<p><strong>ಬೆಂಗಳೂರು</strong>: ಕ್ಯಾನ್ಸರ್ ಅನ್ನು ಪ್ರಾಥಮಿಕ ಹಂತದಲ್ಲಿ ಹಾಗೂ ಮರುಕಳಿಸುವ ಪೂರ್ವದಲ್ಲಿಯೇ ಪತ್ತೆ ಹಚ್ಚುವ ‘ನಾವೆಲ್–ಬಯೋಮಾರ್ಕರ್ ಡಯಾಗ್ನಸ್ಟಿಕ್’ ಎಂಬ ಹೊಸ ಪರೀಕ್ಷಾ ವಿಧಾನವೊಂದನ್ನು ಎಚ್ಸಿಜಿ ಕ್ಯಾನ್ಸರ್ ಸೆಂಟರ್, ಟ್ರುಕನ್ ಡಯಾಗ್ನೋಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದೆ.</p>.<p>ಈ ಹೊಸ ಸಂಶೋಧನೆಯ ನೆರವಿನಿಂದ ಕ್ಯಾನ್ಸರ್ ಬರುವ ಮುನ್ನ ಹಾಗೂ ಮರುಕಳಿಸುವ ಪೂರ್ವದಲ್ಲಿಯೇ ನಿಖರವಾಗಿ ಪತ್ತೆ ಹಚ್ಚುವ ಜೊತೆಗೆ, ಯಾವುದೇ ರೀತಿಯ ಕ್ಯಾನ್ಸರ್ ಆಗಿದ್ದರೂ ಅದಕ್ಕೆ ನಿಖರವಾದ ಹಾಗೂ ಪರಿಣಾಮಕಾರಿ ಚಿಕಿತ್ಸೆಯನ್ನು ಈ ಪರೀಕ್ಷೆ ಮೌಲ್ಯಮಾಪನ ಮಾಡಲಿದೆ ಎಂದು ಎಚ್ಸಿಜಿ ಪ್ರಕಟಣೆ ತಿಳಿಸಿದೆ.</p>.<p>ಈ ಪರೀಕ್ಷೆಯ ಫಲಿತಾಂಶಗಳು ಮುಂದೆ ಕಿಮೊ ಅಥವಾ ಉದ್ದೇಶಿತ ಚಿಕಿತ್ಸೆಗೆ ಒಳಗಾಗುವ ರೋಗಿಗಳನ್ನು ಮೇಲ್ವಿಚಾರಣೆ ಮಾಡಲು ನೆರವಾಗುತ್ತದೆ ಎಂದಿದೆ.</p>.<p>‘ಈ ಹೊಸ ಪರೀಕ್ಷೆ ಕ್ಯಾನ್ಸರ್ ಪತ್ತೆಗೆ ಈಗಿರುವ ವಿಧಾನಗಳಿಗಿಂತ ಉತ್ತಮವಾಗಿದೆ’ ಎಂದು ಎಚ್ಸಿಜಿ ಕಾರ್ಯನಿರ್ವಾಹಕ ಅಧ್ಯಕ್ಷ ಡಾ.ಬಿ.ಎಸ್ ಅಜಯ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕ್ಯಾನ್ಸರ್ ಅನ್ನು ಪ್ರಾಥಮಿಕ ಹಂತದಲ್ಲಿ ಹಾಗೂ ಮರುಕಳಿಸುವ ಪೂರ್ವದಲ್ಲಿಯೇ ಪತ್ತೆ ಹಚ್ಚುವ ‘ನಾವೆಲ್–ಬಯೋಮಾರ್ಕರ್ ಡಯಾಗ್ನಸ್ಟಿಕ್’ ಎಂಬ ಹೊಸ ಪರೀಕ್ಷಾ ವಿಧಾನವೊಂದನ್ನು ಎಚ್ಸಿಜಿ ಕ್ಯಾನ್ಸರ್ ಸೆಂಟರ್, ಟ್ರುಕನ್ ಡಯಾಗ್ನೋಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದೆ.</p>.<p>ಈ ಹೊಸ ಸಂಶೋಧನೆಯ ನೆರವಿನಿಂದ ಕ್ಯಾನ್ಸರ್ ಬರುವ ಮುನ್ನ ಹಾಗೂ ಮರುಕಳಿಸುವ ಪೂರ್ವದಲ್ಲಿಯೇ ನಿಖರವಾಗಿ ಪತ್ತೆ ಹಚ್ಚುವ ಜೊತೆಗೆ, ಯಾವುದೇ ರೀತಿಯ ಕ್ಯಾನ್ಸರ್ ಆಗಿದ್ದರೂ ಅದಕ್ಕೆ ನಿಖರವಾದ ಹಾಗೂ ಪರಿಣಾಮಕಾರಿ ಚಿಕಿತ್ಸೆಯನ್ನು ಈ ಪರೀಕ್ಷೆ ಮೌಲ್ಯಮಾಪನ ಮಾಡಲಿದೆ ಎಂದು ಎಚ್ಸಿಜಿ ಪ್ರಕಟಣೆ ತಿಳಿಸಿದೆ.</p>.<p>ಈ ಪರೀಕ್ಷೆಯ ಫಲಿತಾಂಶಗಳು ಮುಂದೆ ಕಿಮೊ ಅಥವಾ ಉದ್ದೇಶಿತ ಚಿಕಿತ್ಸೆಗೆ ಒಳಗಾಗುವ ರೋಗಿಗಳನ್ನು ಮೇಲ್ವಿಚಾರಣೆ ಮಾಡಲು ನೆರವಾಗುತ್ತದೆ ಎಂದಿದೆ.</p>.<p>‘ಈ ಹೊಸ ಪರೀಕ್ಷೆ ಕ್ಯಾನ್ಸರ್ ಪತ್ತೆಗೆ ಈಗಿರುವ ವಿಧಾನಗಳಿಗಿಂತ ಉತ್ತಮವಾಗಿದೆ’ ಎಂದು ಎಚ್ಸಿಜಿ ಕಾರ್ಯನಿರ್ವಾಹಕ ಅಧ್ಯಕ್ಷ ಡಾ.ಬಿ.ಎಸ್ ಅಜಯ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>