<p><strong>ಬೆಂಗಳೂರು:</strong> ಹೊಸ ವರ್ಷಾಚರಣೆಗೆ ವಾರವಷ್ಟೇ ಬಾಕಿ ಇದೆ. ಡಿ. 31ರಂದು ರಾತ್ರಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.</p>.<p>‘ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೆಚ್ಚು ಜನರು ಸೇರುವ ಸ್ಥಳ, ಪಬ್, ರೆಸ್ಟೋರೆಂಟ್, ಕ್ಲಬ್ಗಳ ಸುತ್ತಮುತ್ತ ಹೈ ಅಲರ್ಟ್ ಘೋಷಿಸಿ ಭದ್ರತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ’ ಎಂದು ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ಅವರು ಎಲ್ಲ ವಿಭಾಗಗಳ ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ.</p>.<p>‘ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ಸ್ಟ್ರೀಟ್, ಕಬ್ಬನ್ ಪಾರ್ಕ್ ರಸ್ತೆ, ಶಿವಾಜಿನಗರದಲ್ಲಿ ಹೊಸ ವರ್ಷಾಚರಣೆಗೆ ಸಾವಿರಾರು ಜನ ಸೇರುತ್ತಾರೆ. ಅವರನ್ನು ನಿಯಂತ್ರಿಸಲು ಇಂದಿನಿಂದಲೇ ಸಿದ್ಧತೆ ಮಾಡಿಕೊಳ್ಳಿ. ಮಾದಕ ವಸ್ತು ಮಾರಾಟ, ವೇಶ್ಯಾವಾಟಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳ ಮೇಲೂ ನಿಗಾ ವಹಿಸಿ’ ಎಂದು ಕಮಿಷನರ್ ಸೂಚಿಸಿದ್ದಾರೆ.</p>.<p class="Subhead"><strong>ಒಂದೇ ಸ್ಥಳದಲ್ಲಿ ಆಚರಣೆಗೆ ಪತ್ರ: </strong>ಹೊಸ ವರ್ಷಾಚರಣೆ ವೇಳೆ ಬ್ರಿಗೇಡ್ ರಸ್ತೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಅಹಿತಕರ ಘಟನೆಗಳು ಪದೇ ಪದೇ ಸಂಭವಿಸುವುದನ್ನು ತಡೆಗಟ್ಟುವ ಉದ್ದೇಶದಿಂದ, ನಗರದ ಅರಮನೆ ಮೈದಾನದಲ್ಲಷ್ಟೇ ಗುಂಪು ಆಚರಣೆಗೆ ಅವಕಾಶ ನೀಡಲು ಪೊಲೀಸರು ಚಿಂತನೆ ನಡೆಸಿದ್ದಾರೆ.</p>.<p>ಆ ಸಂಬಂಧ ಗೃಹ ಇಲಾಖೆಗೆ ಪತ್ರ ಬರೆದಿರುವ ಹಿರಿಯ ಅಧಿಕಾರಿಗಳು, ‘ಹೊರ ದೇಶಗಳಲ್ಲಿ ಒಂದೇ ಜಾಗದಲ್ಲಿ ಎಲ್ಲರೂ ಸೇರಿ ಹೊಸ ವರ್ಷದ ಸಂಭ್ರಮ ಆಚರಿಸುವ ಪದ್ಧತಿ ಇದೆ. ಅಂಥ ಪದ್ಧತಿಯನ್ನು ಬೆಂಗಳೂರಿನಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳಿ’ ಎಂದು ಕೋರಿದ್ದಾರೆ ಎಂದು ಗೊತ್ತಾಗಿದೆ. ಈ ಮನವಿ ಪರಿಶೀಲನೆ ಹಂತದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೊಸ ವರ್ಷಾಚರಣೆಗೆ ವಾರವಷ್ಟೇ ಬಾಕಿ ಇದೆ. ಡಿ. 31ರಂದು ರಾತ್ರಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.</p>.<p>‘ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೆಚ್ಚು ಜನರು ಸೇರುವ ಸ್ಥಳ, ಪಬ್, ರೆಸ್ಟೋರೆಂಟ್, ಕ್ಲಬ್ಗಳ ಸುತ್ತಮುತ್ತ ಹೈ ಅಲರ್ಟ್ ಘೋಷಿಸಿ ಭದ್ರತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ’ ಎಂದು ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ಅವರು ಎಲ್ಲ ವಿಭಾಗಗಳ ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ.</p>.<p>‘ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ಸ್ಟ್ರೀಟ್, ಕಬ್ಬನ್ ಪಾರ್ಕ್ ರಸ್ತೆ, ಶಿವಾಜಿನಗರದಲ್ಲಿ ಹೊಸ ವರ್ಷಾಚರಣೆಗೆ ಸಾವಿರಾರು ಜನ ಸೇರುತ್ತಾರೆ. ಅವರನ್ನು ನಿಯಂತ್ರಿಸಲು ಇಂದಿನಿಂದಲೇ ಸಿದ್ಧತೆ ಮಾಡಿಕೊಳ್ಳಿ. ಮಾದಕ ವಸ್ತು ಮಾರಾಟ, ವೇಶ್ಯಾವಾಟಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳ ಮೇಲೂ ನಿಗಾ ವಹಿಸಿ’ ಎಂದು ಕಮಿಷನರ್ ಸೂಚಿಸಿದ್ದಾರೆ.</p>.<p class="Subhead"><strong>ಒಂದೇ ಸ್ಥಳದಲ್ಲಿ ಆಚರಣೆಗೆ ಪತ್ರ: </strong>ಹೊಸ ವರ್ಷಾಚರಣೆ ವೇಳೆ ಬ್ರಿಗೇಡ್ ರಸ್ತೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಅಹಿತಕರ ಘಟನೆಗಳು ಪದೇ ಪದೇ ಸಂಭವಿಸುವುದನ್ನು ತಡೆಗಟ್ಟುವ ಉದ್ದೇಶದಿಂದ, ನಗರದ ಅರಮನೆ ಮೈದಾನದಲ್ಲಷ್ಟೇ ಗುಂಪು ಆಚರಣೆಗೆ ಅವಕಾಶ ನೀಡಲು ಪೊಲೀಸರು ಚಿಂತನೆ ನಡೆಸಿದ್ದಾರೆ.</p>.<p>ಆ ಸಂಬಂಧ ಗೃಹ ಇಲಾಖೆಗೆ ಪತ್ರ ಬರೆದಿರುವ ಹಿರಿಯ ಅಧಿಕಾರಿಗಳು, ‘ಹೊರ ದೇಶಗಳಲ್ಲಿ ಒಂದೇ ಜಾಗದಲ್ಲಿ ಎಲ್ಲರೂ ಸೇರಿ ಹೊಸ ವರ್ಷದ ಸಂಭ್ರಮ ಆಚರಿಸುವ ಪದ್ಧತಿ ಇದೆ. ಅಂಥ ಪದ್ಧತಿಯನ್ನು ಬೆಂಗಳೂರಿನಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳಿ’ ಎಂದು ಕೋರಿದ್ದಾರೆ ಎಂದು ಗೊತ್ತಾಗಿದೆ. ಈ ಮನವಿ ಪರಿಶೀಲನೆ ಹಂತದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>