<p><strong>ಬೆಂಗಳೂರು:</strong> ಮನೆಗೆ ನುಗ್ಗಿ ಚಿನ್ನ, ವಜ್ರ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕಳ್ಳತನ ಮಾಡುತ್ತಿದ್ದ ನೇಪಾಳಿ ತಂಡದ ಐವರನ್ನು ತಲಘಟ್ಟಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ನೇಪಾಳದ ಲಾಲ್ ಬಹದ್ದೂರ್ ಬೋರಾ, ಕಮಲ್ ಬಹದ್ದೂರ್, ಕಿರಣ್ ಬೋರಾ, ನೇತ್ರ ಬಹದ್ದೂರ್, ರಾಜೇಶ್ ಬಹದ್ದೂರ್ ಬಂಧಿತರು.</p>.<p>ಬಂಧಿತರಿಂದ 502 ಗ್ರಾಂ. ಚಿನ್ನ ಹಾಗೂ ವಜ್ರಾಭರಣ, 4.5 ಕೆ.ಜಿ ಬೆಳ್ಳಿ ಸಾಮಗ್ರಿ, ಎರಡು ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇವುಗಳ ಮೌಲ್ಯ ₹ 50 ಲಕ್ಷ ಎಂದು ಅಂದಾಜಿಸಲಾಗಿದೆ.</p>.<p>ಠಾಣಾ ವ್ಯಾಪ್ತಿಯ ಗುಬ್ಬಲಾಳದ ಜೆ.ಎಚ್.ಬಿ.ಸಿ.ಎಸ್ ಲೇಔಟ್ನಲ್ಲಿ ವಾಸವಿರುವ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ಆರೋಪಿಗಳು ಕಳ್ಳತನ ಮಾಡಿ ಪರಾರಿ ಆಗಿದ್ದರು. ಮನೆಯ ಮಾಲೀಕರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>‘ಅಪಾರ್ಟ್ಮೆಂಟ್ ಸೆಕ್ಯೂರಿಟಿ ಗಾರ್ಡ್ ಆಗಿ ಆರೋಪಿಗಳು ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುವಾಗ ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದರು. ರಾತ್ರಿ ವೇಳೆ ಹೊಂಚು ಹಾಕಿ ಬೀಗ ಒಡೆದು ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮನೆಗೆ ನುಗ್ಗಿ ಚಿನ್ನ, ವಜ್ರ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕಳ್ಳತನ ಮಾಡುತ್ತಿದ್ದ ನೇಪಾಳಿ ತಂಡದ ಐವರನ್ನು ತಲಘಟ್ಟಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ನೇಪಾಳದ ಲಾಲ್ ಬಹದ್ದೂರ್ ಬೋರಾ, ಕಮಲ್ ಬಹದ್ದೂರ್, ಕಿರಣ್ ಬೋರಾ, ನೇತ್ರ ಬಹದ್ದೂರ್, ರಾಜೇಶ್ ಬಹದ್ದೂರ್ ಬಂಧಿತರು.</p>.<p>ಬಂಧಿತರಿಂದ 502 ಗ್ರಾಂ. ಚಿನ್ನ ಹಾಗೂ ವಜ್ರಾಭರಣ, 4.5 ಕೆ.ಜಿ ಬೆಳ್ಳಿ ಸಾಮಗ್ರಿ, ಎರಡು ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇವುಗಳ ಮೌಲ್ಯ ₹ 50 ಲಕ್ಷ ಎಂದು ಅಂದಾಜಿಸಲಾಗಿದೆ.</p>.<p>ಠಾಣಾ ವ್ಯಾಪ್ತಿಯ ಗುಬ್ಬಲಾಳದ ಜೆ.ಎಚ್.ಬಿ.ಸಿ.ಎಸ್ ಲೇಔಟ್ನಲ್ಲಿ ವಾಸವಿರುವ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ಆರೋಪಿಗಳು ಕಳ್ಳತನ ಮಾಡಿ ಪರಾರಿ ಆಗಿದ್ದರು. ಮನೆಯ ಮಾಲೀಕರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>‘ಅಪಾರ್ಟ್ಮೆಂಟ್ ಸೆಕ್ಯೂರಿಟಿ ಗಾರ್ಡ್ ಆಗಿ ಆರೋಪಿಗಳು ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುವಾಗ ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದರು. ರಾತ್ರಿ ವೇಳೆ ಹೊಂಚು ಹಾಕಿ ಬೀಗ ಒಡೆದು ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>