ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜೆ ಹಳ್ಳಿ ಗಲಭೆ, ಪ್ರವೀಣ್ ನೆಟ್ಟಾರು ಕೊಲೆ ಕೇಸ್‌: ಬೆಂಗಳೂರಿ‌ನಲ್ಲಿ ಎನ್ಐಎ ಶೋಧ

Last Updated 22 ಸೆಪ್ಟೆಂಬರ್ 2022, 7:55 IST
ಅಕ್ಷರ ಗಾತ್ರ

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಹಾಗೂ ಪ್ರವೀಣ್ ನೆಟ್ಟಾರು ಕೊಲೆ ಬಗ್ಗೆ ತನಿಖೆ ಮಡೆಸುತ್ತಿರುವ ಎನ್ಐಎ ಅಧಿಕಾರಿಗಳು, ಬೆಂಗಳೂರಿನ ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲಾಟ್‌ವೊಂದರಲ್ಲಿ ಗುರುವಾರ ನಸುಕಿನಲ್ಲಿ ಶೋಧ ನಡೆಸಿದರು.

ಸ್ಥಳೀಯ ಪೊಲೀಸರ ಜೊತೆ ರಿಚ್ಮ‌ಂಡ್ ಟೌನ್‌ನಲ್ಲಿರುವ ಫ್ಲಾಟ್‌ಗೆ ಹೋಗಿದ್ದ ಎನ್‌ಐಎ ತಂಡ, ಎರಡು ಕಡೆ ಶೋಧ ನಡೆಸಿತು. ನಂತರ, ವಾಪಸು ತೆರಳಿತು. ಸದ್ಯ ಫ್ಲ್ಯಾಟ್ ಬಳಿ ಪೊಲೀಸರ ಭದ್ರತೆ ಇದೆ.

ದೇಶ, ರಾಜ್ಯದ ಹಲವು ನಗರಗಳಲ್ಲಿರುವ ಪಿಎಫ್ಐ ಕಚೇರಿ ಹಾಗೂ ಸಂಘಟನೆ ಸದಸ್ಯರ‌ ಮನೆಗಳಲ್ಲಿ ಎನ್ಐಎ ಅಧಿಕಾರಿಗಳು ಗುರುವಾರ ನಸುಕಿನಿಂದಲೇ ಶೋಧ ಆರಂಭಿಸಿದ್ದಾರೆ. ಹಲವರನ್ನು ವಶಕ್ಕೆ‌ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಶೋಧ ನಡೆಸಿದ ಫ್ಲ್ಯಾಟ್ ಯಾರಿಗೆ ಸೇರಿದ್ದು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT