<p><strong>ಬೆಂಗಳೂರು:</strong> ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಮೂಲಕ ಬಹುತ್ವ ಸಂಸ್ಕೃತಿ ನಾಶ ಮಾಡಲು ಸರ್ಕಾರ ಮುಂದಾಗಿದೆ’ ಎಂದು ಸಾಹಿತಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಕಳವಳ ವ್ಯಕ್ತಪಡಿಸಿದರು.</p>.<p>ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್ಇಸಿ) ಭಾನುವಾರ ಆಯೋಜಿಸಿದ್ದ ಎರಡನೇ ರಾಜ್ಯಮಟ್ಟದ ಶಿಕ್ಷಣ ಉಳಿಸಿ ಸಮ್ಮೇಳನದಲ್ಲಿ ಮಾತನಾ ಡಿದ ಅವರು, ‘ಭಾರತ ವೈವಿಧ್ಯತೆಯ ರಾಷ್ಟ್ರ. ಆದರೆ, ಸರ್ಕಾರ ಏಕ ಭಾಷೆ, ಏಕ ಸಂಸ್ಕೃತಿಯನ್ನು ಹೇರಲು ಯತ್ನಿಸುತ್ತಿರುವುದು ಅಪಾಯಕಾರಿ’ ಎಂದರು.</p>.<p>‘ಕೆಲವು ಭಾಷೆಗಳಿಗೆ ಆದ್ಯತೆ ನೀಡುವ ಮೂಲಕ ಪ್ರಾದೇಶಿಕ ಭಾಷೆಗಳನ್ನು ಕಡೆಗಣಿಸಲಾಗುತ್ತಿದೆ. ಆಕ್ರಮಣಕಾರಿ ರೀತಿಯಲ್ಲಿ ಹಿಂದಿ ಹೇರ ಲಾಗುತ್ತಿದೆ. ಈಗ ಶಿಕ್ಷಣ ಕ್ಷೇತ್ರದಲ್ಲಿ ಹಿಂದಿ ಭಾಷೆಯ ಪ್ರಭಾವ ಹೆಚ್ಚಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ದೂರಿದರು.</p>.<p>‘ಮಾನವೀಯ ಸಂವೇದನೆಯುಳ್ಳ ಶಿಕ್ಷಣ ನೀತಿಯನ್ನು ರೂಪಿಸುವ ಬದಲು ಕೋಮುದ್ವೇಷವನ್ನು ಬಿತ್ತುವ ಪ್ರಯತ್ನ ನಡೆಸಲಾಗುತ್ತಿದೆ. ಈ ಮೂಲಕ ಯುವಪೀಳಿಗೆಯ ಮನಸ್ಸುಗಳನ್ನು ಮಲಿನಗೊಳಿಸಿ ಧರ್ಮದ ಸೈನಿಕರನ್ನಾಗಿ ಪರಿವರ್ತಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ’ ಎಂದು ಅಸಮಾಧಾನ<br />ವ್ಯಕ್ತಪಡಿಸಿದರು.</p>.<p>ಎಐಎಸ್ಇಸಿ ರಾಜ್ಯ ಕಾರ್ಯದರ್ಶಿ ಕೆ. ಉಮಾ ಮಾತನಾಡಿ, ‘ಬಿಜೆಪಿ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ. ತಾನು ಅಧಿಕಾರದಲ್ಲಿ ಇಲ್ಲದಿದ್ದಾಗ ಕಾಂಗ್ರೆಸ್ ರೂಪಿಸಿದ್ದ ಶಿಕ್ಷಣ ನೀತಿಯನ್ನು ವಿರೋಧಿಸಿತ್ತು. ಆದರೆ, ಅಧಿಕಾರಕ್ಕೆ ಬಂದ ಮೇಲೆ ಅದೇ ರೀತಿಯ ನೀತಿಯನ್ನು ಬಿಜೆಪಿ ಜಾರಿಗೊಳಿಸಿದೆ’ ಎಂದು ಟೀಕಿಸಿದರು.</p>.<p>‘ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಮತ್ತು ಸೆನೆಟ್ಗಳ ಅಧಿಕಾರ ಕಸಿಯುವ ಪ್ರಯತ್ನ ಮಾಡಲಾಗುತ್ತಿದೆ. ಪ್ರತಿಯೊಂದು ಕಾಲೇಜುಗಳು ಈಗ ವಿಶ್ವವಿದ್ಯಾಲಯಗಳಾಗುತ್ತಿವೆ. ಇದರಿಂದ, ಸಾವಿರಾರು ವಿಶ್ವವಿದ್ಯಾಲಯಗಳು ಹುಟ್ಟಿಕೊಂಡಿವೆ. ಆದರೆ, ಗುಣಮಟ್ಟದ ಬಗ್ಗೆ ಗಮನಹರಿಸಿಲ್ಲ’ ಎಂದರು.</p>.<p>ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಟಿ.ಆರ್. ಚಂದ್ರ ಶೇಖರ್, ‘ಜನಸಾಮಾನ್ಯರ ಶಿಕ್ಷಣದ ಹಕ್ಕನ್ನು ಎನ್ಇಪಿ ಕಿತ್ತುಕೊಳ್ಳಲಿದೆ. ಈ ನೀತಿ ಮೂಲಕ ಸಂವಿಧಾನದ ಮೂಲ ಆಶಯಗಳನ್ನೇ ತಿರುಚಲಾಗುತ್ತಿದೆ. ರಾಜ್ಯದ ಶೈಕ್ಷಣಿಕ ವಾತಾ ವರಣ ಈಗಾಗಲೇ ದುಃಸ್ಥಿತಿ ತಲುಪಿದೆ. ಹೀಗಿರುವಾಗ ಈ ನೀತಿ ಕರ್ನಾಟಕಕ್ಕೆ ಸೂಕ್ತವಲ್ಲ. ಪೂರ್ವ ಸಿದ್ಧತೆಗಳು ಇಲ್ಲ ದೆಯೇ ಜಾರಿಗೊಳಿಸುವ ನೀತಿಗಳಿಂದ ಅನುಕೂಲಕ್ಕಿಂತ ಅಪಾಯವೇ ಹೆಚ್ಚು’ ಎಂದರು.</p>.<p>ಎಐಎಸ್ಇಸಿಯ ಆರ್.ಕೆ. ವೀರಭದ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಮೂಲಕ ಬಹುತ್ವ ಸಂಸ್ಕೃತಿ ನಾಶ ಮಾಡಲು ಸರ್ಕಾರ ಮುಂದಾಗಿದೆ’ ಎಂದು ಸಾಹಿತಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಕಳವಳ ವ್ಯಕ್ತಪಡಿಸಿದರು.</p>.<p>ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್ಇಸಿ) ಭಾನುವಾರ ಆಯೋಜಿಸಿದ್ದ ಎರಡನೇ ರಾಜ್ಯಮಟ್ಟದ ಶಿಕ್ಷಣ ಉಳಿಸಿ ಸಮ್ಮೇಳನದಲ್ಲಿ ಮಾತನಾ ಡಿದ ಅವರು, ‘ಭಾರತ ವೈವಿಧ್ಯತೆಯ ರಾಷ್ಟ್ರ. ಆದರೆ, ಸರ್ಕಾರ ಏಕ ಭಾಷೆ, ಏಕ ಸಂಸ್ಕೃತಿಯನ್ನು ಹೇರಲು ಯತ್ನಿಸುತ್ತಿರುವುದು ಅಪಾಯಕಾರಿ’ ಎಂದರು.</p>.<p>‘ಕೆಲವು ಭಾಷೆಗಳಿಗೆ ಆದ್ಯತೆ ನೀಡುವ ಮೂಲಕ ಪ್ರಾದೇಶಿಕ ಭಾಷೆಗಳನ್ನು ಕಡೆಗಣಿಸಲಾಗುತ್ತಿದೆ. ಆಕ್ರಮಣಕಾರಿ ರೀತಿಯಲ್ಲಿ ಹಿಂದಿ ಹೇರ ಲಾಗುತ್ತಿದೆ. ಈಗ ಶಿಕ್ಷಣ ಕ್ಷೇತ್ರದಲ್ಲಿ ಹಿಂದಿ ಭಾಷೆಯ ಪ್ರಭಾವ ಹೆಚ್ಚಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ದೂರಿದರು.</p>.<p>‘ಮಾನವೀಯ ಸಂವೇದನೆಯುಳ್ಳ ಶಿಕ್ಷಣ ನೀತಿಯನ್ನು ರೂಪಿಸುವ ಬದಲು ಕೋಮುದ್ವೇಷವನ್ನು ಬಿತ್ತುವ ಪ್ರಯತ್ನ ನಡೆಸಲಾಗುತ್ತಿದೆ. ಈ ಮೂಲಕ ಯುವಪೀಳಿಗೆಯ ಮನಸ್ಸುಗಳನ್ನು ಮಲಿನಗೊಳಿಸಿ ಧರ್ಮದ ಸೈನಿಕರನ್ನಾಗಿ ಪರಿವರ್ತಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ’ ಎಂದು ಅಸಮಾಧಾನ<br />ವ್ಯಕ್ತಪಡಿಸಿದರು.</p>.<p>ಎಐಎಸ್ಇಸಿ ರಾಜ್ಯ ಕಾರ್ಯದರ್ಶಿ ಕೆ. ಉಮಾ ಮಾತನಾಡಿ, ‘ಬಿಜೆಪಿ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ. ತಾನು ಅಧಿಕಾರದಲ್ಲಿ ಇಲ್ಲದಿದ್ದಾಗ ಕಾಂಗ್ರೆಸ್ ರೂಪಿಸಿದ್ದ ಶಿಕ್ಷಣ ನೀತಿಯನ್ನು ವಿರೋಧಿಸಿತ್ತು. ಆದರೆ, ಅಧಿಕಾರಕ್ಕೆ ಬಂದ ಮೇಲೆ ಅದೇ ರೀತಿಯ ನೀತಿಯನ್ನು ಬಿಜೆಪಿ ಜಾರಿಗೊಳಿಸಿದೆ’ ಎಂದು ಟೀಕಿಸಿದರು.</p>.<p>‘ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಮತ್ತು ಸೆನೆಟ್ಗಳ ಅಧಿಕಾರ ಕಸಿಯುವ ಪ್ರಯತ್ನ ಮಾಡಲಾಗುತ್ತಿದೆ. ಪ್ರತಿಯೊಂದು ಕಾಲೇಜುಗಳು ಈಗ ವಿಶ್ವವಿದ್ಯಾಲಯಗಳಾಗುತ್ತಿವೆ. ಇದರಿಂದ, ಸಾವಿರಾರು ವಿಶ್ವವಿದ್ಯಾಲಯಗಳು ಹುಟ್ಟಿಕೊಂಡಿವೆ. ಆದರೆ, ಗುಣಮಟ್ಟದ ಬಗ್ಗೆ ಗಮನಹರಿಸಿಲ್ಲ’ ಎಂದರು.</p>.<p>ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಟಿ.ಆರ್. ಚಂದ್ರ ಶೇಖರ್, ‘ಜನಸಾಮಾನ್ಯರ ಶಿಕ್ಷಣದ ಹಕ್ಕನ್ನು ಎನ್ಇಪಿ ಕಿತ್ತುಕೊಳ್ಳಲಿದೆ. ಈ ನೀತಿ ಮೂಲಕ ಸಂವಿಧಾನದ ಮೂಲ ಆಶಯಗಳನ್ನೇ ತಿರುಚಲಾಗುತ್ತಿದೆ. ರಾಜ್ಯದ ಶೈಕ್ಷಣಿಕ ವಾತಾ ವರಣ ಈಗಾಗಲೇ ದುಃಸ್ಥಿತಿ ತಲುಪಿದೆ. ಹೀಗಿರುವಾಗ ಈ ನೀತಿ ಕರ್ನಾಟಕಕ್ಕೆ ಸೂಕ್ತವಲ್ಲ. ಪೂರ್ವ ಸಿದ್ಧತೆಗಳು ಇಲ್ಲ ದೆಯೇ ಜಾರಿಗೊಳಿಸುವ ನೀತಿಗಳಿಂದ ಅನುಕೂಲಕ್ಕಿಂತ ಅಪಾಯವೇ ಹೆಚ್ಚು’ ಎಂದರು.</p>.<p>ಎಐಎಸ್ಇಸಿಯ ಆರ್.ಕೆ. ವೀರಭದ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>