ಗೋಕುಲ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಆರ್.ಜಯರಾಂ, ‘ಪ್ರತಿ ವರ್ಷ ರಾಜ್ಯದಲ್ಲಿ 1.10 ಲಕ್ಷ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶ ಪಡೆಯುತ್ತಾರೆ. ಆದರೆ ಶೇ 10ರಷ್ಟು ಮಂದಿಗಷ್ಟೇ ಉದ್ಯೋಗ ಸಿಗುತ್ತಿದೆ. ಕೌಶಲ ಆಧಾರಿತ ಶಿಕ್ಷಣದ ಕೊರತೆಯೇ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಒಕ್ಕೂಟ ಒಂದು ಸಮಿತಿ ರಚಿಸಿ, ಆ ಸಮಿತಿಯಿಂದ ವರದಿ ಪಡೆದು ಅನುಷ್ಠಾನ ಮಾಡುತ್ತಿದೆ. ಇದರಿಂದ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಕೌಶಲಯುಕ್ತ ಶಿಕ್ಷಣ ದೊರೆಯುವದರ ಜೊತೆಗೆ, ಉದ್ಯೋಗವೂ ಲಭಿಸಲಿದೆ’ ಎಂದರು.