‘ಮೊಹಮ್ಮದ್ ಸಾಜೀದ್ ಹಲ್ದಾರ್ ಹಾಗೂ ಇದ್ರಿಸ್ ಬಂಧಿತರು. ಬಾಂಗ್ಲಾದೇಶದ ಪ್ರಜೆಗಳನ್ನು ಅಕ್ರಮವಾಗಿ ಭಾರತದೊಳಗೆ ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಗಳು, 2023ರ ನವೆಂಬರ್ನಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದರು. ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಸಹಾಯದಿಂದ ಇಬ್ಬರನ್ನೂ ಸೆರೆ ಹಿಡಿಯಲಾಗಿದೆ’ ಎಂದು ಎನ್ಐಎ ಮೂಲಗಳು ಹೇಳಿವೆ.