<p><strong>ಬೆಂಗಳೂರು: </strong>ಸ್ವಂತ ಕಟ್ಟಡ ನಿರ್ಮಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಂಜೂರು ಮಾಡಿದ್ದ ನಿವೇಶನ ಯಾವ ಸ್ಥಳದಲ್ಲಿದೆ ಎಂಬ ಮಾಹಿತಿಯೇ ತನ್ನ ಬಳಿ ಇಲ್ಲ ಎಂದು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹೇಳಿದೆ.</p><p>ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಇಲಾಖೆ 2003–04ರಲ್ಲಿ ಬಿಡಿಎಗೆ ಅರ್ಜಿ ಸಲ್ಲಿಸಿತ್ತು. ಅದೇ ವರ್ಷ ನಿವೇಶನವೂ ಮಂಜೂರಾಗಿತ್ತು. ನಿವೇಶನದ ಸಂಪೂರ್ಣ ಮೊತ್ತವನ್ನು ಬಿಡಿಎಗೆ ಪಾವತಿಸಲಾಗಿತ್ತು. ಆದರೆ, ಇದುವರೆಗೂ ಆ ಸ್ಥಳದಲ್ಲಿ ಕಟ್ಟಡ ನಿರ್ಮಾಣವಾಗಿಲ್ಲ. ಮಂಜೂರಾದ ನಿವೇಶನದ ಯಾವ ದಾಖಲೆಗಳೂ ಇಲಾಖೆ ಬಳಿ ಇಲ್ಲ. ನಿವೇಶನ ಎಲ್ಲಿದೆ ಎಂಬ ಮಾಹಿತಿಯೂ ಲಭ್ಯವಿಲ್ಲ.</p><p>‘ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ’ ಕಾರ್ಯಾಧ್ಯಕ್ಷ ಚಂದ್ರಶೇಖರ ಪುಟ್ಟಪ್ಪ ಅವರು ಈ ಕುರಿತು ಮಾಹಿತಿ ಹಕ್ಕಿನ ಅಡಿ ಸಲ್ಲಿಸಿದ್ದ ಅರ್ಜಿಗೆ ಇಲಾಖೆ 15 ದಿನಗಳ ಕಾಲಾವಕಾಶ ಕೇಳಿತ್ತು. ಮೇಲ್ಮನವಿ ಸಲ್ಲಿಸಿದ ನಂತರ ‘ನಿವೇಶನದ ದಾಖಲೆಗಳು ಲಭ್ಯವಿಲ್ಲ’ ಎಂದು ಹಿಂಬರಹ ನೀಡಿದೆ.</p><p>‘ಸ್ವಂತಕಟ್ಟಡ ನಿರ್ಮಿಸಲು ಹಣ ಪಾವತಿಸಿ ಪಡೆದ ನಿವೇಶನದ ದಾಖಲೆ, ಮಾಹಿತಿ ಗೊತ್ತಿಲ್ಲ ಎನ್ನುವುದು ಇಲಾಖೆಯ ಕಾರ್ಯನಿರ್ವಹಣೆಗೆ ಕನ್ನಡಿಯಾಗಿದೆ. ಕೂಡಲೇ ನಿವೇಶನ ಹಾಗೂ ನಿವೇಶನದ ದಾಖಲೆಗಳನ್ನು ಹುಡುಕಿಸಬೇಕು. ಅಂಗವಿಕಲರ ಹಣ ವ್ಯರ್ಥವಾಗದಂತೆ ಯೋಜನೆ ರೂಪಿಸಬೇಕು’ ಎಂದು ಚಂದ್ರಶೇಖರ ಪುಟ್ಟಪ್ಪ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸ್ವಂತ ಕಟ್ಟಡ ನಿರ್ಮಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಂಜೂರು ಮಾಡಿದ್ದ ನಿವೇಶನ ಯಾವ ಸ್ಥಳದಲ್ಲಿದೆ ಎಂಬ ಮಾಹಿತಿಯೇ ತನ್ನ ಬಳಿ ಇಲ್ಲ ಎಂದು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹೇಳಿದೆ.</p><p>ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಇಲಾಖೆ 2003–04ರಲ್ಲಿ ಬಿಡಿಎಗೆ ಅರ್ಜಿ ಸಲ್ಲಿಸಿತ್ತು. ಅದೇ ವರ್ಷ ನಿವೇಶನವೂ ಮಂಜೂರಾಗಿತ್ತು. ನಿವೇಶನದ ಸಂಪೂರ್ಣ ಮೊತ್ತವನ್ನು ಬಿಡಿಎಗೆ ಪಾವತಿಸಲಾಗಿತ್ತು. ಆದರೆ, ಇದುವರೆಗೂ ಆ ಸ್ಥಳದಲ್ಲಿ ಕಟ್ಟಡ ನಿರ್ಮಾಣವಾಗಿಲ್ಲ. ಮಂಜೂರಾದ ನಿವೇಶನದ ಯಾವ ದಾಖಲೆಗಳೂ ಇಲಾಖೆ ಬಳಿ ಇಲ್ಲ. ನಿವೇಶನ ಎಲ್ಲಿದೆ ಎಂಬ ಮಾಹಿತಿಯೂ ಲಭ್ಯವಿಲ್ಲ.</p><p>‘ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ’ ಕಾರ್ಯಾಧ್ಯಕ್ಷ ಚಂದ್ರಶೇಖರ ಪುಟ್ಟಪ್ಪ ಅವರು ಈ ಕುರಿತು ಮಾಹಿತಿ ಹಕ್ಕಿನ ಅಡಿ ಸಲ್ಲಿಸಿದ್ದ ಅರ್ಜಿಗೆ ಇಲಾಖೆ 15 ದಿನಗಳ ಕಾಲಾವಕಾಶ ಕೇಳಿತ್ತು. ಮೇಲ್ಮನವಿ ಸಲ್ಲಿಸಿದ ನಂತರ ‘ನಿವೇಶನದ ದಾಖಲೆಗಳು ಲಭ್ಯವಿಲ್ಲ’ ಎಂದು ಹಿಂಬರಹ ನೀಡಿದೆ.</p><p>‘ಸ್ವಂತಕಟ್ಟಡ ನಿರ್ಮಿಸಲು ಹಣ ಪಾವತಿಸಿ ಪಡೆದ ನಿವೇಶನದ ದಾಖಲೆ, ಮಾಹಿತಿ ಗೊತ್ತಿಲ್ಲ ಎನ್ನುವುದು ಇಲಾಖೆಯ ಕಾರ್ಯನಿರ್ವಹಣೆಗೆ ಕನ್ನಡಿಯಾಗಿದೆ. ಕೂಡಲೇ ನಿವೇಶನ ಹಾಗೂ ನಿವೇಶನದ ದಾಖಲೆಗಳನ್ನು ಹುಡುಕಿಸಬೇಕು. ಅಂಗವಿಕಲರ ಹಣ ವ್ಯರ್ಥವಾಗದಂತೆ ಯೋಜನೆ ರೂಪಿಸಬೇಕು’ ಎಂದು ಚಂದ್ರಶೇಖರ ಪುಟ್ಟಪ್ಪ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>