<p><strong>ಬೆಂಗಳೂರು:</strong> ಬಿಬಿಎಂಪಿಯಲ್ಲಿರುವ ಆಸ್ತಿಗಳಿಗೆ ಖಾತಾ ಹೊಂದಿರದ ಮಾಲೀಕರ ಅನುಕೂಲಕ್ಕಾಗಿ ಹೊಸ ವೆಬ್ಸೈಟ್ (<a href="https://bbmp.karnataka.gov.in/NewKhata/">https://BBMP.karnataka.gov.in/NewKhata</a>) ಆರಂಭಿಸಲಾಗಿದೆ.</p>.<p>ನಗರದಲ್ಲಿ ಐದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಆಸ್ತಿ ಮಾಲೀಕರು ಬಿಬಿಎಂಪಿಯಿಂದ ಖಾತಾ ಹೊಂದಿಲ್ಲ. ಕೈಬರಹದ ಖಾತಾವನ್ನೂ ಹೊಂದಿರುವುದಿಲ್ಲ. ಖಾತಾ ಇಲ್ಲದೆಯೇ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಈ ಸ್ವತ್ತುಗಳಿಗೆ ಸಂಬಂಧಿಸಿದ ವಹಿವಾಟು ನಡೆಸುತ್ತಿದ್ದು, ಆಸ್ತಿ ತೆರಿಗೆ ವ್ಯಾಪ್ತಿಯಿಂದಲೂ ಹೊರಗುಳಿದಿವೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸುದ್ದಿಗಾರರಿಗೆ ಸೋಮವಾರ ತಿಳಿಸಿದರು.</p>.<p>ಎಲ್ಲ ಆಸ್ತಿಗಳಿಗೂ ಖಾತಾ ನೀಡಬೇಕು. ಎಲ್ಲವನ್ನೂ ತೆರಿಗೆ ವ್ಯಾಪ್ತಿಗೆ ತರಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೂಚಿಸಿದ್ದಾರೆ. ಅದರಂತೆ ಬಿಬಿಎಂಪಿ ಕ್ರಮ ಕೈಗೊಳ್ಳುತ್ತಿದೆ ಎಂದರು.</p>.<p>ಮಾಲೀಕರು ಹೊಸದಾಗಿ ಖಾತಾ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಧಾರ್ ಸಂಖ್ಯೆ, ಮಾರಾಟ/ನೋಂದಣಿ ಪತ್ರದ ಸಂಖ್ಯೆ, ಆಸ್ತಿ ಚಿತ್ರ, ಮಾರಾಟ/ ನೋಂದಣಿ ಪತ್ರಕ್ಕೆ ಕನಿಷ್ಠ ಒಂದು ದಿನ ಮೊದಲಿನಿಂದ ಆಸ್ತಿಯ 2024ರ ಅಕ್ಟೋಬರ್ 31ರವರೆಗಿನ ಅವಧಿಯ ಋಣಭಾರ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಹೊಸದಾಗಿ ಖಾತಾವನ್ನು ಪಡೆಯುವ ಪ್ರಕ್ರಿಯೆ ಕುರಿತು ಬಿಬಿಎಂಪಿ ವಿಡಿಯೊ (<a href="https://www.youtube.com/watch?v=FRLimLizeHM">https://youtu.be/FRLimLizeHM?si=BxG9mgRWBU7RkP3B</a>) ಮೂಲಕ ವಿವರಣೆ ನೀಡಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮಾಹಿತಿ ನೀಡಿದರು.</p>.<p>ಬಿಬಿಎಂಪಿಯಿಂದ ಕೈಬರಹ ಅಥವಾ ಇ– ಖಾತಾ ಹೊಂದಿದ್ದರೆ ಮತ್ತೆ ಹೊಸ ಖಾತಾ ಪಡೆಯಲು ಪ್ರಯತ್ನಿಸಬಾರದು. ಇಂತಹ ಪ್ರಯತ್ನಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.</p><p><strong>ಅನಧಿಕೃತ ಜಾಹೀರಾತು: ಎಫ್ಐಆರ್ ದಾಖಲಿಸಲು ಸೂಚನೆ</strong></p><p>ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಅಳವಡಿಸಿರುವವರ ವಿರುದ್ಧ ಎಫ್ಐಆರ್ ದಾಖಲಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p><p>‘ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತು ಇರದಂತೆ ನೋಡಿಕೊಳ್ಳಬೇಕು. ವಲಯಗಳಲ್ಲಿ ಜಾಹೀರಾತುಗಳನ್ನು ತೆರವುಗೊಳಿಸಿ, ಅದನ್ನು ಅಳವಡಿಸಿರುವವರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಮತ್ತೆ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೋಮವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.</p><p><strong>ಬ್ಯಾಂಕ್ಗಳಿಗಾಗಿ ‘ಸರ್ಫೇಸಿ ಕಾಯ್ದೆ’</strong></p><p>ಆಸ್ತಿ ವಹಿವಾಟುಗಳಿಗೆ ಇ–ಖಾತಾ ಕಡ್ಡಾಯಗೊಳಿಸಿರುವುದರಿಂದ, ಭದ್ರತೆ, ಪುನರ್ನಿರ್ಮಾಣ, ಭದ್ರತೆ ಬಡ್ಡಿ ಜಾರಿ ಕಾಯ್ದೆ 2002 (ಸರ್ಫೇಸಿ ಕಾಯ್ದೆ) ನಿಬಂಧನೆಗಳ ಅಡಿ ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳು ಆಸ್ತಿಗಳ ಮಾರಾಟ ಪ್ರಮಾಣ ಪತ್ರ ನೋಂದಾಯಿಸಲು ಅನುವಾಗುವಂತೆ, ಬಿಬಿಎಂಪಿ ಇ–ಖಾತಾ ವಿಧಾನವನ್ನು ರಚಿಸಿದೆ.</p><p>ಒಂದು ಸ್ವತ್ತನ್ನು ಅಡಮಾನವಿಟ್ಟು ಪಡೆದ ಸಾಲವನ್ನು ಮರು ಪಾವತಿ ಮಾಡಲು ವಿಫಲವಾದಾಗ, ಬ್ಯಾಂಕ್ಗಳು ಮಾರಾಟ ಪ್ರಮಾಣದ ಮೂಲಕ ಮಾರಾಟವನ್ನು ಕಾರ್ಯಗತಗೊಳಿಸುತ್ತವೆ. ಎಲ್ಲ ನೋಂದಣಿಗೂ ಇ–ಖಾತಾ ಕಡ್ಡಾಯವಾಗಿರುವುದರಿಂದ ಕೆಲವು ಬಾರಿ ಖಾತಾದಾರ ಸಹಕರಿಸದಿರ<br>ಬಹುದು. ಆದ್ದರಿಂದ ಹಣಕಾಸು ಸಂಸ್ಥೆಗಳಿಗೆ ಅನುಕೂಲವಾಗಲು ಇ–ಖಾತಾ ಪ್ರಕ್ರಿಯೆಯಲ್ಲಿ ಅವರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿಯಲ್ಲಿರುವ ಆಸ್ತಿಗಳಿಗೆ ಖಾತಾ ಹೊಂದಿರದ ಮಾಲೀಕರ ಅನುಕೂಲಕ್ಕಾಗಿ ಹೊಸ ವೆಬ್ಸೈಟ್ (<a href="https://bbmp.karnataka.gov.in/NewKhata/">https://BBMP.karnataka.gov.in/NewKhata</a>) ಆರಂಭಿಸಲಾಗಿದೆ.</p>.<p>ನಗರದಲ್ಲಿ ಐದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಆಸ್ತಿ ಮಾಲೀಕರು ಬಿಬಿಎಂಪಿಯಿಂದ ಖಾತಾ ಹೊಂದಿಲ್ಲ. ಕೈಬರಹದ ಖಾತಾವನ್ನೂ ಹೊಂದಿರುವುದಿಲ್ಲ. ಖಾತಾ ಇಲ್ಲದೆಯೇ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಈ ಸ್ವತ್ತುಗಳಿಗೆ ಸಂಬಂಧಿಸಿದ ವಹಿವಾಟು ನಡೆಸುತ್ತಿದ್ದು, ಆಸ್ತಿ ತೆರಿಗೆ ವ್ಯಾಪ್ತಿಯಿಂದಲೂ ಹೊರಗುಳಿದಿವೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸುದ್ದಿಗಾರರಿಗೆ ಸೋಮವಾರ ತಿಳಿಸಿದರು.</p>.<p>ಎಲ್ಲ ಆಸ್ತಿಗಳಿಗೂ ಖಾತಾ ನೀಡಬೇಕು. ಎಲ್ಲವನ್ನೂ ತೆರಿಗೆ ವ್ಯಾಪ್ತಿಗೆ ತರಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೂಚಿಸಿದ್ದಾರೆ. ಅದರಂತೆ ಬಿಬಿಎಂಪಿ ಕ್ರಮ ಕೈಗೊಳ್ಳುತ್ತಿದೆ ಎಂದರು.</p>.<p>ಮಾಲೀಕರು ಹೊಸದಾಗಿ ಖಾತಾ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಧಾರ್ ಸಂಖ್ಯೆ, ಮಾರಾಟ/ನೋಂದಣಿ ಪತ್ರದ ಸಂಖ್ಯೆ, ಆಸ್ತಿ ಚಿತ್ರ, ಮಾರಾಟ/ ನೋಂದಣಿ ಪತ್ರಕ್ಕೆ ಕನಿಷ್ಠ ಒಂದು ದಿನ ಮೊದಲಿನಿಂದ ಆಸ್ತಿಯ 2024ರ ಅಕ್ಟೋಬರ್ 31ರವರೆಗಿನ ಅವಧಿಯ ಋಣಭಾರ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಹೊಸದಾಗಿ ಖಾತಾವನ್ನು ಪಡೆಯುವ ಪ್ರಕ್ರಿಯೆ ಕುರಿತು ಬಿಬಿಎಂಪಿ ವಿಡಿಯೊ (<a href="https://www.youtube.com/watch?v=FRLimLizeHM">https://youtu.be/FRLimLizeHM?si=BxG9mgRWBU7RkP3B</a>) ಮೂಲಕ ವಿವರಣೆ ನೀಡಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮಾಹಿತಿ ನೀಡಿದರು.</p>.<p>ಬಿಬಿಎಂಪಿಯಿಂದ ಕೈಬರಹ ಅಥವಾ ಇ– ಖಾತಾ ಹೊಂದಿದ್ದರೆ ಮತ್ತೆ ಹೊಸ ಖಾತಾ ಪಡೆಯಲು ಪ್ರಯತ್ನಿಸಬಾರದು. ಇಂತಹ ಪ್ರಯತ್ನಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.</p><p><strong>ಅನಧಿಕೃತ ಜಾಹೀರಾತು: ಎಫ್ಐಆರ್ ದಾಖಲಿಸಲು ಸೂಚನೆ</strong></p><p>ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಅಳವಡಿಸಿರುವವರ ವಿರುದ್ಧ ಎಫ್ಐಆರ್ ದಾಖಲಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p><p>‘ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತು ಇರದಂತೆ ನೋಡಿಕೊಳ್ಳಬೇಕು. ವಲಯಗಳಲ್ಲಿ ಜಾಹೀರಾತುಗಳನ್ನು ತೆರವುಗೊಳಿಸಿ, ಅದನ್ನು ಅಳವಡಿಸಿರುವವರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಮತ್ತೆ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೋಮವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.</p><p><strong>ಬ್ಯಾಂಕ್ಗಳಿಗಾಗಿ ‘ಸರ್ಫೇಸಿ ಕಾಯ್ದೆ’</strong></p><p>ಆಸ್ತಿ ವಹಿವಾಟುಗಳಿಗೆ ಇ–ಖಾತಾ ಕಡ್ಡಾಯಗೊಳಿಸಿರುವುದರಿಂದ, ಭದ್ರತೆ, ಪುನರ್ನಿರ್ಮಾಣ, ಭದ್ರತೆ ಬಡ್ಡಿ ಜಾರಿ ಕಾಯ್ದೆ 2002 (ಸರ್ಫೇಸಿ ಕಾಯ್ದೆ) ನಿಬಂಧನೆಗಳ ಅಡಿ ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳು ಆಸ್ತಿಗಳ ಮಾರಾಟ ಪ್ರಮಾಣ ಪತ್ರ ನೋಂದಾಯಿಸಲು ಅನುವಾಗುವಂತೆ, ಬಿಬಿಎಂಪಿ ಇ–ಖಾತಾ ವಿಧಾನವನ್ನು ರಚಿಸಿದೆ.</p><p>ಒಂದು ಸ್ವತ್ತನ್ನು ಅಡಮಾನವಿಟ್ಟು ಪಡೆದ ಸಾಲವನ್ನು ಮರು ಪಾವತಿ ಮಾಡಲು ವಿಫಲವಾದಾಗ, ಬ್ಯಾಂಕ್ಗಳು ಮಾರಾಟ ಪ್ರಮಾಣದ ಮೂಲಕ ಮಾರಾಟವನ್ನು ಕಾರ್ಯಗತಗೊಳಿಸುತ್ತವೆ. ಎಲ್ಲ ನೋಂದಣಿಗೂ ಇ–ಖಾತಾ ಕಡ್ಡಾಯವಾಗಿರುವುದರಿಂದ ಕೆಲವು ಬಾರಿ ಖಾತಾದಾರ ಸಹಕರಿಸದಿರ<br>ಬಹುದು. ಆದ್ದರಿಂದ ಹಣಕಾಸು ಸಂಸ್ಥೆಗಳಿಗೆ ಅನುಕೂಲವಾಗಲು ಇ–ಖಾತಾ ಪ್ರಕ್ರಿಯೆಯಲ್ಲಿ ಅವರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>