<p><strong>ಬೆಂಗಳೂರು:</strong> ‘ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಸರ್ಕಾರ ರೂಪಿಸಿರುವ ಹೊಸ ನಿಯಮಗಳ ಅನ್ವಯ ಡಿ. 31ರ ಸಂಜೆ 6 ಗಂಟೆಯಿಂದ ಜ. 1ರ ಬೆಳಿಗ್ಗೆ 6 ಗಂಟೆಯವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕಮಲ್ ಪಂತ್, ‘ಅಂದು ರಾತ್ರಿ ಐದು ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ರಸ್ತೆ, ಉದ್ಯಾನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಅಪಾರ್ಟ್ಮೆಂಟ್ ಸಮುಚ್ಚಯದ ನಿವಾಸಿಗಳು, ಕ್ಲಬ್ನವರು ಹಾಗೂ ಇತರರು, ತಮ್ಮ ನಿಗದಿತ ಜಾಗದಲ್ಲಿ ತಮ್ಮದೇ ಸದಸ್ಯರ ಜೊತೆ ಮಾತ್ರ ವರ್ಷಾಚರಣೆ ಮಾಡಬಹುದು. ಇಂಥ ಕಾರ್ಯಕ್ರಮಗಳಲ್ಲಿ ಹೊರಗಿನವರಿಗೆ ಅವಕಾಶ ನೀಡಬಾರದು. ಈ ಬಗ್ಗೆ ಆಡಳಿತ ಮಂಡಳಿ ಗಮನ ಹರಿಸಬೇಕು’ ಎಂದೂ ಹೇಳಿದರು.</p>.<p class="Subhead"><strong>ಕೂಪನ್ ಕಾರ್ಯಕ್ರಮಕ್ಕೆ ಅವಕಾಶವಿಲ್ಲ: </strong>‘ಹೊಸ ವರ್ಷಾಚರಣೆ ಕಾರ್ಯಕ್ರಮ ಸಂಘಟಿಸುವುದು ಹಾಗೂ ಅದರ ಕೂಪನ್– ಚೀಟಿಯನ್ನು ಹಂಚಿಕೆ ಮಾಡುವುದಕ್ಕೆ ಅವಕಾಶವಿಲ್ಲ. ಹೋಟೆಲ್, ರೆಸ್ಟೋರೆಂಟ್ನವರು ನಿತ್ಯದ ರೀತಿಯಲ್ಲೇ ಕೆಲಸ ಮಾಡಬಹುದು. ನೃತ್ಯ ಹಾಗೂ ಇತರೆ ವಿಶೇಷ ಕಾರ್ಯಕ್ರಮ ಆಯೋಜಿಸಬಾರದು’ ಎಂದೂ ಎಚ್ಚರಿಸಿದರು.</p>.<p class="Subhead">ಅನಗತ್ಯವಾಗಿ ಓಡಾಡಿದರೆ ಪ್ರಕರಣ: ‘ವ್ಹೀಲಿಂಗ್, ಜಾಲಿ ರೈಡ್, ರಸ್ತೆ ಮೇಲೆ ನಿಂತು ಹರಟೆ ಹೊಡೆಯಲು ಅವಕಾಶವಿಲ್ಲ. ಅನಗತ್ಯವಾಗಿ ಓಡಾಡುವವರಿಗೆ ನೇರವಾಗಿ ಎಚ್ಚರಿಕೆ ನೀಡುತ್ತಿದ್ದೇನೆ. ಸಿಕ್ಕಿಬಿದ್ದರೆ, ಗಂಭೀರ ಪ್ರಕರಣ ದಾಖಲಿಸಲಾಗುವುದು. ವಾಹನವನ್ನೂ ಜಪ್ತಿ ಮಾಡಲಾಗುವುದು’ ಎಂದು ಕಮಲ್ ಪಂತ್ ಹೇಳಿದರು.</p>.<p>‘ಮೇಲ್ಸೇತುವೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗುವುದು. ನಗರದೆಲ್ಲೆಡೆ ನಾಕಾಬಂದಿ ನಿರ್ಮಿಸಿ, ಬಿಗಿ ಭದ್ರತೆ ಕೈಗೊಳ್ಳಲಾಗುವುದು’ ಎಂದೂ ತಿಳಿಸಿದರು.</p>.<p class="Briefhead"><strong>'ಟಿಕೆಟ್ ಪಡೆದರಷ್ಟೇ ಅವಕಾಶ'</strong></p>.<p>‘ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಇಂದಿರಾನಗರ ಹಾಗೂ ಕೋರಮಂಗಲದಲ್ಲಿ ಡಿ. 31ರಂದು ರಾತ್ರಿ ಯಾರಿಗೂ ಪ್ರವೇಶವಿಲ್ಲ. ಹೋಟೆಲ್, ಪಬ್, ರೆಸ್ಟೋರೆಂಟ್ ಹಾಗೂ ಇತರರು, ಮುಂಗಡವಾಗಿ ಗ್ರಾಹಕರಿಂದ ಬುಕ್ಕಿಂಗ್ ಪಡೆಯಬೇಕು. ಅದಕ್ಕೆ ಪ್ರತಿಯಾಗಿ, ಟಿಕೆಟ್ ನೀಡಬೇಕು. ಅಂಥ ಟಿಕೆಟ್ ತೋರಿಸಿದರಷ್ಟೇ ಈ ಪ್ರದೇಶಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಈ ಬಗ್ಗೆ ಠಾಣೆ ಸಿಬ್ಬಂದಿಯೇ ಪರಿಶೀಲನೆ ನಡೆಸಲಿದ್ದಾರೆ’ ಎಂದು ಕಮಲ್ ಪಂತ್ ಹೇಳಿದರು.</p>.<p>‘ಹೋಟೆಲ್, ಪಬ್ ಹಾಗೂ ಇತರರು, ತಮ್ಮ ಗ್ರಾಹಕರನ್ನು ರಸ್ತೆಯಲ್ಲಿ ನಿಲ್ಲಿಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ನಿಯಮ ಪಾಲನೆ ಬಗ್ಗೆ ಹೋಟೆಲ್ ಆಡಳಿತ ಮಂಡಳಿ ಗಮನ ಹರಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಸರ್ಕಾರ ರೂಪಿಸಿರುವ ಹೊಸ ನಿಯಮಗಳ ಅನ್ವಯ ಡಿ. 31ರ ಸಂಜೆ 6 ಗಂಟೆಯಿಂದ ಜ. 1ರ ಬೆಳಿಗ್ಗೆ 6 ಗಂಟೆಯವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕಮಲ್ ಪಂತ್, ‘ಅಂದು ರಾತ್ರಿ ಐದು ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ರಸ್ತೆ, ಉದ್ಯಾನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಅಪಾರ್ಟ್ಮೆಂಟ್ ಸಮುಚ್ಚಯದ ನಿವಾಸಿಗಳು, ಕ್ಲಬ್ನವರು ಹಾಗೂ ಇತರರು, ತಮ್ಮ ನಿಗದಿತ ಜಾಗದಲ್ಲಿ ತಮ್ಮದೇ ಸದಸ್ಯರ ಜೊತೆ ಮಾತ್ರ ವರ್ಷಾಚರಣೆ ಮಾಡಬಹುದು. ಇಂಥ ಕಾರ್ಯಕ್ರಮಗಳಲ್ಲಿ ಹೊರಗಿನವರಿಗೆ ಅವಕಾಶ ನೀಡಬಾರದು. ಈ ಬಗ್ಗೆ ಆಡಳಿತ ಮಂಡಳಿ ಗಮನ ಹರಿಸಬೇಕು’ ಎಂದೂ ಹೇಳಿದರು.</p>.<p class="Subhead"><strong>ಕೂಪನ್ ಕಾರ್ಯಕ್ರಮಕ್ಕೆ ಅವಕಾಶವಿಲ್ಲ: </strong>‘ಹೊಸ ವರ್ಷಾಚರಣೆ ಕಾರ್ಯಕ್ರಮ ಸಂಘಟಿಸುವುದು ಹಾಗೂ ಅದರ ಕೂಪನ್– ಚೀಟಿಯನ್ನು ಹಂಚಿಕೆ ಮಾಡುವುದಕ್ಕೆ ಅವಕಾಶವಿಲ್ಲ. ಹೋಟೆಲ್, ರೆಸ್ಟೋರೆಂಟ್ನವರು ನಿತ್ಯದ ರೀತಿಯಲ್ಲೇ ಕೆಲಸ ಮಾಡಬಹುದು. ನೃತ್ಯ ಹಾಗೂ ಇತರೆ ವಿಶೇಷ ಕಾರ್ಯಕ್ರಮ ಆಯೋಜಿಸಬಾರದು’ ಎಂದೂ ಎಚ್ಚರಿಸಿದರು.</p>.<p class="Subhead">ಅನಗತ್ಯವಾಗಿ ಓಡಾಡಿದರೆ ಪ್ರಕರಣ: ‘ವ್ಹೀಲಿಂಗ್, ಜಾಲಿ ರೈಡ್, ರಸ್ತೆ ಮೇಲೆ ನಿಂತು ಹರಟೆ ಹೊಡೆಯಲು ಅವಕಾಶವಿಲ್ಲ. ಅನಗತ್ಯವಾಗಿ ಓಡಾಡುವವರಿಗೆ ನೇರವಾಗಿ ಎಚ್ಚರಿಕೆ ನೀಡುತ್ತಿದ್ದೇನೆ. ಸಿಕ್ಕಿಬಿದ್ದರೆ, ಗಂಭೀರ ಪ್ರಕರಣ ದಾಖಲಿಸಲಾಗುವುದು. ವಾಹನವನ್ನೂ ಜಪ್ತಿ ಮಾಡಲಾಗುವುದು’ ಎಂದು ಕಮಲ್ ಪಂತ್ ಹೇಳಿದರು.</p>.<p>‘ಮೇಲ್ಸೇತುವೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗುವುದು. ನಗರದೆಲ್ಲೆಡೆ ನಾಕಾಬಂದಿ ನಿರ್ಮಿಸಿ, ಬಿಗಿ ಭದ್ರತೆ ಕೈಗೊಳ್ಳಲಾಗುವುದು’ ಎಂದೂ ತಿಳಿಸಿದರು.</p>.<p class="Briefhead"><strong>'ಟಿಕೆಟ್ ಪಡೆದರಷ್ಟೇ ಅವಕಾಶ'</strong></p>.<p>‘ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಇಂದಿರಾನಗರ ಹಾಗೂ ಕೋರಮಂಗಲದಲ್ಲಿ ಡಿ. 31ರಂದು ರಾತ್ರಿ ಯಾರಿಗೂ ಪ್ರವೇಶವಿಲ್ಲ. ಹೋಟೆಲ್, ಪಬ್, ರೆಸ್ಟೋರೆಂಟ್ ಹಾಗೂ ಇತರರು, ಮುಂಗಡವಾಗಿ ಗ್ರಾಹಕರಿಂದ ಬುಕ್ಕಿಂಗ್ ಪಡೆಯಬೇಕು. ಅದಕ್ಕೆ ಪ್ರತಿಯಾಗಿ, ಟಿಕೆಟ್ ನೀಡಬೇಕು. ಅಂಥ ಟಿಕೆಟ್ ತೋರಿಸಿದರಷ್ಟೇ ಈ ಪ್ರದೇಶಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಈ ಬಗ್ಗೆ ಠಾಣೆ ಸಿಬ್ಬಂದಿಯೇ ಪರಿಶೀಲನೆ ನಡೆಸಲಿದ್ದಾರೆ’ ಎಂದು ಕಮಲ್ ಪಂತ್ ಹೇಳಿದರು.</p>.<p>‘ಹೋಟೆಲ್, ಪಬ್ ಹಾಗೂ ಇತರರು, ತಮ್ಮ ಗ್ರಾಹಕರನ್ನು ರಸ್ತೆಯಲ್ಲಿ ನಿಲ್ಲಿಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ನಿಯಮ ಪಾಲನೆ ಬಗ್ಗೆ ಹೋಟೆಲ್ ಆಡಳಿತ ಮಂಡಳಿ ಗಮನ ಹರಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>