ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಆನಂದ್ ಕೆ. ಮಂಡ್ಯ, ‘ರಾಜ್ಯದಲ್ಲಿ ಸಮಾರು 60 ಲಕ್ಷ ಮಂದಿ ಗಾಣಿಗ ಸಮುದಾಯದವರಿದ್ದು, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ನಮ್ಮ ಹೋರಾಟಕ್ಕೆ ಮಣಿದ ಹಿಂದಿನ ಬಿಜೆಪಿ ಸರ್ಕಾರ, 2023ರ ಫೆ.20ರಂದು ನಿಗಮ ಸ್ಥಾಪಿಸಿ ಆದೇಶ ಹೊರಡಿಸಿತ್ತು. ನಿಗಮದ ನೋಂದಣಿ ಸೇರಿ ವಿವಿಧ ಪ್ರಕ್ರಿಯೆಗಳು ನಡೆದಿಲ್ಲ. ಈ ಬಗ್ಗೆ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಶಾಂತಿಯುತ ಪ್ರತಿಭಟನೆ ಕೈಗೊಂಡಿದ್ದೇವೆ’ ಎಂದು ಹೇಳಿದರು.