‘ಸರ್ಕಾರವು ಎನ್ಎಚ್ಎಂ ನೌಕರರಿಗೆ 2023ರ ಏಪ್ರಿಲ್ ತಿಂಗಳಿಂದ ಶೇ 15ರಷ್ಟು ವೇತನ ಹೆಚ್ಚಳ ಮಾಡಿ, ಆದೇಶ ಹೊರಡಿಸಿದೆ. ಆರ್ಥಿಕ ಇಲಾಖೆಯೂ ಸೆಪ್ಟೆಂಬರ್ ತಿಂಗಳಲ್ಲಿ ಆರೋಗ್ಯ ಇಲಾಖೆಗೆ ಅನುದಾನವನ್ನು ಬಿಡುಗಡೆ ಮಾಡಿತ್ತು. ಆದರೆ, ಈವರೆಗೂ ಅನುದಾನವನ್ನು ಇಲಾಖೆ ಹಾಗೂ ಎನ್ಎಚ್ಎಂ ಜಿಲ್ಲೆಗಳಿಗೆ ಬಿಡುಗಡೆ ಮಾಡಿಲ್ಲ. ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು’ ಎಂದು ಸಂಘದ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಆಗ್ರಹಿಸಿದ್ದಾರೆ.