<p><strong>ಬೆಂಗಳೂರು:</strong> ನಗರದ ದಕ್ಷಿಣ ವಿಭಾಗದ ಡಿಸಿಪಿ ಆಗಿರುವ ರಾಹುಲ್ ಕುಮಾರ್ ಶಹಪುರವಾಡ್ ಅವರನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಎಸ್ಪಿಯಾಗಿ ನಿಯೋಜಿಸಲಾಗಿದೆ.</p>.<p>ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಶುಕ್ರವಾರ ಆದೇಶ ಪತ್ರ ಕಳುಹಿಸಿರುವ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಸಂಜೀವ್ಕುಮಾರ್, ‘ಮುಂದಿನ ಐದು ವರ್ಷಗಳ ಅವಧಿಗೆ ನಿಯೋಜನೆ ಆಧಾರದಲ್ಲಿ ರಾಹುಲ್ ಕುಮಾರ್ ಶಹಪುರವಾಡ್ ಅವರನ್ನು ಎನ್ಐಎ ಎಸ್ಪಿಯಾಗಿ ನಿಯೋಜಿಸಲಾಗಿದೆ’ ಎಂದಿದ್ದಾರೆ.</p>.<p>‘ರಾಹುಲ್ಕುಮಾರ್ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಬೇಕು. ಅವರು ತುರ್ತಾಗಿ ಹೊಸ ಹುದ್ದೆಯ ಅಧಿಕಾರ ಸ್ವೀಕರಿಸಬೇಕು’ ಎಂದೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<p>ಮಹಾರಾಷ್ಟ್ರದ ರಾಹುಲ್ಕುಮಾರ್, ಎಂಬಿಎ ಪದವೀಧರ. 2012ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಇವರು, ಬಂಟ್ವಾಳದ ಎಎಸ್ಪಿ ಆಗಿ ವೃತ್ತಿ ಆರಂಭಿಸಿದ್ದರು. ಹಾಸನ, ತುಮಕೂರು ಎಸ್ಪಿಯಾಗಿ ಕೆಲಸ ಮಾಡಿದ್ದರು. ಕೆಲ ತಿಂಗಳಿನಿಂದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ದಕ್ಷಿಣ ವಿಭಾಗದ ಡಿಸಿಪಿ ಆಗಿರುವ ರಾಹುಲ್ ಕುಮಾರ್ ಶಹಪುರವಾಡ್ ಅವರನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಎಸ್ಪಿಯಾಗಿ ನಿಯೋಜಿಸಲಾಗಿದೆ.</p>.<p>ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಶುಕ್ರವಾರ ಆದೇಶ ಪತ್ರ ಕಳುಹಿಸಿರುವ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಸಂಜೀವ್ಕುಮಾರ್, ‘ಮುಂದಿನ ಐದು ವರ್ಷಗಳ ಅವಧಿಗೆ ನಿಯೋಜನೆ ಆಧಾರದಲ್ಲಿ ರಾಹುಲ್ ಕುಮಾರ್ ಶಹಪುರವಾಡ್ ಅವರನ್ನು ಎನ್ಐಎ ಎಸ್ಪಿಯಾಗಿ ನಿಯೋಜಿಸಲಾಗಿದೆ’ ಎಂದಿದ್ದಾರೆ.</p>.<p>‘ರಾಹುಲ್ಕುಮಾರ್ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಬೇಕು. ಅವರು ತುರ್ತಾಗಿ ಹೊಸ ಹುದ್ದೆಯ ಅಧಿಕಾರ ಸ್ವೀಕರಿಸಬೇಕು’ ಎಂದೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<p>ಮಹಾರಾಷ್ಟ್ರದ ರಾಹುಲ್ಕುಮಾರ್, ಎಂಬಿಎ ಪದವೀಧರ. 2012ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಇವರು, ಬಂಟ್ವಾಳದ ಎಎಸ್ಪಿ ಆಗಿ ವೃತ್ತಿ ಆರಂಭಿಸಿದ್ದರು. ಹಾಸನ, ತುಮಕೂರು ಎಸ್ಪಿಯಾಗಿ ಕೆಲಸ ಮಾಡಿದ್ದರು. ಕೆಲ ತಿಂಗಳಿನಿಂದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>