ಕೆರೆಯ ಪುನಶ್ಚೇತನಕ್ಕೆ ಕೈಗೊಂಡ ಕ್ರಮಗಳು ತೃಪ್ತಿದಾಯಕವಾಗಿಲ್ಲ. ಕೆರೆಯ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡು, ಈ ಕುರಿತ ಪರಿಷ್ಕೃತ ವರದಿ ಸಲ್ಲಿಸಬೇಕು. ಕೂಡಲೇ ಕಾರ್ಯ ಪ್ರವೃತ್ತರಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸುವುದು ಅನಿವಾರ್ಯವಾಗಲಿದೆ ಎಂದು ನ್ಯಾಯಮೂರ್ತಿ ಆದರ್ಶಕುಮಾರ್ ನೇತೃತ್ವದ ಹಸಿರು ಪೀಠ ಎಚ್ಚರಿಸಿದೆ.