<p><strong>ಬೆಂಗಳೂರು:</strong> ‘ಹೊಸ ವರ್ಷಾಚರಣೆಯ ವೇಳೆ ಮದ್ಯದ ನಶೆ ಏರಿಸಿಕೊಂಡವರನ್ನು ಅವರವರ ಮನೆಗಳಿಗೆ ತಲುಪಿಸುವುದಿಲ್ಲ. ಅತಿಯಾಗಿ ಮದ್ಯ ಸೇವಿಸಿಕೊಂಡು ನಡೆದುಕೊಂಡು ಹೋಗಲು ಸಾಧ್ಯ ಆಗದವರು ಹಾಗೂ ಪ್ರಜ್ಞೆ ಕಳೆದುಕೊಂಡವರ ಸುರಕ್ಷತೆಗೆ ಆದ್ಯತೆ ನೀಡಲಾಗುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಹಿಳೆಯರು ಅತಿಯಾದ ಮದ್ಯಪಾನ ಮಾಡಿ ಪ್ರಜ್ಞೆ ಇಲ್ಲದಂತೆ ಇದ್ದರೆ, ನಡೆದಾಡಲೂ ಸಾಧ್ಯವಾಗದ ಪರಿಸ್ಥಿತಿ ಇದ್ದರೆ ಮಾತ್ರ ಆದ್ಯತೆ ಮೇರೆಗೆ ಅವರನ್ನು ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಈ ರೀತಿ ತಲುಪಿಸುವುದಕ್ಕೂ ಮೊದಲು ವಿಶ್ರಾಂತಿ ಸ್ಥಳಗಳಿಗೆ ಕರೆದೊಯ್ಯಲಾಗುವುದು, ಅಲ್ಲಿ ವೈದ್ಯರು, ನರ್ಸ್ಗಳು ಪರೀಕ್ಷಿಸಿದ ಬಳಿಕ ಅವರನ್ನು ಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು. ನಗರದ ವಿವಿಧೆಡೆ 15 ವಿಶ್ರಾಂತಿ ಸ್ಥಳಗಳನ್ನು ಗುರುತಿಸಲಾಗಿದೆ’ ಎಂದರು.</p><p>‘ಮದ್ಯಪಾನ ಮಾಡಿದ ಸಂದರ್ಭದಲ್ಲಿ ಯಾವ ರೀತಿ ಇರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಆ ಸಮಯದಲ್ಲಿ ಏನು ಬೇಕಾದರೂ ಆಗಬಹುದು, ಕೆಲವು ಕಿಡಿಗೇಡಿಗಳು ಈ ಸಂದರ್ಭವನ್ನು ಬಳಸಿಕೊಳ್ಳುವ ಸಾಧ್ಯತೆ ಇದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಸಿಬ್ಬಂದಿಗೆ ತಿಳಿಸಲಾಗಿದೆ. ಬಾರ್, ಪಬ್ ತೆರೆದಿಡಲು ಸಮಯ ನಿಗದಿ ಮಾಡಲಾಗಿದೆ. ರಾತ್ರಿ ಒಂದು ಗಂಟೆಗೆ ಎಲ್ಲ ಬಾರ್ಗಳನ್ನು ಮುಚ್ಚಬೇಕು. ಮುಚ್ಚದಿದ್ದರೆ ಪ್ರಕರಣ ದಾಖಲಿಸಲಾಗುವುದು’ ಎಂದರು.</p><p>‘ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಬೆಂಗಳೂರಿಗೆ ಬಹಳಷ್ಟು ಜನರು ಹೊರಗಿನಿಂದ ಬರುತ್ತಾರೆ. ಸಂಭ್ರಮಾಚರಣೆ ಮಾಡಿ ಮದ್ಯಪಾನ ಮಾಡುತ್ತಾರೆ. ಈ ಸಂದರ್ಭದಲ್ಲಿ ಹೆಚ್ಚು ಜನರು ಸೇರಿದಾಗ ತಳ್ಳಾಟ- ನೂಕಾಟ ಆಗಲಿದೆ. ಅದಕ್ಕಾಗಿ ಹೆಚ್ಚು ಗಮನಹರಿಸಿದ್ದೇವೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹೊಸ ವರ್ಷಾಚರಣೆಯ ವೇಳೆ ಮದ್ಯದ ನಶೆ ಏರಿಸಿಕೊಂಡವರನ್ನು ಅವರವರ ಮನೆಗಳಿಗೆ ತಲುಪಿಸುವುದಿಲ್ಲ. ಅತಿಯಾಗಿ ಮದ್ಯ ಸೇವಿಸಿಕೊಂಡು ನಡೆದುಕೊಂಡು ಹೋಗಲು ಸಾಧ್ಯ ಆಗದವರು ಹಾಗೂ ಪ್ರಜ್ಞೆ ಕಳೆದುಕೊಂಡವರ ಸುರಕ್ಷತೆಗೆ ಆದ್ಯತೆ ನೀಡಲಾಗುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಹಿಳೆಯರು ಅತಿಯಾದ ಮದ್ಯಪಾನ ಮಾಡಿ ಪ್ರಜ್ಞೆ ಇಲ್ಲದಂತೆ ಇದ್ದರೆ, ನಡೆದಾಡಲೂ ಸಾಧ್ಯವಾಗದ ಪರಿಸ್ಥಿತಿ ಇದ್ದರೆ ಮಾತ್ರ ಆದ್ಯತೆ ಮೇರೆಗೆ ಅವರನ್ನು ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಈ ರೀತಿ ತಲುಪಿಸುವುದಕ್ಕೂ ಮೊದಲು ವಿಶ್ರಾಂತಿ ಸ್ಥಳಗಳಿಗೆ ಕರೆದೊಯ್ಯಲಾಗುವುದು, ಅಲ್ಲಿ ವೈದ್ಯರು, ನರ್ಸ್ಗಳು ಪರೀಕ್ಷಿಸಿದ ಬಳಿಕ ಅವರನ್ನು ಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು. ನಗರದ ವಿವಿಧೆಡೆ 15 ವಿಶ್ರಾಂತಿ ಸ್ಥಳಗಳನ್ನು ಗುರುತಿಸಲಾಗಿದೆ’ ಎಂದರು.</p><p>‘ಮದ್ಯಪಾನ ಮಾಡಿದ ಸಂದರ್ಭದಲ್ಲಿ ಯಾವ ರೀತಿ ಇರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಆ ಸಮಯದಲ್ಲಿ ಏನು ಬೇಕಾದರೂ ಆಗಬಹುದು, ಕೆಲವು ಕಿಡಿಗೇಡಿಗಳು ಈ ಸಂದರ್ಭವನ್ನು ಬಳಸಿಕೊಳ್ಳುವ ಸಾಧ್ಯತೆ ಇದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಸಿಬ್ಬಂದಿಗೆ ತಿಳಿಸಲಾಗಿದೆ. ಬಾರ್, ಪಬ್ ತೆರೆದಿಡಲು ಸಮಯ ನಿಗದಿ ಮಾಡಲಾಗಿದೆ. ರಾತ್ರಿ ಒಂದು ಗಂಟೆಗೆ ಎಲ್ಲ ಬಾರ್ಗಳನ್ನು ಮುಚ್ಚಬೇಕು. ಮುಚ್ಚದಿದ್ದರೆ ಪ್ರಕರಣ ದಾಖಲಿಸಲಾಗುವುದು’ ಎಂದರು.</p><p>‘ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಬೆಂಗಳೂರಿಗೆ ಬಹಳಷ್ಟು ಜನರು ಹೊರಗಿನಿಂದ ಬರುತ್ತಾರೆ. ಸಂಭ್ರಮಾಚರಣೆ ಮಾಡಿ ಮದ್ಯಪಾನ ಮಾಡುತ್ತಾರೆ. ಈ ಸಂದರ್ಭದಲ್ಲಿ ಹೆಚ್ಚು ಜನರು ಸೇರಿದಾಗ ತಳ್ಳಾಟ- ನೂಕಾಟ ಆಗಲಿದೆ. ಅದಕ್ಕಾಗಿ ಹೆಚ್ಚು ಗಮನಹರಿಸಿದ್ದೇವೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>