇಲಿದೆ ಎಂದು ಅವರು ಪ್ರತಿಪಾದಿಸಿದರು.</p>.<p>ಶಿಬಿರ ಉದ್ಘಾಟಿಸಿ ಮಾತನಾಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಆರ್. ಚೇತನ್, ಕೋಮುವಾದ ಮತ್ತು ಪ್ರಾದೇಶಿಕ ಅಸಮತೋಲನದ ಸವಾಲುಗಳನ್ನು ನಿಭಾಯಿಸುವ ಮೂಲಕ ಭಾವೈಕ್ಯತೆ ಕಾಪಾಡಬೇಕಾದ ಅಗತ್ಯವನ್ನು ಒತ್ತಿ ಹೇಳಿದರು.</p>.<p>ರಾಜ್ಯ ಎನ್.ಎಸ್.ಎಸ್. ಅಧಿಕಾರಿಗಳಾದ ಪ್ರತಾಪ್ ಲಿಂಗಯ್ಯ ಮಾತನಾಡಿ, ‘ಕೇವಲ 40 ಸಾವಿರ ಸ್ವಯಂಸೇವಕರ ಪಡೆಯೊಂದಿಗೆ ಪ್ರಾರಂಭವಾದ ಎನ್.ಎಸ್.ಎಸ್. ಇದೀಗ 45 ಲಕ್ಷಕ್ಕೂ ಅಧಿಕ ಕಾರ್ಯಕರ್ತರ ಬೃಹತ್ ಸಂಘಟನೆಯಾಗಿ ಬೆಳೆದಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ’ ಎಂದು ವಿವರಿಸಿದರು.</p>.<p>ವಿಶ್ವವಿದ್ಯಾನಿಲಯದ ಕುಲಸಚಿವ ಎ .ನವೀನ್ ಜೋಸೆಫ್ ಶಿಬಿರದ ಉದ್ದೇಶಗಳನ್ನು ವಿವರಿಸಿದರು. ಎನ್.ಎಸ್.ಎಸ್. ಪ್ರಾದೇಶಿಕ ನಿರ್ದೇಶಕ ಗಿರ್ಧರ್ ಉಪಾಧ್ಯಾಯ್, ಕುಲಸಚಿವ (ಮೌಲ್ಯಮಾಪನ) ಪ್ರೊ.ರಮೇಶ್. ಬಿ. ಕುಡೇನಟ್ಟಿ, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ. ಸಿಂಡಿಕೇಟ್ ಸದಸ್ಯರಾದ ಡಾ.ಬಿ.ಆರ್.ಸುಪ್ರೀತ್. ಕೆ.ಪಿ.ಪಾಟೀಲ್ ಮತ್ತು ಫಾದರ್ ಫ್ರಾನ್ಸಿಸ್ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸಂಯೋಜಕ ಡಾ.ಎಚ್.ಜಿ.ಗೋವಿಂದೇಗೌಡ ವಂದಿಸಿದರು.</p>.<p>ದೇಶದ ವಿವಿಧ ರಾಜ್ಯಗಳ 15ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳಿಂದ ಎನ್.ಎಸ್.ಎಸ್. ಸ್ವಯಂಸೇವಕರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>