<p><strong>ಬೆಂಗಳೂರು</strong>: ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ಶಾಖೆಯನ್ನು ಉತ್ತರ ಬೆಂಗಳೂರಿನಲ್ಲಿ ಪ್ರಾರಂಭಿಸಲಾಗುತ್ತಿದ್ದು, ಒಂದು ವರ್ಷದಲ್ಲಿ ಕಟ್ಟಡ ತಲೆಯೆತ್ತಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದರ ಶಂಕುಸ್ಥಾಪನೆಯನ್ನು ಶುಕ್ರವಾರ ನೆರವೇರಿಸಿದರು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಎಲ್ಲ ರೀತಿಯಲ್ಲಿಯೂ ಸಹಕಾರ ನೀಡಲಿದೆ‘ ಎಂದರು.</p>.<p>ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ‘ಸದ್ಯದ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯ ಚಿಕಿತ್ಸಾ ಸೇವೆಯನ್ನು<br />ವಿಸ್ತರಿಸಬೇಕಾದ ಅಗತ್ಯ ಇದೆ' ಎಂದರು.</p>.<p class="Subhead"><strong>ಇ–ಮನಸ್ ತಂತ್ರಾಂಶ:</strong> ಮಾನಸಿಕ ಆರೋಗ್ಯ ಸೇವೆ ನಿರ್ವಹಿಸಲು ಐಐಐಟಿ ಬೆಂಗಳೂರು ಹಾಗೂ ನಿಮ್ಹಾನ್ಸ್ ಸಂಸ್ಥೆ ಸಹಯೋಗದಲ್ಲಿ ರಾಜ್ಯ ಸರ್ಕಾರ ಐಟಿ ಆಧಾರಿತ ಡಿಜಿಟಲ್ ವೇದಿಕೆ ಅಭಿವೃದ್ಧಿಪಡಿಸಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಮಾನಸಿಕ ಆರೋಗ್ಯ ನಿರ್ವಹಣಾ ವ್ಯವಸ್ಥೆಗೆ (ಇ–ಮನಸ್) ಚಾಲನೆ ನೀಡಲಾಯಿತು. ಈ ತಂತ್ರಾಂಶದ ಮೂಲಕ ಆಸ್ಪತ್ರೆಗಳು ಹಾಗೂ ಮಾನಸಿಕ ಆರೋಗ್ಯ ತಜ್ಞರು ಹೆಸರು ನೋಂದಾಯಿಸಿಕೊಂಡು ಸೇವೆ ನೀಡಬಹುದು.</p>.<p>‘ಮಾನಸಿಕ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಇ–ಮನಸ್ ತಂತ್ರಾಂಶದಿಂದ ಸುಲಭವಾಗಿ ಸೇವೆ ಸಿಗಲಿದೆ’ ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ಶಾಖೆಯನ್ನು ಉತ್ತರ ಬೆಂಗಳೂರಿನಲ್ಲಿ ಪ್ರಾರಂಭಿಸಲಾಗುತ್ತಿದ್ದು, ಒಂದು ವರ್ಷದಲ್ಲಿ ಕಟ್ಟಡ ತಲೆಯೆತ್ತಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದರ ಶಂಕುಸ್ಥಾಪನೆಯನ್ನು ಶುಕ್ರವಾರ ನೆರವೇರಿಸಿದರು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಎಲ್ಲ ರೀತಿಯಲ್ಲಿಯೂ ಸಹಕಾರ ನೀಡಲಿದೆ‘ ಎಂದರು.</p>.<p>ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ‘ಸದ್ಯದ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯ ಚಿಕಿತ್ಸಾ ಸೇವೆಯನ್ನು<br />ವಿಸ್ತರಿಸಬೇಕಾದ ಅಗತ್ಯ ಇದೆ' ಎಂದರು.</p>.<p class="Subhead"><strong>ಇ–ಮನಸ್ ತಂತ್ರಾಂಶ:</strong> ಮಾನಸಿಕ ಆರೋಗ್ಯ ಸೇವೆ ನಿರ್ವಹಿಸಲು ಐಐಐಟಿ ಬೆಂಗಳೂರು ಹಾಗೂ ನಿಮ್ಹಾನ್ಸ್ ಸಂಸ್ಥೆ ಸಹಯೋಗದಲ್ಲಿ ರಾಜ್ಯ ಸರ್ಕಾರ ಐಟಿ ಆಧಾರಿತ ಡಿಜಿಟಲ್ ವೇದಿಕೆ ಅಭಿವೃದ್ಧಿಪಡಿಸಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಮಾನಸಿಕ ಆರೋಗ್ಯ ನಿರ್ವಹಣಾ ವ್ಯವಸ್ಥೆಗೆ (ಇ–ಮನಸ್) ಚಾಲನೆ ನೀಡಲಾಯಿತು. ಈ ತಂತ್ರಾಂಶದ ಮೂಲಕ ಆಸ್ಪತ್ರೆಗಳು ಹಾಗೂ ಮಾನಸಿಕ ಆರೋಗ್ಯ ತಜ್ಞರು ಹೆಸರು ನೋಂದಾಯಿಸಿಕೊಂಡು ಸೇವೆ ನೀಡಬಹುದು.</p>.<p>‘ಮಾನಸಿಕ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಇ–ಮನಸ್ ತಂತ್ರಾಂಶದಿಂದ ಸುಲಭವಾಗಿ ಸೇವೆ ಸಿಗಲಿದೆ’ ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>