<p><strong>ನೆಲಮಂಗಲ:</strong> ಪಟ್ಟಣದ ಪೇಟೆ ಬೀದಿ ಸಮೀಪದ ಮನೆಯೊಂದಕ್ಕೆ ನುಗ್ಗಿ ವೃದ್ಧೆಯನ್ನು ಕೊಲೆ ಮಾಡಿ, ಆಭರಣಗಳನ್ನು ದೋಚಿದ್ದ ಆರೋಪಿಯನ್ನು, ಬುಧವಾರ ರಾತ್ರಿಯೇ ಪೊಲೀಸರು ಬಂಧಿಸಿದ್ದಾರೆ.</p>.<p>ಕೊಲೆಯಾದ ಶೋಭಾ (68) ಮತ್ತು ಪತಿಯೊಂದಿಗೆ ವಾಸವಿದ್ದರು. ಪತಿಗೆ ಕೈಕಾಲುಗಳು ಸ್ವಾಧೀನ ಇರಲಿಲ್ಲ. ಬುದ್ಧಿಮಾಂದ್ಯ ಕಾಯಿಲೆಯಿಂದ ನರಳುತ್ತಿದ್ದರು. ಬುಧವಾರ ಸಂಜೆ ಆರೋಪಿ ಕೊಲೆ ಮಾಡಿದ್ದ, ಆಭರಣ ದೋಚಿದ್ದ.</p>.<p>ಕೊಲೆ ಮಾಹಿತಿ ತಿಳಿದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಶ್ವಾನದಳದೊಂದಿಗೆ ಪರಿಶೀಲನೆ ನಡೆಸಿದರು. ಸ್ಥಳೀಯರೆ ಕೃತ್ಯ ಎಸಗಿದ್ದಾರೆ ಎಂದು ಅಂದಾಜಿಸಿದ ಪೊಲೀಸರು ಪೇಟೆಬೀದಿಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ಆರೋಪಿ ಶಿವಕುಮಾರ್(43) ಅವರನ್ನು ಬುಧವಾರ ರಾತ್ರಿ ಅವರ ಮನೆಯಲ್ಲಿ ಬಂಧಿಸಿದ್ದಾರೆ.</p>.<p>‘ವಿಪರೀತ ಸಾಲದಿಂದ ಕೊಲೆ ಮಾಡಿ, ಆಭರಣ ದೋಚಿದ್ದಾನೆ ಎಂದು ತಿಳಿದುಬಂದಿದೆ’ ಎಂದು ಪೊಲೀಸರು ತಿಳಿಸಿದರು.</p>.<p>ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಭರತ್ಗೌಡ, ಎಎಸ್ಐ ರಘು, ಕಾನ್ಸ್ಟೆಬಲ್ ಬಸವರಾಜು, ಚನ್ನೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಪಟ್ಟಣದ ಪೇಟೆ ಬೀದಿ ಸಮೀಪದ ಮನೆಯೊಂದಕ್ಕೆ ನುಗ್ಗಿ ವೃದ್ಧೆಯನ್ನು ಕೊಲೆ ಮಾಡಿ, ಆಭರಣಗಳನ್ನು ದೋಚಿದ್ದ ಆರೋಪಿಯನ್ನು, ಬುಧವಾರ ರಾತ್ರಿಯೇ ಪೊಲೀಸರು ಬಂಧಿಸಿದ್ದಾರೆ.</p>.<p>ಕೊಲೆಯಾದ ಶೋಭಾ (68) ಮತ್ತು ಪತಿಯೊಂದಿಗೆ ವಾಸವಿದ್ದರು. ಪತಿಗೆ ಕೈಕಾಲುಗಳು ಸ್ವಾಧೀನ ಇರಲಿಲ್ಲ. ಬುದ್ಧಿಮಾಂದ್ಯ ಕಾಯಿಲೆಯಿಂದ ನರಳುತ್ತಿದ್ದರು. ಬುಧವಾರ ಸಂಜೆ ಆರೋಪಿ ಕೊಲೆ ಮಾಡಿದ್ದ, ಆಭರಣ ದೋಚಿದ್ದ.</p>.<p>ಕೊಲೆ ಮಾಹಿತಿ ತಿಳಿದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಶ್ವಾನದಳದೊಂದಿಗೆ ಪರಿಶೀಲನೆ ನಡೆಸಿದರು. ಸ್ಥಳೀಯರೆ ಕೃತ್ಯ ಎಸಗಿದ್ದಾರೆ ಎಂದು ಅಂದಾಜಿಸಿದ ಪೊಲೀಸರು ಪೇಟೆಬೀದಿಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ಆರೋಪಿ ಶಿವಕುಮಾರ್(43) ಅವರನ್ನು ಬುಧವಾರ ರಾತ್ರಿ ಅವರ ಮನೆಯಲ್ಲಿ ಬಂಧಿಸಿದ್ದಾರೆ.</p>.<p>‘ವಿಪರೀತ ಸಾಲದಿಂದ ಕೊಲೆ ಮಾಡಿ, ಆಭರಣ ದೋಚಿದ್ದಾನೆ ಎಂದು ತಿಳಿದುಬಂದಿದೆ’ ಎಂದು ಪೊಲೀಸರು ತಿಳಿಸಿದರು.</p>.<p>ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಭರತ್ಗೌಡ, ಎಎಸ್ಐ ರಘು, ಕಾನ್ಸ್ಟೆಬಲ್ ಬಸವರಾಜು, ಚನ್ನೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>