<p><strong>ಬೆಂಗಳೂರು</strong>: ‘ಯಾವುದೇ ಚರ್ಚೆಗಳನ್ನು ನಡೆಸದೇ ತರಾತುರಿಯಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಜಾರಿ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಯಿತು’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎ. ಮುರಿಗೆಪ್ಪ ಹೇಳಿದರು.</p>.<p>ಜನಪರ ಶಿಕ್ಷಣ ನೀತಿ ರಚಿಸಲು ಆಗ್ರಹಿಸಿ ಎಐಡಿಎಸ್ಒ ನಡೆಸಿದ್ದ ಸಮೀಕ್ಷೆಯ ಕಿರುಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರವು ವಿದ್ಯಾರ್ಥಿಗಳಿಂದ, ಶಿಕ್ಷಕರಿಂದ ಅಭಿಪ್ರಾಯ ಸಂಗ್ರಹಿಸಿಲ್ಲ. ಶಾಲೆ–ಕಾಲೇಜುಗಳಲ್ಲಿ ಅಗತ್ಯ ಇರುವಷ್ಟು ಕೊಠಡಿಗಳಿವೆಯೇ, ಪೂರ್ಣಕಾಲಿಕ ಬೋಧಕರು ಇದ್ದಾರೆಯೇ ಎಂದು ಪರಿಶೀಲಿಸಿಲ್ಲ. ಮೌಲಸೌಕರ್ಯಗಳನ್ನು ಕಲ್ಪಿಸದೇ ಎನ್ಇಪಿ ಜಾರಿ ಮಾಡಲಾಗಿದೆ. ಮೂರು ವರ್ಷದ ಪದವಿಯನ್ನು ನಾಲ್ಕು ವರ್ಷಗಳಿಗೆ ಏರಿಸಿ ವಿದ್ಯಾರ್ಥಿಗಳಿಗೆ ತೊಂದರೆ ನೀಡಲಾಗಿದೆ’ ಎಂದು ವಿಷಾದಿಸಿದರು.</p>.<p>ತುಮಕೂರು ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ರಾಜಾಸಾಬ್ ಮಾತನಾಡಿ, ‘ಸಾರ್ವಜನಿಕ ಶಿಕ್ಷಣ ಉಳಿಸಲು ಜನಪರ ಶಿಕ್ಷಣ ನೀತಿ ರೂಪಿಸಲು ಮಾಡಿರುವ ಈ ಸಮೀಕ್ಷೆ ಚಾರಿತ್ರಿಕವಾದುದು. ತಾರ್ಕಿಕ, ವೈಜ್ಞಾನಿಕವಾಗಿ ಯೋಚನೆ ಮಾಡುವ ವಿದ್ಯಾರ್ಥಿ ಸಮುದಾಯದ ಅವಶ್ಯಕತೆ ಸಮಾಜಕ್ಕೆ ಇದೆ’ ಎಂದರು.</p>.<p>ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಮಾತನಾಡಿ, ‘ಎನ್ಇಪಿ- 2020 ವಿರೋಧಿಸಿ ರಾಜ್ಯದಾದ್ಯಂತ ಸಮೀಕ್ಷೆ ನಡೆಸಲಾಗಿತ್ತು. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ನಡುವೆ ನಡೆಸಲಾಗಿದ್ದ ಈ ಸಮೀಕ್ಷೆಯಲ್ಲಿ 21 ಸಾವಿರ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ’ ಎಂದು ವಿವರಿಸಿದರು.</p>.<p>ಎಐಡಿಎಸ್ಒ ರಾಜ್ಯ ಘಟಕದ ಅಧ್ಯಕ್ಷೆ ಅಶ್ವಿನಿ ಕೆ.ಎಸ್. ಮಾತನಾಡಿ, ‘ಸರ್ಕಾರವು ಶಿಕ್ಷಣವನ್ನು ಎನ್ಇಪಿ ಮೂಲಕ ವಿಶ್ವದ ಮಾರುಕಟ್ಟೆಯನ್ನಾಗಿಸಲು ಹೊರಟಿದೆ. ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಇಂತಹ ವಿದ್ಯಾರ್ಥಿ ವಿರೋಧಿ ಶಿಕ್ಷಣ ನೀತಿಯ ವಿರುದ್ಧ ಚಳವಳಿ ಕಟ್ಟುವ ಅವಶ್ಯಕತೆ ಇದೆ’ ಎಂದು ತಿಳಿಸಿದರು.</p>.<p>‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ., ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷರಾದ ಹನಮಂತು, ಅಭಯಾ ದಿವಾಕರ್ ಉಪಸ್ಥಿತರಿದ್ದರು.</p>.<div><blockquote>ಶಿಕ್ಷಣವು ಉದ್ಯೋಗ ಗಳಿಕೆಗೆ ಸೀಮಿತವಲ್ಲ. ಬದಲಿಗೆ ಜೀವನವನ್ನು ಸ್ವತಂತ್ರವಾಗಿ ನಿಭಾಯಿಸಲು ವ್ಯಕ್ತಿಯೊಬ್ಬನಿಗೆ ಧೈರ್ಯ ತುಂಬುವ ಪ್ರಕ್ರಿಯೆ.</blockquote><span class="attribution">ಎ. ಮುರಿಗೆಪ್ಪ, ವಿಶ್ರಾಂತ ಕುಲಪತಿ ಹಂಪಿ ಕನ್ನಡ ವಿ.ವಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಯಾವುದೇ ಚರ್ಚೆಗಳನ್ನು ನಡೆಸದೇ ತರಾತುರಿಯಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಜಾರಿ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಯಿತು’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎ. ಮುರಿಗೆಪ್ಪ ಹೇಳಿದರು.</p>.<p>ಜನಪರ ಶಿಕ್ಷಣ ನೀತಿ ರಚಿಸಲು ಆಗ್ರಹಿಸಿ ಎಐಡಿಎಸ್ಒ ನಡೆಸಿದ್ದ ಸಮೀಕ್ಷೆಯ ಕಿರುಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರವು ವಿದ್ಯಾರ್ಥಿಗಳಿಂದ, ಶಿಕ್ಷಕರಿಂದ ಅಭಿಪ್ರಾಯ ಸಂಗ್ರಹಿಸಿಲ್ಲ. ಶಾಲೆ–ಕಾಲೇಜುಗಳಲ್ಲಿ ಅಗತ್ಯ ಇರುವಷ್ಟು ಕೊಠಡಿಗಳಿವೆಯೇ, ಪೂರ್ಣಕಾಲಿಕ ಬೋಧಕರು ಇದ್ದಾರೆಯೇ ಎಂದು ಪರಿಶೀಲಿಸಿಲ್ಲ. ಮೌಲಸೌಕರ್ಯಗಳನ್ನು ಕಲ್ಪಿಸದೇ ಎನ್ಇಪಿ ಜಾರಿ ಮಾಡಲಾಗಿದೆ. ಮೂರು ವರ್ಷದ ಪದವಿಯನ್ನು ನಾಲ್ಕು ವರ್ಷಗಳಿಗೆ ಏರಿಸಿ ವಿದ್ಯಾರ್ಥಿಗಳಿಗೆ ತೊಂದರೆ ನೀಡಲಾಗಿದೆ’ ಎಂದು ವಿಷಾದಿಸಿದರು.</p>.<p>ತುಮಕೂರು ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ರಾಜಾಸಾಬ್ ಮಾತನಾಡಿ, ‘ಸಾರ್ವಜನಿಕ ಶಿಕ್ಷಣ ಉಳಿಸಲು ಜನಪರ ಶಿಕ್ಷಣ ನೀತಿ ರೂಪಿಸಲು ಮಾಡಿರುವ ಈ ಸಮೀಕ್ಷೆ ಚಾರಿತ್ರಿಕವಾದುದು. ತಾರ್ಕಿಕ, ವೈಜ್ಞಾನಿಕವಾಗಿ ಯೋಚನೆ ಮಾಡುವ ವಿದ್ಯಾರ್ಥಿ ಸಮುದಾಯದ ಅವಶ್ಯಕತೆ ಸಮಾಜಕ್ಕೆ ಇದೆ’ ಎಂದರು.</p>.<p>ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಮಾತನಾಡಿ, ‘ಎನ್ಇಪಿ- 2020 ವಿರೋಧಿಸಿ ರಾಜ್ಯದಾದ್ಯಂತ ಸಮೀಕ್ಷೆ ನಡೆಸಲಾಗಿತ್ತು. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ನಡುವೆ ನಡೆಸಲಾಗಿದ್ದ ಈ ಸಮೀಕ್ಷೆಯಲ್ಲಿ 21 ಸಾವಿರ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ’ ಎಂದು ವಿವರಿಸಿದರು.</p>.<p>ಎಐಡಿಎಸ್ಒ ರಾಜ್ಯ ಘಟಕದ ಅಧ್ಯಕ್ಷೆ ಅಶ್ವಿನಿ ಕೆ.ಎಸ್. ಮಾತನಾಡಿ, ‘ಸರ್ಕಾರವು ಶಿಕ್ಷಣವನ್ನು ಎನ್ಇಪಿ ಮೂಲಕ ವಿಶ್ವದ ಮಾರುಕಟ್ಟೆಯನ್ನಾಗಿಸಲು ಹೊರಟಿದೆ. ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಇಂತಹ ವಿದ್ಯಾರ್ಥಿ ವಿರೋಧಿ ಶಿಕ್ಷಣ ನೀತಿಯ ವಿರುದ್ಧ ಚಳವಳಿ ಕಟ್ಟುವ ಅವಶ್ಯಕತೆ ಇದೆ’ ಎಂದು ತಿಳಿಸಿದರು.</p>.<p>‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ., ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷರಾದ ಹನಮಂತು, ಅಭಯಾ ದಿವಾಕರ್ ಉಪಸ್ಥಿತರಿದ್ದರು.</p>.<div><blockquote>ಶಿಕ್ಷಣವು ಉದ್ಯೋಗ ಗಳಿಕೆಗೆ ಸೀಮಿತವಲ್ಲ. ಬದಲಿಗೆ ಜೀವನವನ್ನು ಸ್ವತಂತ್ರವಾಗಿ ನಿಭಾಯಿಸಲು ವ್ಯಕ್ತಿಯೊಬ್ಬನಿಗೆ ಧೈರ್ಯ ತುಂಬುವ ಪ್ರಕ್ರಿಯೆ.</blockquote><span class="attribution">ಎ. ಮುರಿಗೆಪ್ಪ, ವಿಶ್ರಾಂತ ಕುಲಪತಿ ಹಂಪಿ ಕನ್ನಡ ವಿ.ವಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>