ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಗಿ ಕಣ ಮಾಡುತ್ತಿದ್ದವರಿಗೆ ಕಾರು ಡಿಕ್ಕಿ: ಇಬ್ಬರು ಸಾವು

Last Updated 1 ಡಿಸೆಂಬರ್ 2021, 18:34 IST
ಅಕ್ಷರ ಗಾತ್ರ

ಬೆಂಗಳೂರು: ರಸ್ತೆಯಲ್ಲಿ ರಾಗಿ ಕಣ ಮಾಡುತ್ತಿದ್ದವರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದರಿಂದ ಬಿಂದು (28) ಹಾಗೂ ಗಾಳಿ ಹೊನ್ನಮ್ಮ (68) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸಕೆರೆಹಳ್ಳಿ ಬಳಿಯ ನೈಸ್‌ ರಸ್ತೆಯಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದ್ದು, ಈ ಸಂಬಂಧ ಕುಮಾರಸ್ವಾಮಿ ಲೇಔಟ್‌ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಹೊರಸಂದ್ರ ನಿವಾಸಿಗಳೆಂದು ಗುರುತಿಸಲಾಗಿದೆ.

‘ಹೊಸಕೆರೆಹಳ್ಳಿಯಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಹೊರಸಂದ್ರ ಬ್ರಿಡ್ಜ್‌ ಬಳಿ ವಾಹನಗಳ ಸಂಚಾರವೇ ಇರುವುದಿಲ್ಲ. ಹೀಗಾಗಿ ಸ್ಥಳೀಯರು ರಾಗಿ ಬಣವೆ ಹಾಕಿಕೊಂಡಿದ್ದರು. ಏಳು ಮಹಿಳೆಯರು ಕೆಲಸ ಮಾಡುತ್ತಿದ್ದರು. ಬೀದಿ ದೀಪದ ವ್ಯವಸ್ಥೆಯೂ ಇರಲಿಲ್ಲ. ಊಟ ಮುಗಿಸಿ ಎಲ್ಲರೂ ಅಲ್ಲೇ ಕುಳಿತಿದ್ದರು. ರಸ್ತೆಗೆ ಅಡ್ಡಲಾಗಿ ಗಾಡಿಯೊಂದನ್ನು ನಿಲ್ಲಿಸಿದ್ದರು. ಈ ವೇಳೆ ಕಾರೊಂದು ವೇಗವಾಗಿ ಹೋಗಿ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ. ಐವರಿಗೆಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT