ಇಲ್ಲಿನ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯಲ್ಲಿ ಎಂಆರ್ಐ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಈ ಹಿಂದೆ ಮೆಡಿಕಲ್ ಟೂರಿಸಂ ಪರಿಕಲ್ಪನೆ ಜಾರಿಗೆ ಬಂದಿತ್ತು. ಆದರೆ, ಸರಿಯಾದ ಯೋಜನೆ, ಅನುಷ್ಠಾನದ ಸಮಸ್ಯೆಯಿಂದ ಸ್ವಲ್ಪ ಹಿನ್ನಡೆಯಾಯಿತು. ಹೊರ ರಾಜ್ಯದಿಂದ ಬಂದವರು ಇಲ್ಲಿ ತರಬೇತಿ ಪಡೆದು ಮತ್ತೆ ವಾಪಸ್ ಹೋಗುತ್ತಿದ್ದರು. ಇದರಿಂದ ರಾಜ್ಯಕ್ಕೇನೂ ಪ್ರಯೋಜನ ಆಗುತ್ತಿರಲಿಲ್ಲ. ಈಗ ಆ ಪರಿಕಲ್ಪನೆಯಲ್ಲಿ ಹೊಸತನ ತರಲು ಮುಂದಾಗಿದ್ದೇವೆ’ ಎಂದರು.