ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 771 ವೈವಾಹಿಕ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದ್ದು 281 ದಂಪತಿಗಳನ್ನು ಜೊತೆಗೂಡಿಸಲಾಗಿದೆ.
ನ್ಯಾಯಮೂರ್ತಿ ಕೆ.ಸೋಮಶೇಖರ್, ಕಾರ್ಯನಿರ್ವಾಹಕ ಅಧ್ಯಕ್ಷರು ಕೆಎಸ್ಎಲ್ಎಸ್ಎ
ವರ್ಷಕ್ಕೆ ನಾಲ್ಕು ಬಾರಿ ಲೋಕ ಅದಾಲತ್ ನಡೆಯುತ್ತದೆ. ರಾಜಿ ಸಂಧಾನದ ಮೂಲಕ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತವಾಗಿ ಖರ್ಚಿಲ್ಲದೆ ಮತ್ತು ಸಕಾಲಕ್ಕೆ ಇತ್ಯರ್ಥಪಡಿಸಿಕೊಂಡು ನ್ಯಾಯ ಪಡೆಯಲು ಇದು ಉತ್ತಮ ವೇದಿಕೆಯಾಗಿದೆ. ವ್ಯಾಜ್ಯದಾರರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು.