‘ಸಾವಿರಾರು ವರ್ಷಗಳ ಇತಿಹಾಸ ವಿರುವ ಭಾರತದಲ್ಲಿ ಜನಿಸುವುದೇ ಹೆಮ್ಮೆಯ ಸಂಗತಿ. ಈ ನಿಟ್ಟಿನಲ್ಲಿ ದೇಶದ ಹಿತ ಕಾಯುವ ವಿಚಾರ ಬಂದಾಗ ಜಾತಿ, ಧರ್ಮ, ಪಕ್ಷಭೇದ ಎಲ್ಲವನ್ನೂ ಮರೆತು ಸಂಘಟಿತರಾಗಬೇಕು’ ಎಂದು ವಿಶ್ವನಾಥ್ ಹೇಳಿದರು.
ಪೊಲೀಸ್, ಬ್ಯಾಂಡ್, ದೈಹಿಕ ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿ ಗಳ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಮಲಾಕರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವ ಹಣಾಧಿಕಾರಿ ಕಿಶೋರ್ ಕುಮಾರ್, ಮುಖಂಡರಾದ ಎಂ.ಸತೀಶ್, ಎಂ.ಮುನಿರಾಜು, ಡಾ.ಶಶಿಕುಮಾರ್, ಎ.ಸಿ.ಮುನಿಕೃಷ್ಣಪ್ಪ ಉಪಸ್ಥಿತರಿದ್ದರು.