ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೃದಯ ಕಾಯಿಲೆಗೆ ತ್ವರಿತ ಚಿಕಿತ್ಸೆ ಅಗತ್ಯ: ಡಾ.ಸಿ.ಎನ್. ಅಶ್ವತ್ಥನಾರಾಯಣ

Last Updated 18 ಜನವರಿ 2023, 16:49 IST
ಅಕ್ಷರ ಗಾತ್ರ

‌ಬೆಂಗಳೂರು: ‘ಹಠಾತ್‌ ಹೃದಯಾಘಾತ ಅಥವಾ ಹೃದಯ ಸಂಬಂಧಿ ಗಂಭೀರ ಕಾಯಿಲೆ ಹೊಂದಿರುವವರಿಗೆ ಶೀಘ್ರವಾಗಿ ಚಿಕಿತ್ಸೆ ನೀಡಬೇಕು. ಇಲ್ಲವಾದಲ್ಲಿ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ನಾಗರಬಾವಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಬುಧವಾರ ಅತ್ಯಾಧುನಿಕ ಕ್ಯಾಥ್‌ ಲ್ಯಾಬ್ ಉದ್ಘಾಟಿಸಿದ ಅವರು, ‘ಹೃದಯ ಸಂಬಂಧಿ ಕಾಯಿಲೆಗಳಿಗೆ ತ್ವರಿತವಾಗಿ ಚಿಕಿತ್ಸೆ ನೀಡಲು ಕ್ಯಾಥ್‌ ಲ್ಯಾಬ್ ಸಹಾಯಕ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾಥ್‌ ಲ್ಯಾಬ್ ಪ್ರಾರಂಭಿಸಬೇಕು’ ಎಂದು ಹೇಳಿದರು.

ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಎಂ. ಮಹದೇವಯ್ಯ, ‘ಆರೋಗ್ಯ ಕ್ಷೇತ್ರದಲ್ಲಿ ಅತ್ಯಾಧುನಿಕ ಉಪಕರಣ ಹೊಂದುವುದು ಅನಿವಾರ್ಯ. ಇಂದು ಯಾವುದೇ ವಯಸ್ಸಿನ ಮಿತಿ ಇಲ್ಲದೇ ಹೃದಯಾಘಾತ ಸಂಭವಿಸುತ್ತಿದೆ. ಅಂತವರನ್ನು ದೂರದ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮೃತಪಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಅತ್ಯಾಧುನಿಕ ಕ್ಯಾಥ್ ಲ್ಯಾಬ್‌ ನಿರ್ಮಾಣಕ್ಕೆ ಆದ್ಯತೆ ನೀಡಬೇಕು’ ಎಂದರು.

ಫೋರ್ಟಿಸ್‌ ಆಸ್ಪತ್ರೆಯ ಹೃದಯ ತಜ್ಞ ಡಾ. ವಿವೇಕ್‌ ಜವಳಿ, ಡಾ.ಸಿ. ಪ್ರಭಾಕರ ಕೋರೆಗೋಳ್ ಹಾಗೂ ಆಸ್ಪತ್ರೆಯ ವ್ಯಾಪಾರ ವ್ಯವಹಾರದ ಮುಖ್ಯಸ್ಥ ಅಕ್ಷಯ್ ಒಲೇಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT