<p><strong>ಬೆಂಗಳೂರು:</strong> ಜಮಾತ್–ಉಲ್–ಮುಜಾಹಿದ್ದೀನ್ ಬಾಂಗ್ಲಾದೇಶ(ಜೆಎಂಬಿ) ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಉಗ್ರ ಜೈದುಲ್ಲಾ ಇಸ್ಲಾಂ ಅಲಿಯಾಸ್ ಕೌಸರ್ಗೆ ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಪ್ರಕರಣಗಳ ವಿಶೇಷ ನ್ಯಾಯಾಲಯ ಏಳು ವರ್ಷ ಕಠಿಣ ಶಿಕ್ಷೆ ಹಾಗೂ ₹57 ಸಾವಿರ ದಂಡ ವಿಧಿಸಿದೆ.</p>.<p>ಅಕ್ರಮವಾಗಿ ರಾಜ್ಯದಲ್ಲಿ ವಾಸವಿದ್ದ ಕೌಸರ್, ತನ್ನ ಸಂಘಟನೆಗೆ ಹಣ ಕಳುಹಿಸಲು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಡಕಾಯಿತಿ ನಡೆಸುತ್ತಿದ್ದ. ರಾಮನಗರದಲ್ಲಿ ಈತನನ್ನು ಬಂಧಿಸಲಾಗಿತ್ತು. ತನಿಖೆ ನಡೆಸಿದ್ದ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಬಾಂಗ್ಲಾದೇಶದಲ್ಲಿ 2005ರಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲೂ ಕೌಸರ್ನನ್ನು ಬಂಧಿಸಲಾಗಿತ್ತು. ನಂತರ ಬಿಡುಗಡೆಯಾಗಿದ್ದ ಕೌಸರ್, 2014ರಲ್ಲಿ ಸಂಘಟನೆಯ ಮುಖ್ಯಸ್ಥ ಸಲಾವುದ್ದೀನ್ ಸಲೇಹಿನ್ ಜತೆ ಸೇರಿ ಭಾರತ ಪ್ರವೇಶಿಸಿದ್ದ. ಬಳಿಕ ತಮ್ಮ ತಂಡಗಳನ್ನು ಪ್ರತ್ಯೇಕಗೊಳಿಸಿ ದಕ್ಷಿಣ ರಾಜ್ಯಗಳ ಕಡೆ ಕಳುಹಿಸಿದ್ದ.</p>.<p>ಕೌಸರ್ ತನ್ನ ಸಹಚರರ ಜತೆ ಸೇರಿಕೊಂಡು ಬೆಂಗಳೂರು ನಗರ, ಗ್ರಾಮಾಂತರ ಭಾಗದಲ್ಲಿ ದರೋಡೆ, ಡಕಾಯಿತಿ ನಡೆಸುತ್ತಿದ್ದ. ಬಂದ ಹಣವನ್ನು ವಿವಿಧ ಖಾತೆಗಳ ಮೂಲಕ ಸಂಘಟನೆಯ ಖಾತೆಗೆ ವರ್ಗಾವಣೆ ಮಾಡುತ್ತಿದ್ದ. ಈ ಸಂಬಂಧ ಉಗ್ರನ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಸಂಘಟನೆ ಬಲಪಡಿಸುವುದರ ಜತೆಗೆ ಶಸ್ತ್ರಾಸ್ತ್ರಗಳ ಸಂಗ್ರಹ, ಸಂಘಟನೆಗೆ ಸೇರಿದ ಯುವಕರಿಗೆ ತರಬೇತಿಗೆ ಹಣ ವ್ಯಯಿಸುವ ಕೆಲಸವನ್ನೂ ಮಾಡುತ್ತಿದ್ದ ಎಂದು ಎನ್ಐಎ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಮಾತ್–ಉಲ್–ಮುಜಾಹಿದ್ದೀನ್ ಬಾಂಗ್ಲಾದೇಶ(ಜೆಎಂಬಿ) ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಉಗ್ರ ಜೈದುಲ್ಲಾ ಇಸ್ಲಾಂ ಅಲಿಯಾಸ್ ಕೌಸರ್ಗೆ ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಪ್ರಕರಣಗಳ ವಿಶೇಷ ನ್ಯಾಯಾಲಯ ಏಳು ವರ್ಷ ಕಠಿಣ ಶಿಕ್ಷೆ ಹಾಗೂ ₹57 ಸಾವಿರ ದಂಡ ವಿಧಿಸಿದೆ.</p>.<p>ಅಕ್ರಮವಾಗಿ ರಾಜ್ಯದಲ್ಲಿ ವಾಸವಿದ್ದ ಕೌಸರ್, ತನ್ನ ಸಂಘಟನೆಗೆ ಹಣ ಕಳುಹಿಸಲು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಡಕಾಯಿತಿ ನಡೆಸುತ್ತಿದ್ದ. ರಾಮನಗರದಲ್ಲಿ ಈತನನ್ನು ಬಂಧಿಸಲಾಗಿತ್ತು. ತನಿಖೆ ನಡೆಸಿದ್ದ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಬಾಂಗ್ಲಾದೇಶದಲ್ಲಿ 2005ರಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲೂ ಕೌಸರ್ನನ್ನು ಬಂಧಿಸಲಾಗಿತ್ತು. ನಂತರ ಬಿಡುಗಡೆಯಾಗಿದ್ದ ಕೌಸರ್, 2014ರಲ್ಲಿ ಸಂಘಟನೆಯ ಮುಖ್ಯಸ್ಥ ಸಲಾವುದ್ದೀನ್ ಸಲೇಹಿನ್ ಜತೆ ಸೇರಿ ಭಾರತ ಪ್ರವೇಶಿಸಿದ್ದ. ಬಳಿಕ ತಮ್ಮ ತಂಡಗಳನ್ನು ಪ್ರತ್ಯೇಕಗೊಳಿಸಿ ದಕ್ಷಿಣ ರಾಜ್ಯಗಳ ಕಡೆ ಕಳುಹಿಸಿದ್ದ.</p>.<p>ಕೌಸರ್ ತನ್ನ ಸಹಚರರ ಜತೆ ಸೇರಿಕೊಂಡು ಬೆಂಗಳೂರು ನಗರ, ಗ್ರಾಮಾಂತರ ಭಾಗದಲ್ಲಿ ದರೋಡೆ, ಡಕಾಯಿತಿ ನಡೆಸುತ್ತಿದ್ದ. ಬಂದ ಹಣವನ್ನು ವಿವಿಧ ಖಾತೆಗಳ ಮೂಲಕ ಸಂಘಟನೆಯ ಖಾತೆಗೆ ವರ್ಗಾವಣೆ ಮಾಡುತ್ತಿದ್ದ. ಈ ಸಂಬಂಧ ಉಗ್ರನ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಸಂಘಟನೆ ಬಲಪಡಿಸುವುದರ ಜತೆಗೆ ಶಸ್ತ್ರಾಸ್ತ್ರಗಳ ಸಂಗ್ರಹ, ಸಂಘಟನೆಗೆ ಸೇರಿದ ಯುವಕರಿಗೆ ತರಬೇತಿಗೆ ಹಣ ವ್ಯಯಿಸುವ ಕೆಲಸವನ್ನೂ ಮಾಡುತ್ತಿದ್ದ ಎಂದು ಎನ್ಐಎ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>