ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಫೋಟಕ ಬಳಕೆಗೆ ಹೊಸ ಮಾರ್ಗಸೂಚಿ: ಸಚಿವ ಬಸವರಾಜ ಬೊಮ್ಮಾಯಿ

Last Updated 24 ಜನವರಿ 2021, 6:08 IST
ಅಕ್ಷರ ಗಾತ್ರ

ಬೆಂಗಳೂರು:‘ಗಣಿಗಾರಿಕೆಯಲ್ಲಿ ಸ್ಫೋಟಕ ವಸ್ತುಗಳ ಬಳಕೆ ಕುರಿತು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು,‘ಸ್ಫೋಟಕವಸ್ತುಗಳಿಗೆ ಅನುಮತಿ ನೀಡುವ ಕುರಿತುಗೃಹ ಇಲಾಖೆಯಲ್ಲಿ ಚರ್ಚೆಗಳು ನಡೆದಿವೆ. ಪರವಾನಗಿ ಪಡೆದವರು ಸ್ಫೋಟಕಗಳ ಬಳಕೆ ಪ್ರಮಾಣ‌, ಅದರ ಗುಣಮಟ್ಟ ಸೇರಿದಂತೆ ಪ್ರಮುಖ ಅಂಶಗಳ ಪರಾಮರ್ಶೆ ನಡೆದಿದೆ. ಇವುಗಳನ್ನು ಒಳಗೊಂಡ ಮಾರ್ಗಸೂಚಿಯನ್ನುಸೋಮವಾರ ಬಿಡುಗಡೆ ಮಾಡಲಾಗುವುದು’ ಎಂದರು.

‘ಹುಣಸೋಡಿ ಸ್ಫೋಟ ಪ್ರಕರಣದಲ್ಲಿ ಸುಧಾಕರ್ ಎಂಬಾತನನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಪ್ರಾಥಮಿಕ ವರದಿಭಾನುವಾರ ಬರುವ ಸಾಧ್ಯತೆ ಇದೆ.ಗಣಿಗಾರಿಕೆ ಪರವಾನಗಿ ಪಡೆದವರು ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ಪರವಾನಗಿ ಇಲ್ಲದೆ ಅನ್ಯಮಾರ್ಗಗಳಿಂದ ಗಣಿಗಾರಿಕೆ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದೂ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT