ಕೇಂದ್ರ ಸ್ಥಾಪನೆಗೆ ಜಾಗ ನೀಡಿ: ನಿಮ್ಹಾನ್ಸ್ನ ಸ್ನಾತಕೋತ್ತರ ತರಬೇತಿ ಸಂಸ್ಥೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗಾಗಲೇ 30 ಎಕರೆ ಪ್ರದೇಶ ನೀಡಿದೆ. 10 ಎಕರೆ ಹೆಚ್ಚುವರಿ ಭೂಮಿಯನ್ನು ಹಸ್ತಾಂತರ ಮಾಡಬೇಕು ಎಂಬ ಸಂಸ್ಥೆಯ ನಿರ್ದೇಶಕ ಡಾ.ಬಿ.ಎನ್. ಗಂಗಾಧರ್ ಅವರ ಮನವಿಯ ಬಗ್ಗೆ ಪ್ರಸ್ತಾಪಿಸಿದ ಡಾ. ಹರ್ಷವರ್ಧನ್, ‘ರಾಜ್ಯ ಸರ್ಕಾರ ಅಗತ್ಯ ಭೂಮಿಯನ್ನು ನೀಡಲು ಕ್ರಮ ಕೈಗೊಳ್ಳಬೇಕು. 10 ಎಕರೆ ಜತೆಗೆ ಇನ್ನೂ 50 ಎಕರೆ ಪ್ರದೇಶವನ್ನು ಒದಗಿಸಲಿ. ಕೇಂದ್ರಕ್ಕೆ ಬೇಕಾದ ಅನುದಾನವನ್ನು ಕೇಂದ್ರ ಸರ್ಕಾರ ನೀಡಲಿದೆ’ ಎಂದು ಭರವಸೆ ನೀಡಿದರು.