‘ಮಾಗಡಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿವೆ. ಗುಂಡಿ ತಪ್ಪಿಸಲು ಹೋಗಿ ಭಾನುವಾರ ಅಪಘಾತವಾಗಿ, ಶರ್ಮಿಳಾ ಮೃತಪಟ್ಟಿದ್ದಾರೆ. ಇವರ ಸಾವಿಗೆ ಬಿಬಿಎಂಪಿ, ಜಲಮಂಡಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿ ಆಪ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು.