ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೈಸ್: ರಾಜಿ ಪ್ರಶ್ನೆಯೇ ಇಲ್ಲ’

Last Updated 29 ನವೆಂಬರ್ 2018, 20:45 IST
ಅಕ್ಷರ ಗಾತ್ರ

ಬೆಂಗಳೂರು‘: ‘ನೈಸ್ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಅನುಮಾನ ಬೇಡ’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

‘ಸರ್ಕಾರವನ್ನು ಲೆಕ್ಕಿಸದೆ, ನಿಯಮಗಳನ್ನು ಉಲ್ಲಂಘಿಸಿ ಅವರು ಮುಂದೆ ಹೋಗಿದ್ದಾರೆ’ ಎಂದು ನೈಸ್‌ ಪ್ರವರ್ತಕ ಅಶೋಕ್ ಖೇಣಿ ಹೆಸರು ಪ್ರಸ್ತಾಪಿಸದೆ ಮುಖ್ಯಮಂತ್ರಿ ಕುಟುಕಿದರು.

‘ಸರ್ಕಾರದ ಆಸ್ತಿ ಸರ್ಕಾರದಲ್ಲೇ ಉಳಿಯಬೇಕು. ಆ ನಿಟ್ಟಿನಲ್ಲಿ ಸರ್ವ ಪ್ರಯತ್ನ ಮಾಡುತ್ತೇವೆ. ಯಾವುದೇ ಕಾರಣಕ್ಕೂ ದ್ವೇಷದ ರಾಜಕೀಯ ಮಾಡುವುದಿಲ್ಲ’ ಎಂದರು.

‘ಮುಖ್ಯ ಕಾರ್ಯದರ್ಶಿ ಅವರಿಗೆಮುಂದಿನ ಕ್ರಮ ಕೈಗೊಳ್ಳುವ ಜವಾಬ್ದಾರಿ ನೀಡಲಾಗಿದೆ. ಅವರು ಯಾರಿಗೂ ತಲೆಬಾಗುವುದಿಲ್ಲ, ಪ್ರಾಮಾಣಿಕರಿದ್ದಾರೆ. ನನ್ನನ್ನೂ ದಾರಿ ತಪ್ಪಿಸಲು ಆಗುವುದಿಲ್ಲ. ಈ ವಿಷಯದಲ್ಲಿ ಸರ್ಕಾರವನ್ನು ಸುಮ್ಮನಿರಿಸಲು ಸಾಧ್ಯವಿಲ್ಲ’ ಎಂದರು.

ಆಗ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ‘ಈಗ ಈ ವಿಚಾರ ಬೇಡ. ಈ ವಿಷಯದಲ್ಲಿ ಸಾಕಷ್ಟು ಪ್ರಕ್ರಿಯೆಗಳಾಗಬೇಕು’ ಎಂದರು.

**

ಎಲೆಕ್ಟ್ರಿಕ್ ಬಸ್‌ ಖರೀದಿಗೆ ಬ್ರೇಕ್

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಖರೀದಿಗೆ ನಡೆದಿದ್ದ ಪ್ರಕ್ರಿಯೆಗೆ ಬ್ರೇಕ್ ಬಿದ್ದಿದೆ.

‘ಎಲೆಕ್ಟ್ರಿಕ್ ಬಸ್ ವಿಚಾರದಲ್ಲಿ ಕೆಲವು ಅಡೆತಡೆಗಳಿವೆ. ಬಸ್ ಸರಬರಾಜು ಮಾಡಲು ಆದೇಶ ಪಡೆದುಕೊಂಡ ಕಂಪನಿಯನ್ನು ಆಂಧ್ರ ಪ್ರದೇಶ ಸರ್ಕಾರ ಕಪ್ಪುಪಟ್ಟಿಗೆ ಸೇರಿಸಿದೆ. ಈ ಕಾರಣಕ್ಕೆ ವಿಚಾರ ಮಾಡುತ್ತಿದ್ದೇವೆ’ ಎಂದು ಮುಖ್ಯಮಂತ್ರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT