<p><strong>ಬೆಂಗಳೂರು: </strong>‘ವಿಜ್ಞಾನ ಕ್ಯಾಂಪಸ್ ಎಂದೇ ಹೆಸರಾಗಿದ್ದ ಸೆಂಟ್ರಲ್ ಕಾಲೇಜಿನ ಶೈಕ್ಷಣಿಕ ಪರಂಪರೆ ಮುಂದುವರಿಸಲು ವಿಜ್ಞಾನ ವಿಷಯಗಳ ಅಧ್ಯಯನ ಮತ್ತು ಸಂಶೋಧನೆಗೆ ವಿಶೇಷ ಉತ್ತೇಜನ ನೀಡಲಾಗುವುದು’ ಎಂದು ಡಾ. ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ರಮೇಶ್ ಭರವಸೆ ನೀಡಿದರು.</p>.<p>ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಮೂಲ ವಿಜ್ಞಾನ ವಿಷಯಗಳ ಕಲಿಕೆಯ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಎಂದು ವಿವರಿಸಿದರು.</p>.<p>ದೇಶದ ಸರ್ವತೋಮುಖ ಪ್ರಗತಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಾಧನೆ ಮತ್ತು ಅನ್ವೇಷಣೆಗಳ ಪಾತ್ರ ಮಹತ್ವದ್ದಾಗಿದ್ದು, ಜನರ ಜೀವನ ಗುಣಮಟ್ಟ ಸುಧಾರಣೆಗೆ ಮೂಲಾಧಾರವಾಗಿದೆ ಎಂದು ಪ್ರತಿಪಾದಿಸಿದರು.</p>.<p>‘ಸಮಾಜದ ಕೆಳಸ್ತರಗಳ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಲ್ಲಿ ಆಳವಾಗಿ ಬೇರೂರಿರುವ ಮೌಢ್ಯವನ್ನು ನಿವಾರಿಸಿ ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಕಾರ್ಯೋನ್ಮುಖವಾಗಬೇಕು’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಎಸಿಎಸ್ಐಆರ್ ಪ್ರಾಧ್ಯಾಪಕಿ ಶ್ರೀದೇವಿ ಜಾಡೇ ಮಾತನಾಡಿ, ‘ಸಾಮಾಜಿಕ ಮತ್ತು ಕೌಟುಂಬಿಕ ಕಾರಣಗಳಿಂದಾಗಿ ಉನ್ನತ ಶಿಕ್ಷಣದ ಹಂತದಲ್ಲಿ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ತೊರೆಯುವ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಬೇಕು. ಹೆಣ್ಣು ಮಕ್ಕಳು ವಿಜ್ಞಾನ ವಿಷಯಗಳ ಅಧ್ಯಯನದತ್ತ ವಿಶೇಷ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ವಿಶ್ವವಿದ್ಯಾಲಯದ ವಿಜ್ಞಾನ ನಿಕಾಯದ ಡೀನ್ ಪ್ರೊ. ಪಿ.ಆರ್. ಚೇತನ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ (ಮೌಲ್ಯಮಾಪನ) ಪ್ರೊ. ರಮೇಶ ಬಿ.ಕುಡೇನಟ್ಟಿ, ವಿತ್ತಾಧಿಕಾರಿ ಎಂ.ವಿ.ವಿಜಯಲಕ್ಷ್ಮಿ ಹಾಜರಿದ್ದರು.</p>.<p>ವಿಜ್ಞಾನ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಭಿತ್ತಿಚಿತ್ರ ರಚನೆ, ಚರ್ಚಾ ಸ್ಪರ್ಧೆ ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ವಿಜ್ಞಾನ ಕ್ಯಾಂಪಸ್ ಎಂದೇ ಹೆಸರಾಗಿದ್ದ ಸೆಂಟ್ರಲ್ ಕಾಲೇಜಿನ ಶೈಕ್ಷಣಿಕ ಪರಂಪರೆ ಮುಂದುವರಿಸಲು ವಿಜ್ಞಾನ ವಿಷಯಗಳ ಅಧ್ಯಯನ ಮತ್ತು ಸಂಶೋಧನೆಗೆ ವಿಶೇಷ ಉತ್ತೇಜನ ನೀಡಲಾಗುವುದು’ ಎಂದು ಡಾ. ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ರಮೇಶ್ ಭರವಸೆ ನೀಡಿದರು.</p>.<p>ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಮೂಲ ವಿಜ್ಞಾನ ವಿಷಯಗಳ ಕಲಿಕೆಯ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಎಂದು ವಿವರಿಸಿದರು.</p>.<p>ದೇಶದ ಸರ್ವತೋಮುಖ ಪ್ರಗತಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಾಧನೆ ಮತ್ತು ಅನ್ವೇಷಣೆಗಳ ಪಾತ್ರ ಮಹತ್ವದ್ದಾಗಿದ್ದು, ಜನರ ಜೀವನ ಗುಣಮಟ್ಟ ಸುಧಾರಣೆಗೆ ಮೂಲಾಧಾರವಾಗಿದೆ ಎಂದು ಪ್ರತಿಪಾದಿಸಿದರು.</p>.<p>‘ಸಮಾಜದ ಕೆಳಸ್ತರಗಳ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಲ್ಲಿ ಆಳವಾಗಿ ಬೇರೂರಿರುವ ಮೌಢ್ಯವನ್ನು ನಿವಾರಿಸಿ ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಕಾರ್ಯೋನ್ಮುಖವಾಗಬೇಕು’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಎಸಿಎಸ್ಐಆರ್ ಪ್ರಾಧ್ಯಾಪಕಿ ಶ್ರೀದೇವಿ ಜಾಡೇ ಮಾತನಾಡಿ, ‘ಸಾಮಾಜಿಕ ಮತ್ತು ಕೌಟುಂಬಿಕ ಕಾರಣಗಳಿಂದಾಗಿ ಉನ್ನತ ಶಿಕ್ಷಣದ ಹಂತದಲ್ಲಿ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ತೊರೆಯುವ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಬೇಕು. ಹೆಣ್ಣು ಮಕ್ಕಳು ವಿಜ್ಞಾನ ವಿಷಯಗಳ ಅಧ್ಯಯನದತ್ತ ವಿಶೇಷ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ವಿಶ್ವವಿದ್ಯಾಲಯದ ವಿಜ್ಞಾನ ನಿಕಾಯದ ಡೀನ್ ಪ್ರೊ. ಪಿ.ಆರ್. ಚೇತನ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ (ಮೌಲ್ಯಮಾಪನ) ಪ್ರೊ. ರಮೇಶ ಬಿ.ಕುಡೇನಟ್ಟಿ, ವಿತ್ತಾಧಿಕಾರಿ ಎಂ.ವಿ.ವಿಜಯಲಕ್ಷ್ಮಿ ಹಾಜರಿದ್ದರು.</p>.<p>ವಿಜ್ಞಾನ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಭಿತ್ತಿಚಿತ್ರ ರಚನೆ, ಚರ್ಚಾ ಸ್ಪರ್ಧೆ ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>