<p><strong>ರಾಜರಾಜೇಶ್ವರಿನಗರ:</strong> ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ಅಧ್ಯಕ್ಷರಾಗಿಡಿ.ಹನುಮಂತಯ್ಯ, ಉಪಾಧ್ಯಕ್ಷರಾಗಿ ಎಂ.ಸಿ.ಪಟ್ಟಾಭಿರಾಮಯ್ಯ (ಜಯಣ್ಣ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹನುಮಂತಯ್ಯ ಅವರು ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ವಿಜಯಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.</p>.<p>‘ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ 30 ಶಾಖೆಗಳನ್ನು ಬ್ಯಾಂಕ್ ಹೊಂದಿದ್ದು, ಕೇಂದ್ರ ಕಚೇರಿ ಚಾಮರಾಜಪೇಟೆಯಲ್ಲಿದೆ. ಸುಮಾರು ₹7 ಕೋಟಿ ವೆಚ್ಚದಲ್ಲಿ ಕಟ್ಟಡದ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ರೈತರಿಗೆ ಬೆಳೆಸಾಲ, ಮಧ್ಯಮಾವಧಿ ಸಾಲ, ವಸತಿ, ನಿವೇಶನ ಸಾಲ, ಸಣ್ಣ, ಮಧ್ಯಮ ಕೈಗಾರಿಕೆ, ಚಿನ್ನದ ಸಾಲ, ಕುರಿ, ಕೋಳಿ-ಮೇಕೆ, ಹಸು ಸಾಕಾಣಿಕೆಗೆ ಸಾಲ ಸೇರಿದಂತೆ ವಿವಿಧ ಸಹಕಾರ ಸಂಘಗಳಿಗೆ ಸಾಲ ವಿತರಣೆ ಮತ್ತು ಸಂಘಗಳ ಅಭಿವೃದ್ಧಿಗೆ ಬ್ಯಾಂಕ್ ಮುಂದಾಗಿದೆ’ ಎಂದು ಅಧ್ಯಕ್ಷಡಿ.ಹನುಮಂತಯ್ಯ ತಿಳಿಸಿದರು.</p>.<p>ಬ್ಯಾಂಕಿನ ನಿರ್ದೇಶಕರಾದ ದೊಡ್ಡ ಬಸವರಾಜು, ನಾಗರಾಜು ಪಿ.ಎಂ, ಎಚ್.ಎಲ್.ಕೃಷ್ಣಪ್ಪ, ವೈ.ಎಚ್. ಮಂಜು, ಎಚ್.ಎನ್.ಅಶೋಕ್, ಕೃಷ್ಣಮೂರ್ತಿ, ಜಯರಾಮು, ಸೋಮಶೇಖರ ರೆಡ್ಡಿ, ಚುಂಚೇಗೌಡ, ಸೊಣ್ಣಪ್ಪ , ಬಾಬುರೆಡ್ಡಿ, ಸೊಣ್ಣೇಗೌಡ, ಸತೀಶ್ಗೌಡ, ವಿಜಯ್ದೇವ್, ಮಹಬೂಬ್, ಆಂಜನಪ್ಪ , ವಾಣಿಶ್ರೀ ಅವರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ಅಧ್ಯಕ್ಷರಾಗಿಡಿ.ಹನುಮಂತಯ್ಯ, ಉಪಾಧ್ಯಕ್ಷರಾಗಿ ಎಂ.ಸಿ.ಪಟ್ಟಾಭಿರಾಮಯ್ಯ (ಜಯಣ್ಣ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹನುಮಂತಯ್ಯ ಅವರು ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ವಿಜಯಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.</p>.<p>‘ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ 30 ಶಾಖೆಗಳನ್ನು ಬ್ಯಾಂಕ್ ಹೊಂದಿದ್ದು, ಕೇಂದ್ರ ಕಚೇರಿ ಚಾಮರಾಜಪೇಟೆಯಲ್ಲಿದೆ. ಸುಮಾರು ₹7 ಕೋಟಿ ವೆಚ್ಚದಲ್ಲಿ ಕಟ್ಟಡದ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ರೈತರಿಗೆ ಬೆಳೆಸಾಲ, ಮಧ್ಯಮಾವಧಿ ಸಾಲ, ವಸತಿ, ನಿವೇಶನ ಸಾಲ, ಸಣ್ಣ, ಮಧ್ಯಮ ಕೈಗಾರಿಕೆ, ಚಿನ್ನದ ಸಾಲ, ಕುರಿ, ಕೋಳಿ-ಮೇಕೆ, ಹಸು ಸಾಕಾಣಿಕೆಗೆ ಸಾಲ ಸೇರಿದಂತೆ ವಿವಿಧ ಸಹಕಾರ ಸಂಘಗಳಿಗೆ ಸಾಲ ವಿತರಣೆ ಮತ್ತು ಸಂಘಗಳ ಅಭಿವೃದ್ಧಿಗೆ ಬ್ಯಾಂಕ್ ಮುಂದಾಗಿದೆ’ ಎಂದು ಅಧ್ಯಕ್ಷಡಿ.ಹನುಮಂತಯ್ಯ ತಿಳಿಸಿದರು.</p>.<p>ಬ್ಯಾಂಕಿನ ನಿರ್ದೇಶಕರಾದ ದೊಡ್ಡ ಬಸವರಾಜು, ನಾಗರಾಜು ಪಿ.ಎಂ, ಎಚ್.ಎಲ್.ಕೃಷ್ಣಪ್ಪ, ವೈ.ಎಚ್. ಮಂಜು, ಎಚ್.ಎನ್.ಅಶೋಕ್, ಕೃಷ್ಣಮೂರ್ತಿ, ಜಯರಾಮು, ಸೋಮಶೇಖರ ರೆಡ್ಡಿ, ಚುಂಚೇಗೌಡ, ಸೊಣ್ಣಪ್ಪ , ಬಾಬುರೆಡ್ಡಿ, ಸೊಣ್ಣೇಗೌಡ, ಸತೀಶ್ಗೌಡ, ವಿಜಯ್ದೇವ್, ಮಹಬೂಬ್, ಆಂಜನಪ್ಪ , ವಾಣಿಶ್ರೀ ಅವರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>