<p><strong>ನೆಲಮಂಗಲ</strong>: ಚಿಕಿತ್ಸಾ ಶುಲ್ಕವನ್ನು ಪಾವತಿಸದಿದ್ದರೆ ಶವಗಳನ್ನು ಹಸ್ತಾಂತರಿಸುವುದಿಲ್ಲ ಎಂದು ಪಟ್ಟಣದ ಸ್ವಾಸ್ಥ್ಯ ಆಸ್ಪತ್ರೆಯವರು ಪಟ್ಟು ಹಿಡಿದಿದ್ದರಿಂದ ಮೃತರ ಸಂಬಂಧಿಕರು ಮತ್ತು ಆಸ್ಪತ್ರೆಯ ಸಿಬ್ಬಂದಿ ನಡುವೆ ಗಲಾಟೆ ನಡೆಯಿತು.</p>.<p>ಕೋವಿಡ್ನಿಂದ ಮೃತಪಟ್ಟ ಇಬ್ಬರ ಚಿಕಿತ್ಸಾ ಶುಲ್ಕ ₹ 3 ಲಕ್ಷ ಬಾಕಿ ಇದೆ. ಅದನ್ನು ಪಾವತಿಸಬೇಕು ಎಂದು ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದರು.</p>.<p>‘ಮನೆಯಲ್ಲಿ ಇಬ್ಬರು ಹೆಣ್ಣುಮಕ್ಕಳು ಮಾತ್ರ ಇದ್ದು ಜೀವನ ನಡೆಸುವುದೇ ಕಷ್ಟವಾಗಿದೆ. ಇಷ್ಟೊಂದು ಹಣ ಎಲ್ಲಿಂದ ತರುವುದು’ ಮೃತರ ಸಂಬಂಧಿ ದೀಪಾ ಗೋಳು ತೋಡಿಕೊಂಡರು ಆಸ್ಪತ್ರೆ ಸಿಬ್ಬಂದಿ ಪಟ್ಟು ಸಡಿಲಿಸಿರಲಿಲ್ಲ.</p>.<p>ನಂತರ, ಸ್ಥಳಕ್ಕೆ ಬಂದ ತಹಶೀಲ್ದಾರ್ ಮತ್ತು ಅಧಿಕಾರಿಗಳ ತಂಡ ಪರಿಸ್ಥಿತಿಯನ್ನು ತಿಳಿಗೊಳಿಸಿದರು.</p>.<p>ತಹಶೀಲ್ದಾರ್ ಕೆ. ಮಂಜುನಾಥ್, ‘ತಕ್ಷಣವೇ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಬೇಕು. ಇದು ಎಲ್ಲ ಆಸ್ಪತ್ರೆಗಳಿಗೂ ಅನ್ವಯಿಸುತ್ತದೆ’ ಎಂದರು.</p>.<p>‘ರೋಗಿಗಳ ಕಡೆಯವರು ಸರ್ಕಾರಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಲ್ಲ. ಸರ್ಕಾರಕ್ಕೆ ಮಾಹಿತಿಯನ್ನೂ ನೀಡಿಲ್ಲ. ಮಾಹಿತಿ ನೀಡಿದರೆ ರೋಗಿಗಳು ಎಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗದ ಹಿನ್ನೆಲೆ ಮತ್ತು ಇಲಾಖೆಯಿಂದ ಮೇಲ್ವಿಚಾರಣೆ ನಡೆಸಲು ಸಹಕರಿಸಿದಂತಾಗುತ್ತದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>: ಚಿಕಿತ್ಸಾ ಶುಲ್ಕವನ್ನು ಪಾವತಿಸದಿದ್ದರೆ ಶವಗಳನ್ನು ಹಸ್ತಾಂತರಿಸುವುದಿಲ್ಲ ಎಂದು ಪಟ್ಟಣದ ಸ್ವಾಸ್ಥ್ಯ ಆಸ್ಪತ್ರೆಯವರು ಪಟ್ಟು ಹಿಡಿದಿದ್ದರಿಂದ ಮೃತರ ಸಂಬಂಧಿಕರು ಮತ್ತು ಆಸ್ಪತ್ರೆಯ ಸಿಬ್ಬಂದಿ ನಡುವೆ ಗಲಾಟೆ ನಡೆಯಿತು.</p>.<p>ಕೋವಿಡ್ನಿಂದ ಮೃತಪಟ್ಟ ಇಬ್ಬರ ಚಿಕಿತ್ಸಾ ಶುಲ್ಕ ₹ 3 ಲಕ್ಷ ಬಾಕಿ ಇದೆ. ಅದನ್ನು ಪಾವತಿಸಬೇಕು ಎಂದು ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದರು.</p>.<p>‘ಮನೆಯಲ್ಲಿ ಇಬ್ಬರು ಹೆಣ್ಣುಮಕ್ಕಳು ಮಾತ್ರ ಇದ್ದು ಜೀವನ ನಡೆಸುವುದೇ ಕಷ್ಟವಾಗಿದೆ. ಇಷ್ಟೊಂದು ಹಣ ಎಲ್ಲಿಂದ ತರುವುದು’ ಮೃತರ ಸಂಬಂಧಿ ದೀಪಾ ಗೋಳು ತೋಡಿಕೊಂಡರು ಆಸ್ಪತ್ರೆ ಸಿಬ್ಬಂದಿ ಪಟ್ಟು ಸಡಿಲಿಸಿರಲಿಲ್ಲ.</p>.<p>ನಂತರ, ಸ್ಥಳಕ್ಕೆ ಬಂದ ತಹಶೀಲ್ದಾರ್ ಮತ್ತು ಅಧಿಕಾರಿಗಳ ತಂಡ ಪರಿಸ್ಥಿತಿಯನ್ನು ತಿಳಿಗೊಳಿಸಿದರು.</p>.<p>ತಹಶೀಲ್ದಾರ್ ಕೆ. ಮಂಜುನಾಥ್, ‘ತಕ್ಷಣವೇ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಬೇಕು. ಇದು ಎಲ್ಲ ಆಸ್ಪತ್ರೆಗಳಿಗೂ ಅನ್ವಯಿಸುತ್ತದೆ’ ಎಂದರು.</p>.<p>‘ರೋಗಿಗಳ ಕಡೆಯವರು ಸರ್ಕಾರಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಲ್ಲ. ಸರ್ಕಾರಕ್ಕೆ ಮಾಹಿತಿಯನ್ನೂ ನೀಡಿಲ್ಲ. ಮಾಹಿತಿ ನೀಡಿದರೆ ರೋಗಿಗಳು ಎಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗದ ಹಿನ್ನೆಲೆ ಮತ್ತು ಇಲಾಖೆಯಿಂದ ಮೇಲ್ವಿಚಾರಣೆ ನಡೆಸಲು ಸಹಕರಿಸಿದಂತಾಗುತ್ತದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>