<p><strong>ಬೆಂಗಳೂರು: </strong>ದಯಾನಂದ ಸಾಗರ ಎಂಜಿನಿಯರಿಂಗ್ ಕಾಲೇಜಿನ (ಡಿಎಸ್ಸಿಇ) ಸಿವಿಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಶುಕ್ರವಾರ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣ ಆಯೋಜಿಸಲಾಗಿತ್ತು.</p>.<p>‘ಹೈ ಪರ್ಫಾರ್ಮನ್ಸ್ ಇಂಡಸ್ಟ್ರೀಯಲ್ ಫ್ಲೂರಿಂಗ್’ ಕುರಿತು ನಡೆದ ಈ ಸೆಮಿನಾರ್ ಭಾರತೀಯ ಕಾಂಕ್ರೀಟ್ ಸಂಸ್ಥೆ (ಐಸಿಐ) ಸಹಯೋಗದಲ್ಲಿ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲ ಡಾ.ಸಿ.ಪಿ.ಎಸ್. ಪ್ರಕಾಶ್, ‘ಹೊಸ ಶಿಕ್ಷಣ ನೀತಿಯು ಕೌಶಲ ಅಭಿವೃದ್ಧಿಗೆ ಆದ್ಯತೆ ನೀಡುತ್ತದೆ. ವಿದ್ಯಾರ್ಥಿಗಳು ಮತ್ತು ಎಂಜಿನಿಯರ್ಗಳು ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ಕೌಶಲಗಳನ್ನು ಬೆಳೆಸಿಕೊಳ್ಳುವುದು ಅಗತ್ಯವಿದೆ’ ಎಂದು ಸಲಹೆ ನೀಡಿದರು.</p>.<p>ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಎಚ್.ಕೆ. ರಾಮರಾಜು ಮಾತನಾಡಿ, ‘ಸಿವಿಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗುತ್ತಿವೆ. ಎಂಜಿನಿಯರ್ಗಳು ಬದಲಾಗುತ್ತಿರುವ ತಂತ್ರಜ್ಞಾನಗಳ ಬಗ್ಗೆಯೂ ಗಮನ ನೀಡಬೇಕು. ನಮ್ಮ ಪರಿಸರ ಮತ್ತು ಪರಂಪರೆಯನ್ನು ಸಂರಕ್ಷಿಸುವ ಇಂದಿನ ತುರ್ತು ಅಗತ್ಯವಾಗಿದೆ’ ಎಂದು ತಿಳಿಸಿದರು.</p>.<p>ಐಸಿಐ ಗೌರವ ಅಧ್ಯಕ್ಷ ಡಾ.ಎಲ್.ಆರ್. ಮಂಜುನಾಥ್, ಬೆಂಗಳೂರು ಕೇಂದ್ರದ ಐಸಿಐ ಗೌರವ ಕಾರ್ಯದರ್ಶಿ ಡಾ.ಆರ್.ಎಲ್. ರಮೇಶ್, ಡಿಎಸ್ಸಿಇ ಸಂಚಾಲಕರಾದ ಡಾ. ನೀತು ಅರಸ್ ಇದ್ದರು.</p>.<p>ಉದ್ಯಮಗಳ ಪ್ರತಿನಿಧಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಡಿಎಸ್ಸಿಇ ಅಧ್ಯಾಪಕರು ವಿಚಾರಸಂಕಿರಣದಲ್ಲಿ ಪಾಲ್ಗೊಂಡಿದ್ದರು.</p>.<p>ಸೆಮಿನಾರ್ನಲ್ಲಿ ಭೌತಿಕವಾಗಿ ಸುಮಾರು 100 ಮಂದಿ ಹಾಗೂ ವರ್ಚುವಲ್ ವ್ಯವಸ್ಥೆಯ ಮೂಲಕ 200 ಮಂದಿ<br />ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸೆಮಿನಾರ್ನಲ್ಲಿ ಭಾಗವಹಿಸಿದ ಪ್ರತಿನಿಧಿಗಳಿಗಾಗಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದಯಾನಂದ ಸಾಗರ ಎಂಜಿನಿಯರಿಂಗ್ ಕಾಲೇಜಿನ (ಡಿಎಸ್ಸಿಇ) ಸಿವಿಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಶುಕ್ರವಾರ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣ ಆಯೋಜಿಸಲಾಗಿತ್ತು.</p>.<p>‘ಹೈ ಪರ್ಫಾರ್ಮನ್ಸ್ ಇಂಡಸ್ಟ್ರೀಯಲ್ ಫ್ಲೂರಿಂಗ್’ ಕುರಿತು ನಡೆದ ಈ ಸೆಮಿನಾರ್ ಭಾರತೀಯ ಕಾಂಕ್ರೀಟ್ ಸಂಸ್ಥೆ (ಐಸಿಐ) ಸಹಯೋಗದಲ್ಲಿ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲ ಡಾ.ಸಿ.ಪಿ.ಎಸ್. ಪ್ರಕಾಶ್, ‘ಹೊಸ ಶಿಕ್ಷಣ ನೀತಿಯು ಕೌಶಲ ಅಭಿವೃದ್ಧಿಗೆ ಆದ್ಯತೆ ನೀಡುತ್ತದೆ. ವಿದ್ಯಾರ್ಥಿಗಳು ಮತ್ತು ಎಂಜಿನಿಯರ್ಗಳು ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ಕೌಶಲಗಳನ್ನು ಬೆಳೆಸಿಕೊಳ್ಳುವುದು ಅಗತ್ಯವಿದೆ’ ಎಂದು ಸಲಹೆ ನೀಡಿದರು.</p>.<p>ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಎಚ್.ಕೆ. ರಾಮರಾಜು ಮಾತನಾಡಿ, ‘ಸಿವಿಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗುತ್ತಿವೆ. ಎಂಜಿನಿಯರ್ಗಳು ಬದಲಾಗುತ್ತಿರುವ ತಂತ್ರಜ್ಞಾನಗಳ ಬಗ್ಗೆಯೂ ಗಮನ ನೀಡಬೇಕು. ನಮ್ಮ ಪರಿಸರ ಮತ್ತು ಪರಂಪರೆಯನ್ನು ಸಂರಕ್ಷಿಸುವ ಇಂದಿನ ತುರ್ತು ಅಗತ್ಯವಾಗಿದೆ’ ಎಂದು ತಿಳಿಸಿದರು.</p>.<p>ಐಸಿಐ ಗೌರವ ಅಧ್ಯಕ್ಷ ಡಾ.ಎಲ್.ಆರ್. ಮಂಜುನಾಥ್, ಬೆಂಗಳೂರು ಕೇಂದ್ರದ ಐಸಿಐ ಗೌರವ ಕಾರ್ಯದರ್ಶಿ ಡಾ.ಆರ್.ಎಲ್. ರಮೇಶ್, ಡಿಎಸ್ಸಿಇ ಸಂಚಾಲಕರಾದ ಡಾ. ನೀತು ಅರಸ್ ಇದ್ದರು.</p>.<p>ಉದ್ಯಮಗಳ ಪ್ರತಿನಿಧಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಡಿಎಸ್ಸಿಇ ಅಧ್ಯಾಪಕರು ವಿಚಾರಸಂಕಿರಣದಲ್ಲಿ ಪಾಲ್ಗೊಂಡಿದ್ದರು.</p>.<p>ಸೆಮಿನಾರ್ನಲ್ಲಿ ಭೌತಿಕವಾಗಿ ಸುಮಾರು 100 ಮಂದಿ ಹಾಗೂ ವರ್ಚುವಲ್ ವ್ಯವಸ್ಥೆಯ ಮೂಲಕ 200 ಮಂದಿ<br />ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸೆಮಿನಾರ್ನಲ್ಲಿ ಭಾಗವಹಿಸಿದ ಪ್ರತಿನಿಧಿಗಳಿಗಾಗಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>