ನಾಮನಿರ್ದೇಶಿತ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ಕರ್ನಾಟಕದಲ್ಲಿ ಈ ವರ್ಷದ ಮಳೆಗಾಲದಲ್ಲಿ ಹಾನಿಗೀಡಾದ ರಾಷ್ಟ್ರೀಯ ಹೆದ್ದಾರಿಗಳನ್ನು ಪರಿಶೀಲನೆ ನಡೆಸಿ ದುರಸ್ತಿ ಮಾಡಲಾಗಿದ್ದು, ಈಗ ಸಂಚಾರ ಯೋಗ್ಯವಾಗಿವೆ. ಕರ್ನಾಟಕದಲ್ಲಿ ಹೆದ್ದಾರಿಗಳ ನಿರ್ವಹಣೆಗೆ ಈ ವರ್ಷ ₹52.51 ಕೋಟಿ ಮೀಸಲಿಡಲಾಗಿದೆ. ಈ ಪೈಕಿ ₹19.08 ಕೋಟಿಯನ್ನು ಖರ್ಚು ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.