<p><strong>ಬೆಂಗಳೂರು:</strong> ‘ಪರಿಸರ ಸಂರಕ್ಷಣೆ ಮತ್ತು ವಿದೇಶಿ ಶಕ್ತಿಗಳ ಕೈವಾಡದ ಬಗ್ಗೆ ‘ಬೀಸು ಹೇಳಿಕೆ’ ನೀಡಬಾರದು. ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸುವಾಗ ನಿಖರತೆ ಇರಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ(ಎನ್ಎಚ್ಎಐ) ಹೈಕೋರ್ಟ್ ತಿಳಿಸಿದೆ.</p>.<p>‘ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವ ಬಹುತೇಕ ಸಂಘಟನೆಗಳು ಗೋಪ್ಯ ಉದ್ದೇಶಗಳನ್ನು ಒಳಗೊಂಡಿವೆ. ವಿದೇಶಿ ಶಕ್ತಿಗಳ ಬೆಂಬಲ ಪಡೆದಿರುತ್ತವೆ ಮತ್ತು ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುತ್ತವೆ’ ಎಂದು ಎನ್ಎಚ್ಎಐ ಉಪಮಹಾ ವ್ಯವಸ್ಥಾಪಕ ಆರ್.ಬಿ. ಪೇಕಮ್ ಆಕ್ಷೇಪಣೆ ಸಲ್ಲಿಸಿದ್ದರು.</p>.<p>ಈ ಆಕ್ಷೇಪಣೆ ಹಿಂಪಡೆಯಲು ಅವಕಾಶ ನೀಡದ ಪೀಠ, ‘ಆಕ್ಷೇಪಣೆ ಸಿದ್ಧಪಡಿಸಿರುವ ಹಿಂದಿನ ಉದ್ದೇಶ ಮತ್ತು ಪ್ರಹಸನದ ಸಂಪೂರ್ಣ ತನಿಖೆ ನಡೆಸಬೇಕು’ ಎನ್ಎಚ್ಎಐ ಅಧ್ಯಕ್ಷರಿಗೆ ಸೂಚನೆ ನೀಡಿತು.</p>.<p>ವಿದೇಶಿ ಹಣ ಪಡೆಯಲಾಗುತ್ತಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ಅರ್ಜಿದಾರರಾದ ಯುನೈಟೆಡ್ ಕನ್ಸರ್ವೇಷನ್ ಮೂವ್ಮೆಂಟ್ ಚಾರಿಟಬಲ್ ಮತ್ತು ವೆಲ್ಫೇರ್ ಟ್ರಸ್ಟ್ಗೂ ಪೀಠ ತಿಳಿಸಿತು.</p>.<p>ಪರಿಸರ ಪರಿಣಾಮ ಮೌಲ್ಯಮಾಪನ(ಇಐಎ) ಪರಿಗಣಿಸದೆ ರಾಷ್ಟ್ರೀಯ ಹೆದ್ದಾರಿ 4 ವಿಸ್ತರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಹೈಕೋರ್ಟ್ನಲ್ಲಿ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪರಿಸರ ಸಂರಕ್ಷಣೆ ಮತ್ತು ವಿದೇಶಿ ಶಕ್ತಿಗಳ ಕೈವಾಡದ ಬಗ್ಗೆ ‘ಬೀಸು ಹೇಳಿಕೆ’ ನೀಡಬಾರದು. ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸುವಾಗ ನಿಖರತೆ ಇರಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ(ಎನ್ಎಚ್ಎಐ) ಹೈಕೋರ್ಟ್ ತಿಳಿಸಿದೆ.</p>.<p>‘ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವ ಬಹುತೇಕ ಸಂಘಟನೆಗಳು ಗೋಪ್ಯ ಉದ್ದೇಶಗಳನ್ನು ಒಳಗೊಂಡಿವೆ. ವಿದೇಶಿ ಶಕ್ತಿಗಳ ಬೆಂಬಲ ಪಡೆದಿರುತ್ತವೆ ಮತ್ತು ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುತ್ತವೆ’ ಎಂದು ಎನ್ಎಚ್ಎಐ ಉಪಮಹಾ ವ್ಯವಸ್ಥಾಪಕ ಆರ್.ಬಿ. ಪೇಕಮ್ ಆಕ್ಷೇಪಣೆ ಸಲ್ಲಿಸಿದ್ದರು.</p>.<p>ಈ ಆಕ್ಷೇಪಣೆ ಹಿಂಪಡೆಯಲು ಅವಕಾಶ ನೀಡದ ಪೀಠ, ‘ಆಕ್ಷೇಪಣೆ ಸಿದ್ಧಪಡಿಸಿರುವ ಹಿಂದಿನ ಉದ್ದೇಶ ಮತ್ತು ಪ್ರಹಸನದ ಸಂಪೂರ್ಣ ತನಿಖೆ ನಡೆಸಬೇಕು’ ಎನ್ಎಚ್ಎಐ ಅಧ್ಯಕ್ಷರಿಗೆ ಸೂಚನೆ ನೀಡಿತು.</p>.<p>ವಿದೇಶಿ ಹಣ ಪಡೆಯಲಾಗುತ್ತಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ಅರ್ಜಿದಾರರಾದ ಯುನೈಟೆಡ್ ಕನ್ಸರ್ವೇಷನ್ ಮೂವ್ಮೆಂಟ್ ಚಾರಿಟಬಲ್ ಮತ್ತು ವೆಲ್ಫೇರ್ ಟ್ರಸ್ಟ್ಗೂ ಪೀಠ ತಿಳಿಸಿತು.</p>.<p>ಪರಿಸರ ಪರಿಣಾಮ ಮೌಲ್ಯಮಾಪನ(ಇಐಎ) ಪರಿಗಣಿಸದೆ ರಾಷ್ಟ್ರೀಯ ಹೆದ್ದಾರಿ 4 ವಿಸ್ತರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಹೈಕೋರ್ಟ್ನಲ್ಲಿ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>