<p><strong>ಕೆಂಗೇರಿ:</strong> ‘ಶಾಸಕ ಎಸ್.ಟಿ.ಸೋಮಶೇಖರ್ ತಮ್ಮ ಹಿಂಬಾಲಕರ ಹಿತಾಸಕ್ತಿಗಾಗಿ ನೈಸ್ ವಿಚಾರ ಪ್ರಸ್ತಾಪಿಸಿದ್ದಾರೆ. ರೈತರ ಲಾಭಕ್ಕಾಗಿ ಅಲ್ಲ’ ಎಂದು ಕೆಆರ್ಐಡಿಎಲ್ ಮಾಜಿ ಅಧ್ಯಕ್ಷ ಎಂ. ರುದ್ರೇಶ್ ಆರೋಪಿಸಿದರು.</p>.<p>‘ಟೋಲ್ ಮೂಲಕ ನೈಸ್ ಸಂಸ್ಥೆಯು ಸಾರ್ವಜನಿಕರಿಂದ ಅಕ್ರಮವಾಗಿ ಹಣ ಸಂಗ್ರಹ ಮಾಡುತ್ತಿದೆ. ಸರ್ಕಾರ ಈ ರಸ್ತೆಯನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು’ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಸದನದಲ್ಲಿ ಆಗ್ರಹಿಸಿದ್ದರು.</p>.<p>ಈ ಬಗ್ಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ರುದ್ರೇಶ್ ಪ್ರತಿಕ್ರಿಯಿಸಿ, ‘ಭೂ ಪರಿಹಾರ ಸದನ ಸಮಿತಿ ಸಭೆಗಳಿಗೆ ನಿಯಮಿತವಾಗಿ ಹಾಜರಾಗಿ ಅಗತ್ಯ ಮಾಹಿತಿ ನೀಡಿದ್ದರೆ ವರ್ಷಗಳ ಹಿಂದೆಯೇ ಸಮಸ್ಯೆ ಬಗೆಹರಿಯುತ್ತಿತ್ತು. ಅವರಿಗೆ ಸ್ಥಳೀಯ ರೈತರ ಸಮಸ್ಯೆ ಬಗ್ಗೆ ಅರಿವಿಲ್ಲ’ ಎಂದು ಟೀಕಿಸಿದರು.</p>.<p>‘ರೈತರ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲು ಸಿದ್ದಗಂಗಾ ಶ್ರೀಗಳ ಮೂಲಕ ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ. ಎರಡು ತಿಂಗಳು ಕಳೆದರೂ ಫಲಪ್ರದವಾಗಿಲ್ಲ. ಉಪಮುಖ್ಯಮಂತ್ರಿ ಸೇರಿದಂತೆ ಸಂಬಂಧಿಸಿದ ಯಾವುದೇ ಸಚಿವರು ಸ್ಪಂದಿಸುತ್ತಿಲ್ಲ’ ಎಂದು ದೂರಿದರು.</p>.<p>ರೈತರ ಹಿತಾಸಕ್ತಿಗಾಗಿ ಯಡಿಯೂರಪ್ಪ, ದೇವೇಗೌಡರು ಮತ್ತೆ ಪ್ರತಿಭಟನೆಗೆ ಬರಬೇಕು ಎಂದು ಆಗ್ರಹಿಸಿದರು. ಸಮಸ್ಯೆ ಬಗೆ ಹರಿಯದಿದ್ದಲ್ಲಿ ಮುಂದಿನ ತಿಂಗಳು ನೈಸ್ ಟೋಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಗುವುದು, ಪರಿಹಾರ ದೊರಕದ ರೈತರ ಭೂಮಿಗೆ ಕಾಂಪೌಂಡ್ ಹಾಕಲಾಗುವುದು ಎಂದು ಎಚ್ಚರಿಸಿದರು.</p>.<p><strong>ಯಾರನ್ನು ನಂಬಬೇಕು?</strong></p><p>ಟೋಲ್ ಮೂಲಕ ನೈಸ್ ಸಂಸ್ಥೆ ಪ್ರತಿ ದಿನ ₹ 2.5 ಕೋಟಿ ಆದಾಯ ಗಳಿಸುತ್ತಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದರು. ₹ 10 ಕೋಟಿ ಆದಾಯ ಗಳಿಸುತ್ತಿದೆ ಎಂದು ಶಾಸಕರು ಸುಳಿವು ನೀಡಿದ್ದಾರೆ. ರೈತರು ಶಾಸಕರ ಮಾತನ್ನು ನಂಬಬೇಕೋ, ಮಾಜಿ ಪ್ರಧಾನಿಯನ್ನು ನಂಬಬೇಕೋ ತಿಳಿಯದಾಗಿದೆ ಎಂದು ಎಂ. ರುದ್ರೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ‘ಶಾಸಕ ಎಸ್.ಟಿ.ಸೋಮಶೇಖರ್ ತಮ್ಮ ಹಿಂಬಾಲಕರ ಹಿತಾಸಕ್ತಿಗಾಗಿ ನೈಸ್ ವಿಚಾರ ಪ್ರಸ್ತಾಪಿಸಿದ್ದಾರೆ. ರೈತರ ಲಾಭಕ್ಕಾಗಿ ಅಲ್ಲ’ ಎಂದು ಕೆಆರ್ಐಡಿಎಲ್ ಮಾಜಿ ಅಧ್ಯಕ್ಷ ಎಂ. ರುದ್ರೇಶ್ ಆರೋಪಿಸಿದರು.</p>.<p>‘ಟೋಲ್ ಮೂಲಕ ನೈಸ್ ಸಂಸ್ಥೆಯು ಸಾರ್ವಜನಿಕರಿಂದ ಅಕ್ರಮವಾಗಿ ಹಣ ಸಂಗ್ರಹ ಮಾಡುತ್ತಿದೆ. ಸರ್ಕಾರ ಈ ರಸ್ತೆಯನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು’ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಸದನದಲ್ಲಿ ಆಗ್ರಹಿಸಿದ್ದರು.</p>.<p>ಈ ಬಗ್ಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ರುದ್ರೇಶ್ ಪ್ರತಿಕ್ರಿಯಿಸಿ, ‘ಭೂ ಪರಿಹಾರ ಸದನ ಸಮಿತಿ ಸಭೆಗಳಿಗೆ ನಿಯಮಿತವಾಗಿ ಹಾಜರಾಗಿ ಅಗತ್ಯ ಮಾಹಿತಿ ನೀಡಿದ್ದರೆ ವರ್ಷಗಳ ಹಿಂದೆಯೇ ಸಮಸ್ಯೆ ಬಗೆಹರಿಯುತ್ತಿತ್ತು. ಅವರಿಗೆ ಸ್ಥಳೀಯ ರೈತರ ಸಮಸ್ಯೆ ಬಗ್ಗೆ ಅರಿವಿಲ್ಲ’ ಎಂದು ಟೀಕಿಸಿದರು.</p>.<p>‘ರೈತರ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲು ಸಿದ್ದಗಂಗಾ ಶ್ರೀಗಳ ಮೂಲಕ ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ. ಎರಡು ತಿಂಗಳು ಕಳೆದರೂ ಫಲಪ್ರದವಾಗಿಲ್ಲ. ಉಪಮುಖ್ಯಮಂತ್ರಿ ಸೇರಿದಂತೆ ಸಂಬಂಧಿಸಿದ ಯಾವುದೇ ಸಚಿವರು ಸ್ಪಂದಿಸುತ್ತಿಲ್ಲ’ ಎಂದು ದೂರಿದರು.</p>.<p>ರೈತರ ಹಿತಾಸಕ್ತಿಗಾಗಿ ಯಡಿಯೂರಪ್ಪ, ದೇವೇಗೌಡರು ಮತ್ತೆ ಪ್ರತಿಭಟನೆಗೆ ಬರಬೇಕು ಎಂದು ಆಗ್ರಹಿಸಿದರು. ಸಮಸ್ಯೆ ಬಗೆ ಹರಿಯದಿದ್ದಲ್ಲಿ ಮುಂದಿನ ತಿಂಗಳು ನೈಸ್ ಟೋಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಗುವುದು, ಪರಿಹಾರ ದೊರಕದ ರೈತರ ಭೂಮಿಗೆ ಕಾಂಪೌಂಡ್ ಹಾಕಲಾಗುವುದು ಎಂದು ಎಚ್ಚರಿಸಿದರು.</p>.<p><strong>ಯಾರನ್ನು ನಂಬಬೇಕು?</strong></p><p>ಟೋಲ್ ಮೂಲಕ ನೈಸ್ ಸಂಸ್ಥೆ ಪ್ರತಿ ದಿನ ₹ 2.5 ಕೋಟಿ ಆದಾಯ ಗಳಿಸುತ್ತಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದರು. ₹ 10 ಕೋಟಿ ಆದಾಯ ಗಳಿಸುತ್ತಿದೆ ಎಂದು ಶಾಸಕರು ಸುಳಿವು ನೀಡಿದ್ದಾರೆ. ರೈತರು ಶಾಸಕರ ಮಾತನ್ನು ನಂಬಬೇಕೋ, ಮಾಜಿ ಪ್ರಧಾನಿಯನ್ನು ನಂಬಬೇಕೋ ತಿಳಿಯದಾಗಿದೆ ಎಂದು ಎಂ. ರುದ್ರೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>