<p><strong>ಬೆಂಗಳೂರು</strong>: ರಾಷ್ಟ್ರೀಯ ಗುಣಮಟ್ಟ ಭರವಸೆಯ ಮಾನದಂಡಗಳ (ಎನ್ಕ್ಯೂಎಎಸ್) ಅಳವಡಿಕೆಗೆ ಸಂಬಂಧಿಸಿದಂತೆ ನಿರೀಕ್ಷಿತ ಗುರಿ ಸಾಧಿಸದಿದ್ದಲ್ಲಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. </p>.<p>ಈ ಬಗ್ಗೆ ಇಲಾಖೆ ಆದೇಶ ಹೊರಡಿಸಿದೆ. ‘ಮುಂದಿನ ಮೂರು ತಿಂಗಳಲ್ಲಿ ಈ ಮಾನದಂಡಗಳನ್ನು ಅಳವಡಿಸಿಕೊಂಡು, ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧಿಸಬೇಕು. ಈ ಗುರಿ ಸಾಧಿಸಲು ವಿಫಲವಾದಲ್ಲಿ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ (ಎಬಿ-ಎಆರ್ಕೆ) ಅಡಿ ನೀಡಲಾಗುತ್ತಿರುವ ಪ್ರೋತ್ಸಾಹಧನದಿಂದ ಆಸ್ಪತ್ರೆಯನ್ನು ಅನರ್ಹಗೊಳಿಸಲಾಗುವುದು’ ಎಂದು ತಿಳಿಸಲಾಗಿದೆ. </p>.<p>‘ಕನಿಷ್ಠ 6 ತಿಂಗಳ ಒಳಗಾದರೂ ಮಾನದಂಡಗಳ ಗುರಿ ಸಾಧನೆ ಮಾಡಬೇಕು. ಇಲ್ಲವಾದಲ್ಲಿ, ಆಸ್ಪತ್ರೆಗಳ ವೈದ್ಯಕೀಯ ಮತ್ತು ಅರೆವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವರ್ಗಾವಣೆಗೆ ಕ್ರಮ ವಹಿಸಲಾಗುವುದು. 9 ತಿಂಗಳೊಳಗೆ ಯಾವುದೇ ಸಾಧನೆ ಮಾಡದಿದ್ದರೆ, ಅಂತಹ ಆರೋಗ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲ ಮುಖ್ಯ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಅಧಿಕಾರಿ ಹಾಗೂ ಸಿಬ್ಬಂದಿಯ ವಾರ್ಷಿಕ ವೇತನ ಬಡ್ತಿ ತಡೆ ಹಿಡಿಯಲಾಗುವುದು’ ಎಂದು ಹೇಳಲಾಗಿದೆ.</p>.<p>‘ಈ ಎಲ್ಲ ಕ್ರಮಗಳ ಹೊರತಾಗಿಯೂ ಯಾವುದೇ ಪ್ರಗತಿ ಸಾಧಿಸದ ಆರೋಗ್ಯ ಕೇಂದ್ರಗಳ ಮೇಲ್ವಿಚಾರಕರು ಹಾಗೂ ಸಿಬ್ಬಂದಿಯನ್ನು, ಕಳಪೆ ಗುಣಮಟ್ಟದ ಆರೈಕೆ ಹಾಗೂ ಚಿಕಿತ್ಸೆಗೆ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಷ್ಟ್ರೀಯ ಗುಣಮಟ್ಟ ಭರವಸೆಯ ಮಾನದಂಡಗಳ (ಎನ್ಕ್ಯೂಎಎಸ್) ಅಳವಡಿಕೆಗೆ ಸಂಬಂಧಿಸಿದಂತೆ ನಿರೀಕ್ಷಿತ ಗುರಿ ಸಾಧಿಸದಿದ್ದಲ್ಲಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. </p>.<p>ಈ ಬಗ್ಗೆ ಇಲಾಖೆ ಆದೇಶ ಹೊರಡಿಸಿದೆ. ‘ಮುಂದಿನ ಮೂರು ತಿಂಗಳಲ್ಲಿ ಈ ಮಾನದಂಡಗಳನ್ನು ಅಳವಡಿಸಿಕೊಂಡು, ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧಿಸಬೇಕು. ಈ ಗುರಿ ಸಾಧಿಸಲು ವಿಫಲವಾದಲ್ಲಿ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ (ಎಬಿ-ಎಆರ್ಕೆ) ಅಡಿ ನೀಡಲಾಗುತ್ತಿರುವ ಪ್ರೋತ್ಸಾಹಧನದಿಂದ ಆಸ್ಪತ್ರೆಯನ್ನು ಅನರ್ಹಗೊಳಿಸಲಾಗುವುದು’ ಎಂದು ತಿಳಿಸಲಾಗಿದೆ. </p>.<p>‘ಕನಿಷ್ಠ 6 ತಿಂಗಳ ಒಳಗಾದರೂ ಮಾನದಂಡಗಳ ಗುರಿ ಸಾಧನೆ ಮಾಡಬೇಕು. ಇಲ್ಲವಾದಲ್ಲಿ, ಆಸ್ಪತ್ರೆಗಳ ವೈದ್ಯಕೀಯ ಮತ್ತು ಅರೆವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವರ್ಗಾವಣೆಗೆ ಕ್ರಮ ವಹಿಸಲಾಗುವುದು. 9 ತಿಂಗಳೊಳಗೆ ಯಾವುದೇ ಸಾಧನೆ ಮಾಡದಿದ್ದರೆ, ಅಂತಹ ಆರೋಗ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲ ಮುಖ್ಯ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಅಧಿಕಾರಿ ಹಾಗೂ ಸಿಬ್ಬಂದಿಯ ವಾರ್ಷಿಕ ವೇತನ ಬಡ್ತಿ ತಡೆ ಹಿಡಿಯಲಾಗುವುದು’ ಎಂದು ಹೇಳಲಾಗಿದೆ.</p>.<p>‘ಈ ಎಲ್ಲ ಕ್ರಮಗಳ ಹೊರತಾಗಿಯೂ ಯಾವುದೇ ಪ್ರಗತಿ ಸಾಧಿಸದ ಆರೋಗ್ಯ ಕೇಂದ್ರಗಳ ಮೇಲ್ವಿಚಾರಕರು ಹಾಗೂ ಸಿಬ್ಬಂದಿಯನ್ನು, ಕಳಪೆ ಗುಣಮಟ್ಟದ ಆರೈಕೆ ಹಾಗೂ ಚಿಕಿತ್ಸೆಗೆ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>