<p><strong>ಬೆಂಗಳೂರು</strong>: ಪ್ರಜ್ಞಾ ಸಾಂಸ್ಕೃತಿಕ ವೇದಿಕೆ ನೀಡುವ 2025ನೇ ಸಾಲಿನ ‘ಪ್ರೊ.ಕಿ.ರಂ. ನಾಗರಾಜ ಸಂಸ್ಕೃತಿ’ ಪ್ರಶಸ್ತಿಗೆ ಲೇಖಕಿ ವಿಜಯಾ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. </p><p>ಕಿ.ರಂ. ನಾಗರಾಜ ಅವರ ಜನ್ಮ ದಿನವಾದ ಡಿ. 25ರಂದು ಸಂಜೆ 6 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ವೇದಿಕೆಯ ಅಧ್ಯಕ್ಷ ನಲ್ಲೂರು ಪ್ರಸಾದ್ ಆರ್.ಕೆ., ತಿಳಿಸಿದ್ದಾರೆ.</p><p><strong>ಕವನ ಸಂಕಲನ ಆಹ್ವಾನ</strong></p><p>ಬೆಂಗಳೂರು: ಶೂದ್ರ ಶ್ರೀನಿವಾಸ್ ನೆಲದ ಮಾತು ಪ್ರತಿಷ್ಠಾನವು ಶೂದ್ರ ಪತ್ರಿಕೆಯ ‘ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಪ್ರಶಸ್ತಿ’ಗೆ ಕವನ ಸಂಕಲನಗಳನ್ನು ಆಹ್ವಾನಿಸಿದೆ. </p><p>2024ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾಗಿರುವ ಕವನ ಸಂಕಲನಗಳನ್ನು ಪರಿಗಣಿಸಲಾಗುತ್ತದೆ. ಪ್ರಶಸ್ತಿಯು ₹15 ಸಾವಿರ ನಗದು ಒಳಗೊಂಡಿದೆ. ಆಸಕ್ತರು ಕವನ ಸಂಕಲನದ ಎರಡು ಪ್ರತಿಗಳನ್ನು ಇದೇ 31ರೊಳಗೆ ಮಾನಸ ವಿದ್ಯಾಕೇಂದ್ರ, ಅಣ್ಣಯ್ಯ ರೆಡ್ಡಿ ಬಡಾವಣೆ, ಜೆ.ಪಿ.ನಗರ 6ನೇ ಹಂತ, ಬೆಂಗಳೂರು 560078 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಪ್ರತಿಷ್ಠಾನದ ಅಧ್ಯಕ್ಷ ಎಚ್. ದಂಡಪ್ಪ ತಿಳಿಸಿದ್ದಾರೆ. </p><p>ಸಂಪರ್ಕಕ್ಕೆ: 9481485109</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಜ್ಞಾ ಸಾಂಸ್ಕೃತಿಕ ವೇದಿಕೆ ನೀಡುವ 2025ನೇ ಸಾಲಿನ ‘ಪ್ರೊ.ಕಿ.ರಂ. ನಾಗರಾಜ ಸಂಸ್ಕೃತಿ’ ಪ್ರಶಸ್ತಿಗೆ ಲೇಖಕಿ ವಿಜಯಾ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. </p><p>ಕಿ.ರಂ. ನಾಗರಾಜ ಅವರ ಜನ್ಮ ದಿನವಾದ ಡಿ. 25ರಂದು ಸಂಜೆ 6 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ವೇದಿಕೆಯ ಅಧ್ಯಕ್ಷ ನಲ್ಲೂರು ಪ್ರಸಾದ್ ಆರ್.ಕೆ., ತಿಳಿಸಿದ್ದಾರೆ.</p><p><strong>ಕವನ ಸಂಕಲನ ಆಹ್ವಾನ</strong></p><p>ಬೆಂಗಳೂರು: ಶೂದ್ರ ಶ್ರೀನಿವಾಸ್ ನೆಲದ ಮಾತು ಪ್ರತಿಷ್ಠಾನವು ಶೂದ್ರ ಪತ್ರಿಕೆಯ ‘ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಪ್ರಶಸ್ತಿ’ಗೆ ಕವನ ಸಂಕಲನಗಳನ್ನು ಆಹ್ವಾನಿಸಿದೆ. </p><p>2024ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾಗಿರುವ ಕವನ ಸಂಕಲನಗಳನ್ನು ಪರಿಗಣಿಸಲಾಗುತ್ತದೆ. ಪ್ರಶಸ್ತಿಯು ₹15 ಸಾವಿರ ನಗದು ಒಳಗೊಂಡಿದೆ. ಆಸಕ್ತರು ಕವನ ಸಂಕಲನದ ಎರಡು ಪ್ರತಿಗಳನ್ನು ಇದೇ 31ರೊಳಗೆ ಮಾನಸ ವಿದ್ಯಾಕೇಂದ್ರ, ಅಣ್ಣಯ್ಯ ರೆಡ್ಡಿ ಬಡಾವಣೆ, ಜೆ.ಪಿ.ನಗರ 6ನೇ ಹಂತ, ಬೆಂಗಳೂರು 560078 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಪ್ರತಿಷ್ಠಾನದ ಅಧ್ಯಕ್ಷ ಎಚ್. ದಂಡಪ್ಪ ತಿಳಿಸಿದ್ದಾರೆ. </p><p>ಸಂಪರ್ಕಕ್ಕೆ: 9481485109</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>