<p><strong>ನೆಲಮಂಗಲ: </strong>‘ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಪಂಚಾಯಿತಿ ಮಟ್ಟದಲ್ಲೇ ಅರ್ಜಿಗಳ ವಿಲೇವಾರಿ ಮಾಡುವ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು’ ಎಂದುರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ತಿಳಿಸಿದರು.</p>.<p>ವಿಶ್ವಗಾಣಿಗರ ಸಮುದಾಯ ಚಾರಿಟಬಲ್ ಟ್ರಸ್ಟ್, ಎಸ್ಸಿಲಾರ್ ವಿಷನ್ ಫೌಂಡೇಷನ್ ಹಾಗೂ ಐ–ದೃಷ್ಠಿ ಕಣ್ಣಿನ ಆಸ್ಪತ್ರೆಗಳ ಸಹಯೋಗದಲ್ಲಿ ನಗರೂರಿನಲ್ಲಿ ಹಮ್ಮಿಕೊಂಡಿದ್ದಕಣ್ಣಿನ ಉಚಿತ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರದ ಸಮಗ್ರ ಆಡಳಿತದ ದೈನಂದಿನ ಕಾರ್ಯವೈಖರಿಯನ್ನು ಸಾರ್ವಜನಿಕರ ಗಮನಕ್ಕೆ ತರಲು ‘ಮಾಹಿತಿ ಫಲಕ’ (ಡ್ಯಾಶ್ಬೋರ್ಡ್) ವ್ಯವಸ್ಥೆ ರೂಪಿಸಲು ಯೋಜಿಸಲಾಗಿದೆ’ ಎಂದರು.</p>.<p>ಎಸ್ಸಿಲಾರ್ ಫೌಂಡೇಷನ್ನ ಟ್ರಸ್ಟಿ ಮಹೇಶ್, ‘500ಕ್ಕೂ ಹೆಚ್ಚು ಜನರಿಗೆ ಕಣ್ಣಿನ ತಪಾಸಣೆ ನಡೆದಿದ್ದು, 162 ಮಂದಿಗೆ ಕನ್ನಡಕ ವಿತರಿಸಲಾಗಿದೆ. 40 ಜನರನ್ನು ಉಚಿತ ಶಸ್ತ್ರಚಿಕಿತ್ಸೆಗೆ ಪರಿಗಣಿಸಲಾಗಿದೆ’ ಎಂದು ಹೇಳಿದರು.</p>.<p>ನಗರೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ವಿ.ಯಶೋಧ, ಉಪಾಧ್ಯಕ್ಷೆ ಗೀತಾ, ಸದಸ್ಯರಾದ ಎನ್.ಎಚ್.ನರೇಂದ್ರಬಾಬು, ಗೋವಿಂದರಾಜು, ಫೌಂಡೇಷನ್ನಧರ್ಮಪ್ರಸಾದ್ ರೈ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ: </strong>‘ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಪಂಚಾಯಿತಿ ಮಟ್ಟದಲ್ಲೇ ಅರ್ಜಿಗಳ ವಿಲೇವಾರಿ ಮಾಡುವ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು’ ಎಂದುರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ತಿಳಿಸಿದರು.</p>.<p>ವಿಶ್ವಗಾಣಿಗರ ಸಮುದಾಯ ಚಾರಿಟಬಲ್ ಟ್ರಸ್ಟ್, ಎಸ್ಸಿಲಾರ್ ವಿಷನ್ ಫೌಂಡೇಷನ್ ಹಾಗೂ ಐ–ದೃಷ್ಠಿ ಕಣ್ಣಿನ ಆಸ್ಪತ್ರೆಗಳ ಸಹಯೋಗದಲ್ಲಿ ನಗರೂರಿನಲ್ಲಿ ಹಮ್ಮಿಕೊಂಡಿದ್ದಕಣ್ಣಿನ ಉಚಿತ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರದ ಸಮಗ್ರ ಆಡಳಿತದ ದೈನಂದಿನ ಕಾರ್ಯವೈಖರಿಯನ್ನು ಸಾರ್ವಜನಿಕರ ಗಮನಕ್ಕೆ ತರಲು ‘ಮಾಹಿತಿ ಫಲಕ’ (ಡ್ಯಾಶ್ಬೋರ್ಡ್) ವ್ಯವಸ್ಥೆ ರೂಪಿಸಲು ಯೋಜಿಸಲಾಗಿದೆ’ ಎಂದರು.</p>.<p>ಎಸ್ಸಿಲಾರ್ ಫೌಂಡೇಷನ್ನ ಟ್ರಸ್ಟಿ ಮಹೇಶ್, ‘500ಕ್ಕೂ ಹೆಚ್ಚು ಜನರಿಗೆ ಕಣ್ಣಿನ ತಪಾಸಣೆ ನಡೆದಿದ್ದು, 162 ಮಂದಿಗೆ ಕನ್ನಡಕ ವಿತರಿಸಲಾಗಿದೆ. 40 ಜನರನ್ನು ಉಚಿತ ಶಸ್ತ್ರಚಿಕಿತ್ಸೆಗೆ ಪರಿಗಣಿಸಲಾಗಿದೆ’ ಎಂದು ಹೇಳಿದರು.</p>.<p>ನಗರೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ವಿ.ಯಶೋಧ, ಉಪಾಧ್ಯಕ್ಷೆ ಗೀತಾ, ಸದಸ್ಯರಾದ ಎನ್.ಎಚ್.ನರೇಂದ್ರಬಾಬು, ಗೋವಿಂದರಾಜು, ಫೌಂಡೇಷನ್ನಧರ್ಮಪ್ರಸಾದ್ ರೈ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>