ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕೆ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಕಾರ್ಯದರ್ಶಿ ಕೆ. ಶ್ರೀನಿವಾಸ್ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ಕಾರ್ಖಾನೆ, ಕೈಗಾರಿಕೆ ಮತ್ತು ಕಾರ್ಮಿಕ ವಲಯಗಳು ತೀವ್ರ ಸಂಕಷ್ಟ ಅನುಭವಿಸಿದ್ದವು. ಲಾಕ್ಡೌನ್ ತೆರವಾದ ಬಳಿಕ ಉದ್ಯಮ ಕ್ಷೇತ್ರಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮಾರ್ಗಸೂಚಿಗಳನ್ನು ತಯಾರಿಸಿದ್ದು, ಎಲ್ಲರೂ ಪಾಲಿಸಬೇಕು’ ಎಂದರು.