<p><strong>ಬೆಂಗಳೂರು:</strong> ತಂತ್ರಜ್ಞಾನ ಆಧಾರಿತ ಮಾನಸಿಕ ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ಜತೆಗೆ ಎಚ್ಎಲ್ಎಲ್ ಲೈಫ್ಕೇರ್ ಲಿಮಿಟೆಡ್ ಒಡಂಬಡಿಕೆ ಮಾಡಿಕೊಂಡಿದೆ.</p>.<p>ಮಾನಸಿಕ ಆರೋಗ್ಯ ಬಲಪಡಿಸುವುದು ಈ ಒಡಂಬಡಿಕೆಯ ಉದ್ದೇಶವಾಗಿದೆ. ಈ ಒಡಂಬಡಿಕೆಯಡಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಆರೋಗ್ಯ ವೃತ್ತಿಪರರಿಗೆ ಸಾಮರ್ಥ್ಯ ವೃದ್ಧಿಸುವುದು, ಮಾನಸಿಕ ಆರೋಗ್ಯ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಮಾನಸಿಕ ಆರೋಗ್ಯ ನೀತಿಗಳನ್ನು ರೂಪಿಸಲು ಈ ಒಪ್ಪಂದ ಸಹಕಾರಿ ಎಂದು ಸಂಸ್ಥೆ ತಿಳಿಸಿದೆ.</p>.<p>ಕೌಟುಂಬಿಕ ಸಮಸ್ಯೆ, ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟ, ಶೈಕ್ಷಣಿಕ ಒತ್ತಡ ಸೇರಿ ವಿವಿಧ ಕಾರಣಗಳಿಂದ ಎಲ್ಲ ವಯೋಮಾನದವರು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಈ ಸಮಸ್ಯೆಗಳ ನಿವಾರಣೆಗೆ ತಂತ್ರಜ್ಞಾನ ಆಧಾರಿತ ಪರಿಹಾರೋಪಾಯ ಕಂಡುಕೊಳ್ಳಲು ಈ ಒಡಂಬಡಿಕೆ ಸಹಕಾರಿ ಎಂದು ಎಚ್ಎಲ್ಎಲ್ ಲೈಫ್ಕೇರ್ ಲಿಮಿಟೆಡ್ ಉಪಾಧ್ಯಕ್ಷ (ಮಾರುಕಟ್ಟೆ) ಉನ್ನಿಕೃಷ್ಣನ್ ಎಸ್.ಎಂ. ತಿಳಿಸಿದರು.</p>.<p>ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ, ಪ್ರಾಧ್ಯಾಪಕ ಡಾ.ಸಿ.ನವೀನ್ ಕುಮಾರ್, ಎಚ್ಎಲ್ಎಲ್ ಲೈಫ್ಕೇರ್ ಲಿಮಿಟೆಡ್ ವ್ಯವಸ್ಥಾಪಕ ಜಗದೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತಂತ್ರಜ್ಞಾನ ಆಧಾರಿತ ಮಾನಸಿಕ ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ಜತೆಗೆ ಎಚ್ಎಲ್ಎಲ್ ಲೈಫ್ಕೇರ್ ಲಿಮಿಟೆಡ್ ಒಡಂಬಡಿಕೆ ಮಾಡಿಕೊಂಡಿದೆ.</p>.<p>ಮಾನಸಿಕ ಆರೋಗ್ಯ ಬಲಪಡಿಸುವುದು ಈ ಒಡಂಬಡಿಕೆಯ ಉದ್ದೇಶವಾಗಿದೆ. ಈ ಒಡಂಬಡಿಕೆಯಡಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಆರೋಗ್ಯ ವೃತ್ತಿಪರರಿಗೆ ಸಾಮರ್ಥ್ಯ ವೃದ್ಧಿಸುವುದು, ಮಾನಸಿಕ ಆರೋಗ್ಯ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಮಾನಸಿಕ ಆರೋಗ್ಯ ನೀತಿಗಳನ್ನು ರೂಪಿಸಲು ಈ ಒಪ್ಪಂದ ಸಹಕಾರಿ ಎಂದು ಸಂಸ್ಥೆ ತಿಳಿಸಿದೆ.</p>.<p>ಕೌಟುಂಬಿಕ ಸಮಸ್ಯೆ, ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟ, ಶೈಕ್ಷಣಿಕ ಒತ್ತಡ ಸೇರಿ ವಿವಿಧ ಕಾರಣಗಳಿಂದ ಎಲ್ಲ ವಯೋಮಾನದವರು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಈ ಸಮಸ್ಯೆಗಳ ನಿವಾರಣೆಗೆ ತಂತ್ರಜ್ಞಾನ ಆಧಾರಿತ ಪರಿಹಾರೋಪಾಯ ಕಂಡುಕೊಳ್ಳಲು ಈ ಒಡಂಬಡಿಕೆ ಸಹಕಾರಿ ಎಂದು ಎಚ್ಎಲ್ಎಲ್ ಲೈಫ್ಕೇರ್ ಲಿಮಿಟೆಡ್ ಉಪಾಧ್ಯಕ್ಷ (ಮಾರುಕಟ್ಟೆ) ಉನ್ನಿಕೃಷ್ಣನ್ ಎಸ್.ಎಂ. ತಿಳಿಸಿದರು.</p>.<p>ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ, ಪ್ರಾಧ್ಯಾಪಕ ಡಾ.ಸಿ.ನವೀನ್ ಕುಮಾರ್, ಎಚ್ಎಲ್ಎಲ್ ಲೈಫ್ಕೇರ್ ಲಿಮಿಟೆಡ್ ವ್ಯವಸ್ಥಾಪಕ ಜಗದೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>