‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖಂಡರ ನಿಯೋಗ ಭೇಟಿ ಮಾಡಿದ್ದ ವೇಳೆ ನಿಗಮ ಸ್ಥಾಪಿಸುವ ಭರವಸೆ ನೀಡಿದ್ದರು. ವಿಧಾನ ಪರಿಷತ್ತಿನಲ್ಲಿ ಹೇಳಿಕೆ ನೀಡಿರುವ ಜವಳಿ ಸಚಿವ ಶ್ರೀಮಂತ ಪಾಟೀಲ, ‘ಈಗಾಗಲೇ ಮೂರು
ನಿಗಮಗಳನ್ನು ಸ್ಥಾಪಿಸಿರುವುದರಿಂದ ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ಅವರು ವಾಪಸ್ ಪಡೆಯದೇ ಇದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.