ನಗರದ ಚಿತ್ರಕಲಾ ಪರಿಷತ್ ನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಎರಡು ದಿನಗಳೊಳಗೆ ಒಳ್ಳೆಯ ಸುದ್ದಿ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದರು. ಶುಕ್ರವಾರದ ಸಂಪುಟ ಸಭೆಯಲ್ಲೇ ನಿರ್ಧಾರ ಕೈಗೊಳ್ಳುವ ನಂಬಿಕೆ ಇತ್ತು. ಸಂಪುಟ ಸಭೆಯ ತೀರ್ಮಾನ ಆಧರಿಸಿ ನಾವು ಮುಂದಿನ ಹೆಜ್ಜೆ ಇಡುತ್ತೇವೆ' ಎಂದರು.